Homeಮುಖಪುಟಅಸಮಾನತೆ ಪೋಷಣೆಗೆ ಪೊಲೀಸರು

ಅಸಮಾನತೆ ಪೋಷಣೆಗೆ ಪೊಲೀಸರು

- Advertisement -
- Advertisement -

ಒಂದು ಊರಲ್ಲಿ ಅಣ್ಣ ಮತ್ತು ತಮ್ಮನ ಮಧ್ಯೆ ಎಂತಹದೋ ಗಲಾಟೆ. ಅಣ್ಣ ಹಣದಲ್ಲಿ ಮುಂದಿದ್ದ. ತಮ್ಮ ಕೂಲಿ ಕೆಲಸ. ತಮ್ಮನಿಗೆ ಬುದ್ಧಿ ಕಲಿಸಬೇಕು ಅಂತ ತನಗೆ ಗೊತ್ತಿರುವ ಪೊಲೀಸ್‌ಗೆ ಅಣ್ಣ ಒಂದಿಷ್ಟು ದುಡ್ಡು ಕೊಟ್ಟ. ಪೊಲೀಸರು ತಮ್ಮನನ್ನು ಜೀಪಲ್ಲಿ ಕರ್‍ಕೊಂಡು ಹೋದರು. ಏನು ಮಾಡಿದ್ರು ಗೊತ್ತಿಲ್ಲ. ಆದರೆ ಸ್ವಲ್ಪ ಹೊತ್ತಿನ ನಂತರ ತಮ್ಮನ ಹೆಂಡತಿಗೆ ಮಾಹಿತಿ ಬಂತು. ಅವರು ಪೊಲೀಸ್ ಸ್ಟೇಷನ್‌ಗೆ ಹೋಗಿ ನೋಡುವಷ್ಟರಲ್ಲಿ ಗಂಡ ರಕ್ತ ವಾಂತಿ ಮಾಡಿಕೊಂಡಿದ್ದರು. “ಏನೋ ತಿಂದು ಬಂದಿದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗು” ಎಂದು ಪೊಲೀಸರು ತಾಕೀತು ಮಾಡಿದರು. ಆ ನಂತರ ಕೆಲವೇ ನಿಮಿಷಗಳಲ್ಲಿ ಆತನ ಪ್ರಾಣ ಹೋಯ್ತು.

ಇನ್ನೊಂದು ಊರಲ್ಲಿ ಒಂದು ಕೊಲೆ. ಆರೋಪಿಗಳ ಹುಡುಕಾಟದಲ್ಲಿ ಪೊಲೀಸರು. ಒಬ್ಬ ಅಧಿಕಾರಿಗೆ ಅಲ್ಲೊಬ್ಬನ ಮೇಲೆ ಅನುಮಾನ. ಕರೆದುಕೊಂಡು ಬಂದು ಸತತವಾಗಿ ಹದಿನೈದು ದಿನ ವಿಚಾರಣೆ ಮಾಡಿದರು. ಕೊಲೆಗೂ, ತನಗೂ ಏನೂ ಸಂಬಂಧ ಇಲ್ಲ ಅಂತ ಎಷ್ಟು ಬಡ್ಕೊಂಡರೂ ಪೊಲೀಸರು ಕೇಳಲಿಲ್ಲ. ಆಮೇಲೆ ಇನ್ನೊಬ್ಬ ಅಧಿಕಾರಿ ’ಇಲ್ಲಿದಾನೆ ನಿಜ ಆರೋಪಿ. ಅವನನ್ನು ಬಿಟ್ಟುಬಿಡಿ’ ಅಂದರು. ಆ ಹದಿನೈದು ದಿನ ಆ ಅಮಾಯಕ ಅನುಭವಿಸಿದ ಯಾತನೆ ಯಾವ ಪ್ರಾಣಿಗೂ ಬೇಡ.

