Homeಮುಖಪುಟಅಸಮಾನತೆ ಪೋಷಣೆಗೆ ಪೊಲೀಸರು

ಅಸಮಾನತೆ ಪೋಷಣೆಗೆ ಪೊಲೀಸರು

- Advertisement -
- Advertisement -

ಒಂದು ಊರಲ್ಲಿ ಅಣ್ಣ ಮತ್ತು ತಮ್ಮನ ಮಧ್ಯೆ ಎಂತಹದೋ ಗಲಾಟೆ. ಅಣ್ಣ ಹಣದಲ್ಲಿ ಮುಂದಿದ್ದ. ತಮ್ಮ ಕೂಲಿ ಕೆಲಸ. ತಮ್ಮನಿಗೆ ಬುದ್ಧಿ ಕಲಿಸಬೇಕು ಅಂತ ತನಗೆ ಗೊತ್ತಿರುವ ಪೊಲೀಸ್‌ಗೆ ಅಣ್ಣ ಒಂದಿಷ್ಟು ದುಡ್ಡು ಕೊಟ್ಟ. ಪೊಲೀಸರು ತಮ್ಮನನ್ನು ಜೀಪಲ್ಲಿ ಕರ್‍ಕೊಂಡು ಹೋದರು. ಏನು ಮಾಡಿದ್ರು ಗೊತ್ತಿಲ್ಲ. ಆದರೆ ಸ್ವಲ್ಪ ಹೊತ್ತಿನ ನಂತರ ತಮ್ಮನ ಹೆಂಡತಿಗೆ ಮಾಹಿತಿ ಬಂತು. ಅವರು ಪೊಲೀಸ್ ಸ್ಟೇಷನ್‌ಗೆ ಹೋಗಿ ನೋಡುವಷ್ಟರಲ್ಲಿ ಗಂಡ ರಕ್ತ ವಾಂತಿ ಮಾಡಿಕೊಂಡಿದ್ದರು. “ಏನೋ ತಿಂದು ಬಂದಿದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗು” ಎಂದು ಪೊಲೀಸರು ತಾಕೀತು ಮಾಡಿದರು. ಆ ನಂತರ ಕೆಲವೇ ನಿಮಿಷಗಳಲ್ಲಿ ಆತನ ಪ್ರಾಣ ಹೋಯ್ತು.

ಇನ್ನೊಂದು ಊರಲ್ಲಿ ಒಂದು ಕೊಲೆ. ಆರೋಪಿಗಳ ಹುಡುಕಾಟದಲ್ಲಿ ಪೊಲೀಸರು. ಒಬ್ಬ ಅಧಿಕಾರಿಗೆ ಅಲ್ಲೊಬ್ಬನ ಮೇಲೆ ಅನುಮಾನ. ಕರೆದುಕೊಂಡು ಬಂದು ಸತತವಾಗಿ ಹದಿನೈದು ದಿನ ವಿಚಾರಣೆ ಮಾಡಿದರು. ಕೊಲೆಗೂ, ತನಗೂ ಏನೂ ಸಂಬಂಧ ಇಲ್ಲ ಅಂತ ಎಷ್ಟು ಬಡ್ಕೊಂಡರೂ ಪೊಲೀಸರು ಕೇಳಲಿಲ್ಲ. ಆಮೇಲೆ ಇನ್ನೊಬ್ಬ ಅಧಿಕಾರಿ ’ಇಲ್ಲಿದಾನೆ ನಿಜ ಆರೋಪಿ. ಅವನನ್ನು ಬಿಟ್ಟುಬಿಡಿ’ ಅಂದರು. ಆ ಹದಿನೈದು ದಿನ ಆ ಅಮಾಯಕ ಅನುಭವಿಸಿದ ಯಾತನೆ ಯಾವ ಪ್ರಾಣಿಗೂ ಬೇಡ.

