Homeಮುಖಪುಟಅಸಮಾನತೆ ಪೋಷಣೆಗೆ ಪೊಲೀಸರು

ಅಸಮಾನತೆ ಪೋಷಣೆಗೆ ಪೊಲೀಸರು

- Advertisement -
- Advertisement -

ಒಂದು ಊರಲ್ಲಿ ಅಣ್ಣ ಮತ್ತು ತಮ್ಮನ ಮಧ್ಯೆ ಎಂತಹದೋ ಗಲಾಟೆ. ಅಣ್ಣ ಹಣದಲ್ಲಿ ಮುಂದಿದ್ದ. ತಮ್ಮ ಕೂಲಿ ಕೆಲಸ. ತಮ್ಮನಿಗೆ ಬುದ್ಧಿ ಕಲಿಸಬೇಕು ಅಂತ ತನಗೆ ಗೊತ್ತಿರುವ ಪೊಲೀಸ್‌ಗೆ ಅಣ್ಣ ಒಂದಿಷ್ಟು ದುಡ್ಡು ಕೊಟ್ಟ. ಪೊಲೀಸರು ತಮ್ಮನನ್ನು ಜೀಪಲ್ಲಿ ಕರ್‍ಕೊಂಡು ಹೋದರು. ಏನು ಮಾಡಿದ್ರು ಗೊತ್ತಿಲ್ಲ. ಆದರೆ ಸ್ವಲ್ಪ ಹೊತ್ತಿನ ನಂತರ ತಮ್ಮನ ಹೆಂಡತಿಗೆ ಮಾಹಿತಿ ಬಂತು. ಅವರು ಪೊಲೀಸ್ ಸ್ಟೇಷನ್‌ಗೆ ಹೋಗಿ ನೋಡುವಷ್ಟರಲ್ಲಿ ಗಂಡ ರಕ್ತ ವಾಂತಿ ಮಾಡಿಕೊಂಡಿದ್ದರು. “ಏನೋ ತಿಂದು ಬಂದಿದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗು” ಎಂದು ಪೊಲೀಸರು ತಾಕೀತು ಮಾಡಿದರು. ಆ ನಂತರ ಕೆಲವೇ ನಿಮಿಷಗಳಲ್ಲಿ ಆತನ ಪ್ರಾಣ ಹೋಯ್ತು.

ಇನ್ನೊಂದು ಊರಲ್ಲಿ ಒಂದು ಕೊಲೆ. ಆರೋಪಿಗಳ ಹುಡುಕಾಟದಲ್ಲಿ ಪೊಲೀಸರು. ಒಬ್ಬ ಅಧಿಕಾರಿಗೆ ಅಲ್ಲೊಬ್ಬನ ಮೇಲೆ ಅನುಮಾನ. ಕರೆದುಕೊಂಡು ಬಂದು ಸತತವಾಗಿ ಹದಿನೈದು ದಿನ ವಿಚಾರಣೆ ಮಾಡಿದರು. ಕೊಲೆಗೂ, ತನಗೂ ಏನೂ ಸಂಬಂಧ ಇಲ್ಲ ಅಂತ ಎಷ್ಟು ಬಡ್ಕೊಂಡರೂ ಪೊಲೀಸರು ಕೇಳಲಿಲ್ಲ. ಆಮೇಲೆ ಇನ್ನೊಬ್ಬ ಅಧಿಕಾರಿ ’ಇಲ್ಲಿದಾನೆ ನಿಜ ಆರೋಪಿ. ಅವನನ್ನು ಬಿಟ್ಟುಬಿಡಿ’ ಅಂದರು. ಆ ಹದಿನೈದು ದಿನ ಆ ಅಮಾಯಕ ಅನುಭವಿಸಿದ ಯಾತನೆ ಯಾವ ಪ್ರಾಣಿಗೂ ಬೇಡ.

