Homeಮುಖಪುಟಮೃತ ವ್ಯಕ್ತಿಯ ಮೊಬೈಲ್‌ ಕದ್ದು ಸಿಕ್ಕಿಬಿದ್ದ ಸಬ್‌ಇನ್‌ಸ್ಪೆಕ್ಟರ್ ಸಸ್ಪೆಂಡ್‌

ಮೃತ ವ್ಯಕ್ತಿಯ ಮೊಬೈಲ್‌ ಕದ್ದು ಸಿಕ್ಕಿಬಿದ್ದ ಸಬ್‌ಇನ್‌ಸ್ಪೆಕ್ಟರ್ ಸಸ್ಪೆಂಡ್‌

- Advertisement -
- Advertisement -

ಮೃತ ವ್ಯಕ್ತಿಯ ಮೊಬೈಲ್‌ ಕದ್ದು, ಸಿಕ್ಕಿಬಿದ್ದ ಪೊಲೀಸ್‌ ಸಬ್‌‌ ಇನ್‌ಸ್ಪೆಕ್ಟರ್‌ ಒಬ್ಬರನ್ನು ಕೇರಳ ರಾಜ್ಯ ಸರ್ಕಾರ ಅಮಾನತು ಮಾಡಿದೆ.

ರೈಲು ಅಪಘಾತದಲ್ಲಿ ಮೃತಪಟ್ಟಿದ್ದ ಯುವಕನ ಮೊಬೈಲ್‌ ಅನ್ನು ಚತ್ತನ್ನೂರ್‌‌ನ ಕೋಲಂನಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿದ್ದ ಜ್ಯೋತಿ ಸುಧಾಕರ್‌‌ ಕದ್ದಿದ್ದರು. ಇವರು ಈ ಹಿಂದೆ ತಿರುವನಂತಪುರಂನ ಮಂಗಲಪುರಂ ಪೊಲೀಸ್‌ ಠಾಣೆಯಲ್ಲಿ ಎಸ್‌ಐ ಆಗಿ ಸೇವೆ ಸಲ್ಲಿಸಿದ್ದರು. ತಿರುವನಂತಪುರಂನ ಪೆರುಬಂತ್ತೂರ್‌ ನಿವಾಸಿ ಸ್ಲೈನ್‌‌ ಅರುಣ್‌ ಜೆರ್‍ರಿ ಅವರು ಈ ಹಿಂದೆ ಮೃತಪಟ್ಟಿದ್ದರು. ತನಿಖೆ ವೇಳೆ ಸಿಕ್ಕಿದ್ದ ಮೊಬೈಲ್‌ಗೆ ಸುಧಾಕರ್‌ ತನ್ನ ನಂಬರ್‌‌ ಹಾಕಿಕೊಂಡು ಬಳಸುತ್ತಿದ್ದರು.

ಟ್ರೈನ್‌ಗೆ ಸಿಲುಕಿ ಜೆರ್‍ರಿ ಜೂನ್‌ 18, 2021ರಂದು ಸಾವನ್ನಪ್ಪಿದ್ದರು. ಜೆರ್‍ರಿಯ ಸಂಬಂಧಿಕರು ಮೃತದೇಹವನ್ನು ವಶಕ್ಕೆ ಪಡೆಯಲು ಬಂದಾಗ, ಮೊಬೈಲ್‌ ಸೇರಿದಂತೆ ಹಲವು ವಸ್ತುಗಳು ಕಾಣೆಯಾಗಿದ್ದವು. ಟ್ರೈನ್‌ ಅಡಿ ಸುಲುಕಿ ಈ ಎಲ್ಲ ವಸ್ತುಗಳು ನಾಶವಾಗಿವೆ ಎಂದು ಪೊಲೀಸರು ಹೇಳಿದ್ದರು. ಅದಾಗ್ಯೂ ಮೊಬೈಲ್‌ ಕಳೆದುಹೋಗಿರುವ ಸಂಬಂಧ, ಜೆರ್‍ರಿ ಸಂಬಂಧಿಕರು ಕೇರಳ ಡಿಜಿಪಿ ಹಾಗೂ ಸೈಬರ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಕೇರಳ ಸೈಬರ್‌ ಪೊಲೀಸರು ಈ ಮೊಬೈಲ್‌ ಚತ್ತನ್ನೂರ್‌ನಲ್ಲಿ ಆಕ್ಟೀವ್‌ ಆಗಿರುವುದನ್ನು ಪತ್ತೆ ಹಚ್ಚಿದ್ದಾರೆ. ಹೆಚ್ಚಿನ ತನಿಖೆ ನಡೆಸಿದಾಗ ಈ ಪೋನ್‌ ಅನ್ನು ಇನ್‌ಸ್ಪೆಕ್ಟರ್‌ ಸುಧಾಕರ್‌ ಬಳಸುತ್ತಿರುವುದನ್ನು ಸೈಬರ್‌‌ ಪೊಲೀಸರು ದೃಢಪಡಿಸಿದ್ದಾರೆ.

ಜೆರ್‍ರಿ ಸಾವಿನ ವಿಚಾರಣೆಯನ್ನು ಮಂಗಲಪುರಂ ಎಸ್‌ಐ ಆಗಿದ್ದ ಸುಧಾಕರ್ ಅವರ ನೇತೃತ್ವದಲ್ಲಿ ನಡೆಸಲಾಗಿತ್ತು. ವಿಚಾರಣೆ ವೇಳೆ ಸುಧಾರಕ್‌ ಮೊಬೈಲ್‌ ಕದ್ದಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಪತ್ತೆಯಾಗಿದ್ದ ವಸ್ತುಗಳ ದಾಖಲೆ ಸಂಗ್ರಹದಲ್ಲಿ ಮೊಬೈಲ್‌ ಅನ್ನು ಸೇರಿಸಿರಲಿಲ್ಲ. ಜ್ಯೋತಿ ಸುಧಾಕರ್‌ ವಿರುದ್ಧ ಹೆಚ್ಚಿನ ತನಿಖೆ ನಡೆಸಲು ತಿರುವನಂತಪುರ ಡಿಐಜಿ ಸೂಚಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿರಿ: ಕೇರಳದ ಮೂವರು ಮಹಿಳೆಯರನ್ನು ಬಂಧಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...