ಯಾವುದೇ ತಯಾರಿ ಇಲ್ಲದೆ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ನಂತರ ದೆಹಲಿಯಿಂದ ಕಾರ್ಮಿಕರು ತಮ್ಮ ತವರು ಬಿಹಾರಕ್ಕೆ ಸೈಕಲ್ ತುಳಿಯುತ್ತಾ ಹೊರಟಿದ್ದರು. ಸಾಯೋದಾದ್ರೂ ನಾವು ಊರಿಗೆ ಹೋಗಿ ಅಪ್ಪ, ಅಮ್ಮಂದಿರ ಬಳಿಯೇ ಸಾಯೋಣ ಎಂಬ ನಿರ್ಧಾರ ಅವರದು. ಆದರೆ ಅಲ್ಲೊಂದು ಕಡೆ ಅವರನ್ನು ತಡೆದ ಪೊಲೀಸರು ಹಿಗ್ಗಾಮುಗ್ಗಾ ಬಾರಿಸಿದರು. ’ಲಾಕ್ ಡೌನ್ ಇದೆ. ಯಾಕೋ ಹೊರಗಡೆ ಬಂದ್ರಿ? ನಿಮ್ಮ ಅಮ್ಮಂದಿರಿಗೆ ಗಿರಾಕಿ ಹುಡುಕಿಕೊಂಡು ಹೊರಟಿರೇನೋ..?’ ಎನ್ನುತ್ತಾನೆ ಒಬ್ಬ ಪೊಲೀಸ್. ಇನ್ನೊಂದು ಕಡೆ ಜ್ವರದಿಂದ ಬಳಲುತ್ತಿದ್ದ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಅಪ್ಪನನ್ನು ತಲೆ ಒಡೆದು ರಕ್ತ ಬರುವಂತೆ ಬಾರಿಸಿದರು. ಸಿಟ್ಟಿಗೆದ್ದು ಆತ ತಿರುಗಿಬಿದ್ದು ವಾದಿಸಿದಾಗ, ಪೊಲೀಸರಿಗೆ ಎದುರು ಮಾತನಾಡ್ತೀಯಾ ಎಂದು ಅವನನ್ನು ಬಲವಂತವಾಗಿ ಸ್ಟೇಷನ್‌ಗೆ ಕರೆದುಕೊಂಡು ಮತ್ತಷ್ಟು ಹಿಂಸೆ ನೀಡಿದರು. ಇವರನ್ನೆಲ್ಲಾ ಮನುಷ್ಯರೆನ್ನಬೇಕೆ?

ಹೀಗೆ ಹೇಳುತ್ತಾ ಹೋಗಲು ನೂರು ಘಟನೆಗಳಿವೆ. ಯಾವೂ ಸುಳ್ಳಲ್ಲ. ನಡೆದ ಘಟನೆಗಳಿವು. ನಿವೃತ್ತಿಯಾದ ಅಥವಾ ಆತ್ಮೀಯರಾದ ಕೆಲ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದರೆ ಪೊಲೀಸರ ಕ್ರೂರ ವರ್ತನೆ ಅನಾವರಣಗೊಳಿಸುವ ಮತ್ತಷ್ಟು ಕರಳು ಹಿಂಡುವ ಕತೆಗಳು ಗೊತ್ತಾಗಬಹುದು. ಇನ್ನೊಬ್ಬ ಅಧಿಕಾರಿ ಇದ್ದರು. ಪೊಲೀಸರ ಕೆಲಸಗಳಲ್ಲಿ ಒಂದು ಕಳ್ಳತನ ತಡೆಯುವುದು ತಾನೆ. ಆದರೆ ಆ ಮಹಾಶಯ ತಾನು ಕೆಲಸ ಮಾಡುತ್ತಿದ್ದ ಊರಿನ ಬಸ್ ಸ್ಟಾಂಡ್‌ನಲ್ಲಿ ಪಿಕ್‌ಪಾಕೆಟ್ ಮಾಡಲೆಂದು ನುರಿತ ಕಳ್ಳರಿಗೆ ಆಶ್ರಯ ನೀಡಿ ಸಾಕಿಕೊಂಡಿದ್ದರು. ಅವರು ದಿನವಿಡೀ ಪಿಕ್‌ಪಾಕೆಟ್ ಮಾಡಿ ತಂದಿದ್ದನ್ನು ಪೊಲೀಸ್ ಅಧಿಕಾರಿಗೆ ಕೊಟ್ಟು ತನ್ನ ಪಾಲನ್ನು ಪಡೆಯಬೇಕಿತ್ತು. ಇಂತಹ ಅಧಿಕಾರಿಗಳೂ ಇದ್ದಾರೆ ಎಂದರೆ ಅಚ್ಚರಿ ಪಡಬೇಕಿಲ್ಲ. ಅವರಲ್ಲಿ ಕೆಲವರು ಇನ್ನು ಕೆಲವೇ ವರ್ಷಗಳಲ್ಲಿ ಶಾಸಕರೋ, ಮಂತ್ರಿಗಳೋ ಆಗಿ ಆಯ್ಕೆಯಾಗಬಹುದು.