ಯಾವುದೇ ತಯಾರಿ ಇಲ್ಲದೆ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ನಂತರ ದೆಹಲಿಯಿಂದ ಕಾರ್ಮಿಕರು ತಮ್ಮ ತವರು ಬಿಹಾರಕ್ಕೆ ಸೈಕಲ್ ತುಳಿಯುತ್ತಾ ಹೊರಟಿದ್ದರು. ಸಾಯೋದಾದ್ರೂ ನಾವು ಊರಿಗೆ ಹೋಗಿ ಅಪ್ಪ, ಅಮ್ಮಂದಿರ ಬಳಿಯೇ ಸಾಯೋಣ ಎಂಬ ನಿರ್ಧಾರ ಅವರದು. ಆದರೆ ಅಲ್ಲೊಂದು ಕಡೆ ಅವರನ್ನು ತಡೆದ ಪೊಲೀಸರು ಹಿಗ್ಗಾಮುಗ್ಗಾ ಬಾರಿಸಿದರು. ’ಲಾಕ್ ಡೌನ್ ಇದೆ. ಯಾಕೋ ಹೊರಗಡೆ ಬಂದ್ರಿ? ನಿಮ್ಮ ಅಮ್ಮಂದಿರಿಗೆ ಗಿರಾಕಿ ಹುಡುಕಿಕೊಂಡು ಹೊರಟಿರೇನೋ..?’ ಎನ್ನುತ್ತಾನೆ ಒಬ್ಬ ಪೊಲೀಸ್. ಇನ್ನೊಂದು ಕಡೆ ಜ್ವರದಿಂದ ಬಳಲುತ್ತಿದ್ದ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಅಪ್ಪನನ್ನು ತಲೆ ಒಡೆದು ರಕ್ತ ಬರುವಂತೆ ಬಾರಿಸಿದರು. ಸಿಟ್ಟಿಗೆದ್ದು ಆತ ತಿರುಗಿಬಿದ್ದು ವಾದಿಸಿದಾಗ, ಪೊಲೀಸರಿಗೆ ಎದುರು ಮಾತನಾಡ್ತೀಯಾ ಎಂದು ಅವನನ್ನು ಬಲವಂತವಾಗಿ ಸ್ಟೇಷನ್‌ಗೆ ಕರೆದುಕೊಂಡು ಮತ್ತಷ್ಟು ಹಿಂಸೆ ನೀಡಿದರು. ಇವರನ್ನೆಲ್ಲಾ ಮನುಷ್ಯರೆನ್ನಬೇಕೆ?

ಹೀಗೆ ಹೇಳುತ್ತಾ ಹೋಗಲು ನೂರು ಘಟನೆಗಳಿವೆ. ಯಾವೂ ಸುಳ್ಳಲ್ಲ. ನಡೆದ ಘಟನೆಗಳಿವು. ನಿವೃತ್ತಿಯಾದ ಅಥವಾ ಆತ್ಮೀಯರಾದ ಕೆಲ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದರೆ ಪೊಲೀಸರ ಕ್ರೂರ ವರ್ತನೆ ಅನಾವರಣಗೊಳಿಸುವ ಮತ್ತಷ್ಟು ಕರಳು ಹಿಂಡುವ ಕತೆಗಳು ಗೊತ್ತಾಗಬಹುದು. ಇನ್ನೊಬ್ಬ ಅಧಿಕಾರಿ ಇದ್ದರು. ಪೊಲೀಸರ ಕೆಲಸಗಳಲ್ಲಿ ಒಂದು ಕಳ್ಳತನ ತಡೆಯುವುದು ತಾನೆ. ಆದರೆ ಆ ಮಹಾಶಯ ತಾನು ಕೆಲಸ ಮಾಡುತ್ತಿದ್ದ ಊರಿನ ಬಸ್ ಸ್ಟಾಂಡ್‌ನಲ್ಲಿ ಪಿಕ್‌ಪಾಕೆಟ್ ಮಾಡಲೆಂದು ನುರಿತ ಕಳ್ಳರಿಗೆ ಆಶ್ರಯ ನೀಡಿ ಸಾಕಿಕೊಂಡಿದ್ದರು. ಅವರು ದಿನವಿಡೀ ಪಿಕ್‌ಪಾಕೆಟ್ ಮಾಡಿ ತಂದಿದ್ದನ್ನು ಪೊಲೀಸ್ ಅಧಿಕಾರಿಗೆ ಕೊಟ್ಟು ತನ್ನ ಪಾಲನ್ನು ಪಡೆಯಬೇಕಿತ್ತು. ಇಂತಹ ಅಧಿಕಾರಿಗಳೂ ಇದ್ದಾರೆ ಎಂದರೆ ಅಚ್ಚರಿ ಪಡಬೇಕಿಲ್ಲ. ಅವರಲ್ಲಿ ಕೆಲವರು ಇನ್ನು ಕೆಲವೇ ವರ್ಷಗಳಲ್ಲಿ ಶಾಸಕರೋ, ಮಂತ್ರಿಗಳೋ ಆಗಿ ಆಯ್ಕೆಯಾಗಬಹುದು.