ಯಾವುದೇ ತಯಾರಿ ಇಲ್ಲದೆ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ನಂತರ ದೆಹಲಿಯಿಂದ ಕಾರ್ಮಿಕರು ತಮ್ಮ ತವರು ಬಿಹಾರಕ್ಕೆ ಸೈಕಲ್ ತುಳಿಯುತ್ತಾ ಹೊರಟಿದ್ದರು. ಸಾಯೋದಾದ್ರೂ ನಾವು ಊರಿಗೆ ಹೋಗಿ ಅಪ್ಪ, ಅಮ್ಮಂದಿರ ಬಳಿಯೇ ಸಾಯೋಣ ಎಂಬ ನಿರ್ಧಾರ ಅವರದು. ಆದರೆ ಅಲ್ಲೊಂದು ಕಡೆ ಅವರನ್ನು ತಡೆದ ಪೊಲೀಸರು ಹಿಗ್ಗಾಮುಗ್ಗಾ ಬಾರಿಸಿದರು. ’ಲಾಕ್ ಡೌನ್ ಇದೆ. ಯಾಕೋ ಹೊರಗಡೆ ಬಂದ್ರಿ? ನಿಮ್ಮ ಅಮ್ಮಂದಿರಿಗೆ ಗಿರಾಕಿ ಹುಡುಕಿಕೊಂಡು ಹೊರಟಿರೇನೋ..?’ ಎನ್ನುತ್ತಾನೆ ಒಬ್ಬ ಪೊಲೀಸ್. ಇನ್ನೊಂದು ಕಡೆ ಜ್ವರದಿಂದ ಬಳಲುತ್ತಿದ್ದ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಅಪ್ಪನನ್ನು ತಲೆ ಒಡೆದು ರಕ್ತ ಬರುವಂತೆ ಬಾರಿಸಿದರು. ಸಿಟ್ಟಿಗೆದ್ದು ಆತ ತಿರುಗಿಬಿದ್ದು ವಾದಿಸಿದಾಗ, ಪೊಲೀಸರಿಗೆ ಎದುರು ಮಾತನಾಡ್ತೀಯಾ ಎಂದು ಅವನನ್ನು ಬಲವಂತವಾಗಿ ಸ್ಟೇಷನ್‌ಗೆ ಕರೆದುಕೊಂಡು ಮತ್ತಷ್ಟು ಹಿಂಸೆ ನೀಡಿದರು. ಇವರನ್ನೆಲ್ಲಾ ಮನುಷ್ಯರೆನ್ನಬೇಕೆ?

ಹೀಗೆ ಹೇಳುತ್ತಾ ಹೋಗಲು ನೂರು ಘಟನೆಗಳಿವೆ. ಯಾವೂ ಸುಳ್ಳಲ್ಲ. ನಡೆದ ಘಟನೆಗಳಿವು. ನಿವೃತ್ತಿಯಾದ ಅಥವಾ ಆತ್ಮೀಯರಾದ ಕೆಲ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದರೆ ಪೊಲೀಸರ ಕ್ರೂರ ವರ್ತನೆ ಅನಾವರಣಗೊಳಿಸುವ ಮತ್ತಷ್ಟು ಕರಳು ಹಿಂಡುವ ಕತೆಗಳು ಗೊತ್ತಾಗಬಹುದು. ಇನ್ನೊಬ್ಬ ಅಧಿಕಾರಿ ಇದ್ದರು. ಪೊಲೀಸರ ಕೆಲಸಗಳಲ್ಲಿ ಒಂದು ಕಳ್ಳತನ ತಡೆಯುವುದು ತಾನೆ. ಆದರೆ ಆ ಮಹಾಶಯ ತಾನು ಕೆಲಸ ಮಾಡುತ್ತಿದ್ದ ಊರಿನ ಬಸ್ ಸ್ಟಾಂಡ್‌ನಲ್ಲಿ ಪಿಕ್‌ಪಾಕೆಟ್ ಮಾಡಲೆಂದು ನುರಿತ ಕಳ್ಳರಿಗೆ ಆಶ್ರಯ ನೀಡಿ ಸಾಕಿಕೊಂಡಿದ್ದರು. ಅವರು ದಿನವಿಡೀ ಪಿಕ್‌ಪಾಕೆಟ್ ಮಾಡಿ ತಂದಿದ್ದನ್ನು ಪೊಲೀಸ್ ಅಧಿಕಾರಿಗೆ ಕೊಟ್ಟು ತನ್ನ ಪಾಲನ್ನು ಪಡೆಯಬೇಕಿತ್ತು. ಇಂತಹ ಅಧಿಕಾರಿಗಳೂ ಇದ್ದಾರೆ ಎಂದರೆ ಅಚ್ಚರಿ ಪಡಬೇಕಿಲ್ಲ. ಅವರಲ್ಲಿ ಕೆಲವರು ಇನ್ನು ಕೆಲವೇ ವರ್ಷಗಳಲ್ಲಿ ಶಾಸಕರೋ, ಮಂತ್ರಿಗಳೋ ಆಗಿ ಆಯ್ಕೆಯಾಗಬಹುದು.