ಕಳ್ಳರನ್ನು, ಕೊಲೆಗಡುಕರನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಬೇಕಾದ ಇವರೇ ಕ್ರಿಮಿನಲ್‌ಗಳಾಗಿದ್ದಾರೆ. ಅಲ್ಲಲ್ಲಿ ಸಣ್ಣಪುಟ್ಟ ಕಳ್ಳತನ ಮಾಡುವವರನ್ನು ಹಿಡಿದು ಫೋಟೋ ತೆಗೆಸಿಕೊಳ್ಳುವ ಇವರು, ಮತ್ತಾರದೋ ಹಣ ಲಪಟಾಯಿಸಿ ಅದನ್ನೇ ರಾಜಕಾರಣಿಗಳಿಗೆ ಒಪ್ಪಿಸಿ ಆಯಕಟ್ಟಿನ ಜಾಗಕ್ಕೆ ಬರುತ್ತಾರೆ. ಕೆಲವು ತಿಂಗಳುಗಳ ಹಿಂದೆ ಒಂದು ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ಉತ್ತಮ ಜಾಗಕ್ಕಾಗಿ ಕಾಯುತ್ತಿದ್ದ ಒಬ್ಬ ಅಧಿಕಾರಿ ಹೇಳಿದ್ದು, “ಈಗಿನ ಶಾಸಕರು ಈ ಹಿಂದೆ ಕೇವಲ ಕಾರ್ಯಕರ್ತರಾಗಿದ್ದಾಗ ಒಂದು ಪ್ರಕರಣದಲ್ಲಿ ನಾನು ಸಹಾಯ ಮಾಡಿದ್ದೆ. ಹಾಗಾಗಿ ನನಗೆ ಆ ಸ್ಟೇಷನ್ ಮಾಡಿಸಿಕೊಡ್ತೀನಿ ಎಂದು ಮಾತು ಕೊಟ್ಟಿದ್ದಾರೆ”. ಆ ಆಡಿಯೋ ಸರಕಾರದ ಗಮನಕ್ಕೆ ಬಂತು. ಆದರೆ ಏನಾಯ್ತು? ಕೆಲವೇ ದಿನಗಳಲ್ಲಿ ಆ ಅಧಿಕಾರಿ ತಾನು ನಿರೀಕ್ಷಿಸಿದ್ದ ಅದೇ ಠಾಣೆಗೆ ನೇಮಕಗೊಂಡರು.

ಕನಿಷ್ಟ ಲಜ್ಜೆ ಇಲ್ಲದ ಹಾಗೂ ಈ ನೆಲದ ಕಾನೂನಿಗೆ ಗೌರವ ಕೊಡದ ತುಂಬಾ ಮಂದಿ ಈ ಇಲಾಖೆಯಲ್ಲಿದ್ದಾರೆ. ಒಂದು ಬೈಕ್ ಕಳೆದುಕೊಂಡವರು ದೂರು ಕೊಡಲು ಹೋದಾಗ ಅನುಭವಿಸುವ ಯಾತನೆ ಯಾರಿಗೂ ಬೇಡ. ಆ ಬೈಕ್ ಮತ್ತೆ ಸಿಕ್ಕ ನಂತರ ಅದನ್ನು ಹಿಂಪಡೆಯುವುದು ಇನ್ನೊಂದು ದಾರುಣ ಕತೆ. ಬೈಕ್ ಕಳ್ಳನಿಂದ ಸುಸ್ಥಿತಿಯಲ್ಲಿ ಸಿಕ್ಕಿದ್ದರೂ ಪೊಲೀಸರು ಹಿಂತಿರುಗಿಸುವಾಗ ಯಾವ ಸ್ಪೇರ್ ಪಾರ್‍ಟ್ಸ್ ಇಲ್ಲದಂತೆ ನೋಡಿಕೊಂಡಿರುತ್ತಾರೆ.

ನಿವೃತ್ತರಾಗಿರುವ ಪೊಲೀಸ್ ಅಧಿಕಾರಿಗಳು ಆಗಾಗ ಟಿವಿ ಚರ್‍ಚೆಗಳಲ್ಲಿ ಭಾಗವಹಿಸಿ ಮಾತನಾಡುವುದನ್ನು ನೋಡಿ. ಅವರ ಮಾತುಗಳಲ್ಲಿ ವೃತ್ತಿ ಕಾಲದ ತಮ್ಮ ಯಾವ ನಡೆಯ ಬಗ್ಗೆಯೂ ಅವರು ವಿಷಾದ ತೋರುವುದಿಲ್ಲ. ಬದಲಿಗೆ ತಮ್ಮ ’ಶೌರ್ಯವನ್ನು’ ವೀರಾವೇಶದಿಂದ ಹೇಳಿಕೊಳ್ಳುತ್ತಾರೆ. ಪೊಲೀಸ್ ಆಡಳಿತ ಸುಧಾರಣೆ ಬಗ್ಗೆ ಮಾತನಾಡುವುದಿಲ್ಲ. ಅಲ್ಲೊಬ್ಬ, ಇಲ್ಲೊಬ್ಬ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ಎಂಬ ಮಾತು ಕೇಳುತ್ತೇವೆ. ಆದರೆ ಅವರು ವ್ಯವಸ್ಥೆಯ ಸುಧಾರಣೆ ಕಡೆ ಯೋಚನೆ ಮಾಡಿದ್ದು ಕಡಿಮೆ. ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವ, ಬಹುತ್ವದ ಪಾಠ ಕೇಳಿಕೊಂಡು ಫೀಲ್ಡ್‌ಗೆ ಬಂದವರು ತೀರಾ ಅಲ್ಪರಂತೆ ವರ್ತಿಸುತ್ತಾರೆ. ಹಾಗಾಗಿ ತರಬೇತಿ ವ್ಯವಸ್ಥೆಯೇ ಅಮೂಲಾಗ್ರವಾಗಿ ಬದಲಾಗಬೇಕು ಎಂದು ಹೇಳುವವರು ಹಲವರಿದ್ದಾರೆ.