ಕಳ್ಳರನ್ನು, ಕೊಲೆಗಡುಕರನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಬೇಕಾದ ಇವರೇ ಕ್ರಿಮಿನಲ್‌ಗಳಾಗಿದ್ದಾರೆ. ಅಲ್ಲಲ್ಲಿ ಸಣ್ಣಪುಟ್ಟ ಕಳ್ಳತನ ಮಾಡುವವರನ್ನು ಹಿಡಿದು ಫೋಟೋ ತೆಗೆಸಿಕೊಳ್ಳುವ ಇವರು, ಮತ್ತಾರದೋ ಹಣ ಲಪಟಾಯಿಸಿ ಅದನ್ನೇ ರಾಜಕಾರಣಿಗಳಿಗೆ ಒಪ್ಪಿಸಿ ಆಯಕಟ್ಟಿನ ಜಾಗಕ್ಕೆ ಬರುತ್ತಾರೆ. ಕೆಲವು ತಿಂಗಳುಗಳ ಹಿಂದೆ ಒಂದು ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ಉತ್ತಮ ಜಾಗಕ್ಕಾಗಿ ಕಾಯುತ್ತಿದ್ದ ಒಬ್ಬ ಅಧಿಕಾರಿ ಹೇಳಿದ್ದು, “ಈಗಿನ ಶಾಸಕರು ಈ ಹಿಂದೆ ಕೇವಲ ಕಾರ್ಯಕರ್ತರಾಗಿದ್ದಾಗ ಒಂದು ಪ್ರಕರಣದಲ್ಲಿ ನಾನು ಸಹಾಯ ಮಾಡಿದ್ದೆ. ಹಾಗಾಗಿ ನನಗೆ ಆ ಸ್ಟೇಷನ್ ಮಾಡಿಸಿಕೊಡ್ತೀನಿ ಎಂದು ಮಾತು ಕೊಟ್ಟಿದ್ದಾರೆ”. ಆ ಆಡಿಯೋ ಸರಕಾರದ ಗಮನಕ್ಕೆ ಬಂತು. ಆದರೆ ಏನಾಯ್ತು? ಕೆಲವೇ ದಿನಗಳಲ್ಲಿ ಆ ಅಧಿಕಾರಿ ತಾನು ನಿರೀಕ್ಷಿಸಿದ್ದ ಅದೇ ಠಾಣೆಗೆ ನೇಮಕಗೊಂಡರು.

ಕನಿಷ್ಟ ಲಜ್ಜೆ ಇಲ್ಲದ ಹಾಗೂ ಈ ನೆಲದ ಕಾನೂನಿಗೆ ಗೌರವ ಕೊಡದ ತುಂಬಾ ಮಂದಿ ಈ ಇಲಾಖೆಯಲ್ಲಿದ್ದಾರೆ. ಒಂದು ಬೈಕ್ ಕಳೆದುಕೊಂಡವರು ದೂರು ಕೊಡಲು ಹೋದಾಗ ಅನುಭವಿಸುವ ಯಾತನೆ ಯಾರಿಗೂ ಬೇಡ. ಆ ಬೈಕ್ ಮತ್ತೆ ಸಿಕ್ಕ ನಂತರ ಅದನ್ನು ಹಿಂಪಡೆಯುವುದು ಇನ್ನೊಂದು ದಾರುಣ ಕತೆ. ಬೈಕ್ ಕಳ್ಳನಿಂದ ಸುಸ್ಥಿತಿಯಲ್ಲಿ ಸಿಕ್ಕಿದ್ದರೂ ಪೊಲೀಸರು ಹಿಂತಿರುಗಿಸುವಾಗ ಯಾವ ಸ್ಪೇರ್ ಪಾರ್‍ಟ್ಸ್ ಇಲ್ಲದಂತೆ ನೋಡಿಕೊಂಡಿರುತ್ತಾರೆ.

ನಿವೃತ್ತರಾಗಿರುವ ಪೊಲೀಸ್ ಅಧಿಕಾರಿಗಳು ಆಗಾಗ ಟಿವಿ ಚರ್‍ಚೆಗಳಲ್ಲಿ ಭಾಗವಹಿಸಿ ಮಾತನಾಡುವುದನ್ನು ನೋಡಿ. ಅವರ ಮಾತುಗಳಲ್ಲಿ ವೃತ್ತಿ ಕಾಲದ ತಮ್ಮ ಯಾವ ನಡೆಯ ಬಗ್ಗೆಯೂ ಅವರು ವಿಷಾದ ತೋರುವುದಿಲ್ಲ. ಬದಲಿಗೆ ತಮ್ಮ ’ಶೌರ್ಯವನ್ನು’ ವೀರಾವೇಶದಿಂದ ಹೇಳಿಕೊಳ್ಳುತ್ತಾರೆ. ಪೊಲೀಸ್ ಆಡಳಿತ ಸುಧಾರಣೆ ಬಗ್ಗೆ ಮಾತನಾಡುವುದಿಲ್ಲ. ಅಲ್ಲೊಬ್ಬ, ಇಲ್ಲೊಬ್ಬ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ಎಂಬ ಮಾತು ಕೇಳುತ್ತೇವೆ. ಆದರೆ ಅವರು ವ್ಯವಸ್ಥೆಯ ಸುಧಾರಣೆ ಕಡೆ ಯೋಚನೆ ಮಾಡಿದ್ದು ಕಡಿಮೆ. ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವ, ಬಹುತ್ವದ ಪಾಠ ಕೇಳಿಕೊಂಡು ಫೀಲ್ಡ್‌ಗೆ ಬಂದವರು ತೀರಾ ಅಲ್ಪರಂತೆ ವರ್ತಿಸುತ್ತಾರೆ. ಹಾಗಾಗಿ ತರಬೇತಿ ವ್ಯವಸ್ಥೆಯೇ ಅಮೂಲಾಗ್ರವಾಗಿ ಬದಲಾಗಬೇಕು ಎಂದು ಹೇಳುವವರು ಹಲವರಿದ್ದಾರೆ.