ಕಳ್ಳರನ್ನು, ಕೊಲೆಗಡುಕರನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಬೇಕಾದ ಇವರೇ ಕ್ರಿಮಿನಲ್‌ಗಳಾಗಿದ್ದಾರೆ. ಅಲ್ಲಲ್ಲಿ ಸಣ್ಣಪುಟ್ಟ ಕಳ್ಳತನ ಮಾಡುವವರನ್ನು ಹಿಡಿದು ಫೋಟೋ ತೆಗೆಸಿಕೊಳ್ಳುವ ಇವರು, ಮತ್ತಾರದೋ ಹಣ ಲಪಟಾಯಿಸಿ ಅದನ್ನೇ ರಾಜಕಾರಣಿಗಳಿಗೆ ಒಪ್ಪಿಸಿ ಆಯಕಟ್ಟಿನ ಜಾಗಕ್ಕೆ ಬರುತ್ತಾರೆ. ಕೆಲವು ತಿಂಗಳುಗಳ ಹಿಂದೆ ಒಂದು ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ಉತ್ತಮ ಜಾಗಕ್ಕಾಗಿ ಕಾಯುತ್ತಿದ್ದ ಒಬ್ಬ ಅಧಿಕಾರಿ ಹೇಳಿದ್ದು, “ಈಗಿನ ಶಾಸಕರು ಈ ಹಿಂದೆ ಕೇವಲ ಕಾರ್ಯಕರ್ತರಾಗಿದ್ದಾಗ ಒಂದು ಪ್ರಕರಣದಲ್ಲಿ ನಾನು ಸಹಾಯ ಮಾಡಿದ್ದೆ. ಹಾಗಾಗಿ ನನಗೆ ಆ ಸ್ಟೇಷನ್ ಮಾಡಿಸಿಕೊಡ್ತೀನಿ ಎಂದು ಮಾತು ಕೊಟ್ಟಿದ್ದಾರೆ”. ಆ ಆಡಿಯೋ ಸರಕಾರದ ಗಮನಕ್ಕೆ ಬಂತು. ಆದರೆ ಏನಾಯ್ತು? ಕೆಲವೇ ದಿನಗಳಲ್ಲಿ ಆ ಅಧಿಕಾರಿ ತಾನು ನಿರೀಕ್ಷಿಸಿದ್ದ ಅದೇ ಠಾಣೆಗೆ ನೇಮಕಗೊಂಡರು.

ಕನಿಷ್ಟ ಲಜ್ಜೆ ಇಲ್ಲದ ಹಾಗೂ ಈ ನೆಲದ ಕಾನೂನಿಗೆ ಗೌರವ ಕೊಡದ ತುಂಬಾ ಮಂದಿ ಈ ಇಲಾಖೆಯಲ್ಲಿದ್ದಾರೆ. ಒಂದು ಬೈಕ್ ಕಳೆದುಕೊಂಡವರು ದೂರು ಕೊಡಲು ಹೋದಾಗ ಅನುಭವಿಸುವ ಯಾತನೆ ಯಾರಿಗೂ ಬೇಡ. ಆ ಬೈಕ್ ಮತ್ತೆ ಸಿಕ್ಕ ನಂತರ ಅದನ್ನು ಹಿಂಪಡೆಯುವುದು ಇನ್ನೊಂದು ದಾರುಣ ಕತೆ. ಬೈಕ್ ಕಳ್ಳನಿಂದ ಸುಸ್ಥಿತಿಯಲ್ಲಿ ಸಿಕ್ಕಿದ್ದರೂ ಪೊಲೀಸರು ಹಿಂತಿರುಗಿಸುವಾಗ ಯಾವ ಸ್ಪೇರ್ ಪಾರ್‍ಟ್ಸ್ ಇಲ್ಲದಂತೆ ನೋಡಿಕೊಂಡಿರುತ್ತಾರೆ.

ನಿವೃತ್ತರಾಗಿರುವ ಪೊಲೀಸ್ ಅಧಿಕಾರಿಗಳು ಆಗಾಗ ಟಿವಿ ಚರ್‍ಚೆಗಳಲ್ಲಿ ಭಾಗವಹಿಸಿ ಮಾತನಾಡುವುದನ್ನು ನೋಡಿ. ಅವರ ಮಾತುಗಳಲ್ಲಿ ವೃತ್ತಿ ಕಾಲದ ತಮ್ಮ ಯಾವ ನಡೆಯ ಬಗ್ಗೆಯೂ ಅವರು ವಿಷಾದ ತೋರುವುದಿಲ್ಲ. ಬದಲಿಗೆ ತಮ್ಮ ’ಶೌರ್ಯವನ್ನು’ ವೀರಾವೇಶದಿಂದ ಹೇಳಿಕೊಳ್ಳುತ್ತಾರೆ. ಪೊಲೀಸ್ ಆಡಳಿತ ಸುಧಾರಣೆ ಬಗ್ಗೆ ಮಾತನಾಡುವುದಿಲ್ಲ. ಅಲ್ಲೊಬ್ಬ, ಇಲ್ಲೊಬ್ಬ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ಎಂಬ ಮಾತು ಕೇಳುತ್ತೇವೆ. ಆದರೆ ಅವರು ವ್ಯವಸ್ಥೆಯ ಸುಧಾರಣೆ ಕಡೆ ಯೋಚನೆ ಮಾಡಿದ್ದು ಕಡಿಮೆ. ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವ, ಬಹುತ್ವದ ಪಾಠ ಕೇಳಿಕೊಂಡು ಫೀಲ್ಡ್‌ಗೆ ಬಂದವರು ತೀರಾ ಅಲ್ಪರಂತೆ ವರ್ತಿಸುತ್ತಾರೆ. ಹಾಗಾಗಿ ತರಬೇತಿ ವ್ಯವಸ್ಥೆಯೇ ಅಮೂಲಾಗ್ರವಾಗಿ ಬದಲಾಗಬೇಕು ಎಂದು ಹೇಳುವವರು ಹಲವರಿದ್ದಾರೆ.