ಆದರೆ ಇದೆಲ್ಲಕ್ಕಿಂತ ಪರಿಣಾಮಕಾರಿಯಾಗಿ ಈ ಪೊಲೀಸಿಂಗ್ ಕೊನೆಯಾಗಬೇಕೆಂದು ಗಟ್ಟಿಯಾಗಿ ಪ್ರತಿಪಾದಿಸಿದವರು ಅಮೆರಿಕಾದ ಅಲೆಕ್ಸ್ ವಿಠಾಲೆ. ಅವರ ಪುಸ್ತಕ ’ದಿ ಎಂಡ್ ಆಫ್ ಪೊಲೀಸಿಂಗ್’ ಪ್ರತಿಪಾದಿಸುವುದು ಪೊಲೀಸ್ ಆಡಳಿತ ಸುಧಾರಣೆಯನ್ನಲ್ಲ, ಬದಲಿಗೆ ಪೊಲೀಸ್ ವ್ಯವಸ್ಥೆಯ ಸಂಪೂರ್ಣ ಅಂತ್ಯ.

ನಾವು ಈಗ ನೋಡುತ್ತಿರುವ ಆಧುನಿಕ ಪೊಲೀಸ್ ವ್ಯವಸ್ಥೆ ಆರಂಭವಾಗಿದ್ದು ಇಂಗ್ಲೆಂಡ್‌ನಲ್ಲಿ 1820ರ ದಶಕದಲ್ಲಿ. ಆಗಿನಿಂದಲೂ ವ್ಯವಸ್ಥೆ ರೂಪುಗೊಂಡಿದ್ದು ಶ್ರೀಮಂತರನ್ನು ಬಡವರಿಂದ ರಕ್ಷಿಸಲು ಹಾಗೂ ಗುಲಾಮಗಿರಿಯನ್ನು ಪೋಷಿಸಲು. ಅಂದಿನಿಂದ ಪೊಲೀಸ್ ವ್ಯವಸ್ಥೆ ಸಮಾಜದಲ್ಲಿ ಅಸಮಾನತೆಯನ್ನು ಕಾಪಾಡಿಕೊಂಡು ಬಂದಿದೆ. ಇಂದಿಗೂ ಪೊಲೀಸರು ಮಾಡುತ್ತಿರುವ ಕೆಲಸ ಅದೇ.

ಹಾಗಾಗಿ ಅವರು ಶಿಫಾರಸ್ಸು ಮಾಡುವುದು ನಮ್ಮ ಪೊಲೀಸ್ ವ್ಯವಸ್ಥೆಯ ಅಂತ್ಯ. ಕಳ್ಳತನ, ಕೊಲೆ ಇನ್ನಿತರೆ ಅಪರಾಧಗಳನ್ನು ಹತ್ತಿಕ್ಕಲು ಆಡಳಿತ ವ್ಯವಸ್ಥೆ ರಾಜಕೀಯ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಎಲ್ಲರಿಗೂ ಸೂರು, ದುಡಿಯುವ ಕೈಗಳಿಗೆ ಸೂಕ್ತ ಉದ್ಯೋಗ, ಉದ್ಯೋಗ ಭದ್ರತೆ.. ಇಂತಹ ಪರಿಹಾರಗಳಿಂದ ಸಾಮಾಜಿಕ ವ್ಯವಸ್ಥೆ ಸಾಕಷ್ಟು ಸುಧಾರಣೆ ಆಗುತ್ತದೆ. ಈ ನಿಟ್ಟಿನಲ್ಲಿ ಪ್ರಗತಿಪರ ಸಮಾಜ ಆಲೋಚಿಸಬೇಕಿದೆ.


ಇದನ್ನೂ ಓದಿ: ಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...