ಆದರೆ ಇದೆಲ್ಲಕ್ಕಿಂತ ಪರಿಣಾಮಕಾರಿಯಾಗಿ ಈ ಪೊಲೀಸಿಂಗ್ ಕೊನೆಯಾಗಬೇಕೆಂದು ಗಟ್ಟಿಯಾಗಿ ಪ್ರತಿಪಾದಿಸಿದವರು ಅಮೆರಿಕಾದ ಅಲೆಕ್ಸ್ ವಿಠಾಲೆ. ಅವರ ಪುಸ್ತಕ ’ದಿ ಎಂಡ್ ಆಫ್ ಪೊಲೀಸಿಂಗ್’ ಪ್ರತಿಪಾದಿಸುವುದು ಪೊಲೀಸ್ ಆಡಳಿತ ಸುಧಾರಣೆಯನ್ನಲ್ಲ, ಬದಲಿಗೆ ಪೊಲೀಸ್ ವ್ಯವಸ್ಥೆಯ ಸಂಪೂರ್ಣ ಅಂತ್ಯ.

ನಾವು ಈಗ ನೋಡುತ್ತಿರುವ ಆಧುನಿಕ ಪೊಲೀಸ್ ವ್ಯವಸ್ಥೆ ಆರಂಭವಾಗಿದ್ದು ಇಂಗ್ಲೆಂಡ್‌ನಲ್ಲಿ 1820ರ ದಶಕದಲ್ಲಿ. ಆಗಿನಿಂದಲೂ ವ್ಯವಸ್ಥೆ ರೂಪುಗೊಂಡಿದ್ದು ಶ್ರೀಮಂತರನ್ನು ಬಡವರಿಂದ ರಕ್ಷಿಸಲು ಹಾಗೂ ಗುಲಾಮಗಿರಿಯನ್ನು ಪೋಷಿಸಲು. ಅಂದಿನಿಂದ ಪೊಲೀಸ್ ವ್ಯವಸ್ಥೆ ಸಮಾಜದಲ್ಲಿ ಅಸಮಾನತೆಯನ್ನು ಕಾಪಾಡಿಕೊಂಡು ಬಂದಿದೆ. ಇಂದಿಗೂ ಪೊಲೀಸರು ಮಾಡುತ್ತಿರುವ ಕೆಲಸ ಅದೇ.

ಹಾಗಾಗಿ ಅವರು ಶಿಫಾರಸ್ಸು ಮಾಡುವುದು ನಮ್ಮ ಪೊಲೀಸ್ ವ್ಯವಸ್ಥೆಯ ಅಂತ್ಯ. ಕಳ್ಳತನ, ಕೊಲೆ ಇನ್ನಿತರೆ ಅಪರಾಧಗಳನ್ನು ಹತ್ತಿಕ್ಕಲು ಆಡಳಿತ ವ್ಯವಸ್ಥೆ ರಾಜಕೀಯ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಎಲ್ಲರಿಗೂ ಸೂರು, ದುಡಿಯುವ ಕೈಗಳಿಗೆ ಸೂಕ್ತ ಉದ್ಯೋಗ, ಉದ್ಯೋಗ ಭದ್ರತೆ.. ಇಂತಹ ಪರಿಹಾರಗಳಿಂದ ಸಾಮಾಜಿಕ ವ್ಯವಸ್ಥೆ ಸಾಕಷ್ಟು ಸುಧಾರಣೆ ಆಗುತ್ತದೆ. ಈ ನಿಟ್ಟಿನಲ್ಲಿ ಪ್ರಗತಿಪರ ಸಮಾಜ ಆಲೋಚಿಸಬೇಕಿದೆ.


ಇದನ್ನೂ ಓದಿ: ಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...