ಆದರೆ ಇದೆಲ್ಲಕ್ಕಿಂತ ಪರಿಣಾಮಕಾರಿಯಾಗಿ ಈ ಪೊಲೀಸಿಂಗ್ ಕೊನೆಯಾಗಬೇಕೆಂದು ಗಟ್ಟಿಯಾಗಿ ಪ್ರತಿಪಾದಿಸಿದವರು ಅಮೆರಿಕಾದ ಅಲೆಕ್ಸ್ ವಿಠಾಲೆ. ಅವರ ಪುಸ್ತಕ ’ದಿ ಎಂಡ್ ಆಫ್ ಪೊಲೀಸಿಂಗ್’ ಪ್ರತಿಪಾದಿಸುವುದು ಪೊಲೀಸ್ ಆಡಳಿತ ಸುಧಾರಣೆಯನ್ನಲ್ಲ, ಬದಲಿಗೆ ಪೊಲೀಸ್ ವ್ಯವಸ್ಥೆಯ ಸಂಪೂರ್ಣ ಅಂತ್ಯ.

ನಾವು ಈಗ ನೋಡುತ್ತಿರುವ ಆಧುನಿಕ ಪೊಲೀಸ್ ವ್ಯವಸ್ಥೆ ಆರಂಭವಾಗಿದ್ದು ಇಂಗ್ಲೆಂಡ್‌ನಲ್ಲಿ 1820ರ ದಶಕದಲ್ಲಿ. ಆಗಿನಿಂದಲೂ ವ್ಯವಸ್ಥೆ ರೂಪುಗೊಂಡಿದ್ದು ಶ್ರೀಮಂತರನ್ನು ಬಡವರಿಂದ ರಕ್ಷಿಸಲು ಹಾಗೂ ಗುಲಾಮಗಿರಿಯನ್ನು ಪೋಷಿಸಲು. ಅಂದಿನಿಂದ ಪೊಲೀಸ್ ವ್ಯವಸ್ಥೆ ಸಮಾಜದಲ್ಲಿ ಅಸಮಾನತೆಯನ್ನು ಕಾಪಾಡಿಕೊಂಡು ಬಂದಿದೆ. ಇಂದಿಗೂ ಪೊಲೀಸರು ಮಾಡುತ್ತಿರುವ ಕೆಲಸ ಅದೇ.

ಹಾಗಾಗಿ ಅವರು ಶಿಫಾರಸ್ಸು ಮಾಡುವುದು ನಮ್ಮ ಪೊಲೀಸ್ ವ್ಯವಸ್ಥೆಯ ಅಂತ್ಯ. ಕಳ್ಳತನ, ಕೊಲೆ ಇನ್ನಿತರೆ ಅಪರಾಧಗಳನ್ನು ಹತ್ತಿಕ್ಕಲು ಆಡಳಿತ ವ್ಯವಸ್ಥೆ ರಾಜಕೀಯ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಎಲ್ಲರಿಗೂ ಸೂರು, ದುಡಿಯುವ ಕೈಗಳಿಗೆ ಸೂಕ್ತ ಉದ್ಯೋಗ, ಉದ್ಯೋಗ ಭದ್ರತೆ.. ಇಂತಹ ಪರಿಹಾರಗಳಿಂದ ಸಾಮಾಜಿಕ ವ್ಯವಸ್ಥೆ ಸಾಕಷ್ಟು ಸುಧಾರಣೆ ಆಗುತ್ತದೆ. ಈ ನಿಟ್ಟಿನಲ್ಲಿ ಪ್ರಗತಿಪರ ಸಮಾಜ ಆಲೋಚಿಸಬೇಕಿದೆ.


ಇದನ್ನೂ ಓದಿ: ಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...