Homeಕರ್ನಾಟಕಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ದುರ್ಯೋಧನ ಎನ್ನುವುದು ಬೈಗುಳವೇ? CRPC ಅಥವಾ IPC ಯ ಯಾವ ಸೆಕ್ಷನ್ ಪ್ರಕಾರ ಇದು ಬೈಗುಳ? ಸರಕಾರ ದುರ್ಯೋಧನನಂತೆ ವರ್ತಿಸುತ್ತಿದೆ ಎನ್ನುವುದು ಒಬ್ಬ ಘನತೆವೆತ್ತ ಸಾಹಿತಿ ಬಳಸಬಹುದಾದ ಅತ್ಯಂತ ಸಭ್ಯ ಕನ್ನಡ- ಬಿ ಎಂ ಹನೀಫ್

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸಿದರು ಎನ್ನುವ ಕಾರಣಕ್ಕೆ 85 ವರ್ಷದ ಹಿರಿಯ ಸಾಹಿತಿ, ನಾಡೋಜ ಹಂ.ಪ.ನಾಗರಾಜಯ್ಯ (ಹಂಪನಾ) ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಆತಂಕಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ.

“ಜನವರಿ 17 ರಂದು ಮಂಡ್ಯದಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ಹಂಪನಾ, ಕೃಷಿ ಕಾನೂನುಗಳ ಬಗ್ಗೆ ಭಾಷಣ ಮಾಡುತ್ತಾ ಮೋದಿ ಸರ್ಕಾರವನ್ನು ಟೀಕಿಸಿದ್ದರು. ಕಳೆದ ಹಲವು ದಿನಗಳಿಂದ ರೈತರು ಚಳಿ-ಮಳೆಯನ್ನು ಲೆಕ್ಕಿಸದೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸೌಜನ್ಯಕ್ಕಾದರೂ ಪ್ರಧಾನಿಯವರು ರೈತರನ್ನು ಭೇಟಿ ಮಾಡಿ ಮಾತನಾಡಬಾರದೇ? ಸರ್ಕಾರ ದುರ್ಯೋಧನನಂತೆ ವರ್ತಿಸುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದರು. ಅದೇ ಕಾರಣಕ್ಕೆ ಅವರನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ ಎಂದು ಹಂಪನಾ ಅವರ ಮಗಳು ಆರತಿ ಹಂಪನಾ ನಾನುಗೌರಿ.ಕಾಂಗೆ ತಿಳಿಸಿದರು.

“ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರಿಬ್ಬರು ಮಂಡ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಂತೆ. ಈ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿಯನ್ನು ಬೆಂಗಳೂರಿನಿಂದ ಮಂಡ್ಯದವರೆಗೆ ಕರೆಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕನಿಷ್ಟ ಎಫ್‌ಐಆರ್ ಕೂಡ ದಾಖಲಾಗಿಲ್ಲದಿರುವಾಗ, ಇದನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಿ ಹಂಪನಾ ಅವರನ್ನು ಠಾಣೆಯವರೆಗೆ ಕರೆಸಿಕೊಳ್ಳುವ ಅಗತ್ಯ ಏನಿತ್ತು? ಇದು ನಿಜಕ್ಕೂ ಪೊಲೀಸ್ ರಾಜ್ಯದ ದಬ್ಬಾಳಿಕೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ ಪ್ರಕರಣ: ಗುತ್ತಿಗೆದಾರ ಸೇರಿದಂತೆ ಮೂವರ ಬಂಧನ

ಮಂಡ್ಯ ಪೊಲೀಸರ ಈ ಕ್ರಮದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂತಹ ಸಂವೇದನಾರಹಿತ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಾಡಿನ ಹತ್ತಾರು ಸಾಹಿತಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಸಾಹಿತಿಗಳಾದ ಅಬ್ಬೂರು ರಾಜಶೇಖರ್, “ಹೃದಯ, ಮಿದುಳು ಇಲ್ಲದ ಸರ್ಕಾರ ನಾಡಿನ ವಿದ್ವಾಂಸರನ್ನೂ ಪೊಲೀಸ್ ಠಾಣೆಗೆ ಕರೆಸುವ ಹೀನಕೃತ್ಯಕ್ಕೆ ಇಳಿದಿದೆ. ಹಂಪನಾ ಅವರು ರೈತ ವಿರೋಧಿ ನಿಲುವನ್ನು ಟೀಕಿಸಿದ್ದು ಘೋರ ಅಪರಾಧ! ಇಂತಹ ಸರ್ವಾಧಿಕಾರಿ ಸರ್ಕಾರದ ನೀತಿಗೆ ಧಿಕ್ಕಾರ. ಅತ್ಯಂತ ಖಂಡನಾರ್ಹ ಘಟನೆ” ಎಂದು ಕಿಡಿಕಾರಿದ್ದಾರೆ.

ಮತ್ತೊಬ್ಬ ಸಾಹಿತಿಗಳಾದ ಲಕ್ಷ್ಮಣ ಕೊಡಸೆ, “ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ಹಂಪನಾ ಅವರನ್ನು ಯಾರೋ ದೂರು ನೀಡಿದರೆಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಹೇಳಿಕೆ ದಾಖಲು ಮಾಡಿಕೊಂಡಿದ್ದು ಆಡಳಿತ ವ್ಯವಸ್ಥೆಯ ಕ್ರೌರ್ಯ. ನಾಚಿಕೆಗೇಡಿನ ಈ ದುರ್ವರ್ತನೆಗೆ ಹಂಪನಾ ಅವರಿಂದ ಪಾಠ ಹೇಳಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ವಿದ್ವಾಂಸರ ಬಗ್ಗೆ ಗೌರವ ಇದ್ದರೆ ಇಬ್ಬರೂ ಹಂಪನಾ ಅವರ ಬಳಿ ಕ್ಷಮೆ ಕೋರಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ ಎಂ ಹನೀಫ್, “ದುರ್ಯೋಧನ ಎನ್ನುವುದು ಬೈಗುಳವೇ? CRPC ಅಥವಾ IPC ಯ ಯಾವ ಸೆಕ್ಷನ್ ಪ್ರಕಾರ ಇದು ಬೈಗುಳ? ಸರಕಾರ ದುರ್ಯೋಧನನಂತೆ ವರ್ತಿಸುತ್ತಿದೆ ಎನ್ನುವುದು ಒಬ್ಬ ಘನತೆವೆತ್ತ ಸಾಹಿತಿ ಬಳಸಬಹುದಾದ ಅತ್ಯಂತ ಸಭ್ಯ ಕನ್ನಡ. ಹಂಪನಾ ಅವರಿಗೆ ಆಗಿರುವ ಅವಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಮತ್ತು ಕನ್ನಡದ ಎಲ್ಲ ಸಾಹಿತಿಗಳಿಗೆ ಅವಮಾನ” ಎಂದು ಖಂಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಪೊಲೀಸರ ಈ ನಡೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!


ಇದನ್ನೂ ಓದಿ: ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಂಪನಾರನ್ನು ವಿಚಾರಣೆಗೆ ಒಳಪಡಿಸಿದ್ದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದು ಕಂಡನಾರ್ಹ.

  2. ದೇಶಭಕ್ತರ‌ ಕಣ್ಣಿಗೆ ‘ಕಂಡೋರೆಲ್ಲಾ’ ದೇಶದ್ರೋಹಿಗಳಂತೆ ಕಾಣುವಂತಾಗಿದ್ದು ವಿಶ್ವಗುರು ನಾಡಿನ ಹಿರಿಮೆ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...