Homeಕರ್ನಾಟಕಹೆಲ್ಮೆಟ್ ಹಾಕದಿದ್ದುದ್ದಕ್ಕೆ ಯುವಕನಿಗೆ ಕೊಡಗು ಪೊಲೀಸರಿಂದ ಯರ್ರಾಬಿರ್ರಿ ಥಳಿತ? ವಿಡಿಯೋ ವೈರಲ್.. ಇದು ನಿಜವೆ?

ಹೆಲ್ಮೆಟ್ ಹಾಕದಿದ್ದುದ್ದಕ್ಕೆ ಯುವಕನಿಗೆ ಕೊಡಗು ಪೊಲೀಸರಿಂದ ಯರ್ರಾಬಿರ್ರಿ ಥಳಿತ? ವಿಡಿಯೋ ವೈರಲ್.. ಇದು ನಿಜವೆ?

- Advertisement -
- Advertisement -

ನೀವು ಹೆಲ್ಮೆಟ್ ಹಾಕದಿದ್ದರೆ, ಕೊಲ್ಲುವ ಹಕ್ಕನ್ನು ಈ ಪೊಲೀಸರಿಗೆ ಯಾರು ನೀಡಿದರು? ಎಂಬ ಹೆಸರಿನಲ್ಲಿ ಯುವಕನೊಬ್ಬನಿಗೆ ಇಬ್ಬರು ಪೊಲೀಸರು ಲಾಠಿಯಿಂದ ಹೊಡೆಯುವ 58 ಸೆಕೆಂಡ್ ಗಳ ವಿಡಿಯೋವೊಂದು ಸಾಕಷ್ಟು ವೈರಲ್ ಆಗಿದೆ.

ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಹುಡುಗನಿಗೆ ಪೊಲೀಸರು ಮನಸೋ ಇಚ್ಛೆ ತಳಿಸಿದ್ದಾರೆ ಎಂದು ತಿಳಿದು ಸಾವಿರಾರು ಜನ ಈ ಪೋಸ್ಟ್ ಅನ್ನು ಷೇರ್ ಮಾಡಿದ್ದಾರೆ.

ಮೊದಲಿಗೆ ಇದು ಜಯ್ ಭಾರತ್ ಎನ್ನುವ ಪೇಜ್ ನಲ್ಲಿ ಷೇರ್ ಆಗಿದ್ದು 70ಸಾವಿರಕ್ಕೂ ಹೆಚ್ಚು ಜನ ಇದನ್ನು ನೋಡಿದ್ದಲ್ಲದೇ 3 ಸಾವಿರ ಜನ ಇದನ್ನು ಷೇರ್ ಮಾಡಿದ್ದಾರೆ. ಬೇರೆ ಬೇರೆ ಪೇಜ್ ಗಳಲ್ಲಿಯೂ ಈ ವಿಡಿಯೋ ಷೇರ್ ಆಗಿದೆ.

ಆದರೆ ಪ್ರಖ್ಯಾತ ಫ್ಯಾಕ್ಟ್ ಚೆಕ್ ತಾಣ ಆಲ್ಟ್ ನ್ಯೂಸ್ ಇದನ್ನು ಈ ಫೋಟೊವನ್ನು ಗೂಗಲ್ ರಿವರ್ಸ್ ಸರ್ಚ್ ನಲ್ಲಿ ಹುಡುಕಿದಾಗ ಈ ಸುದ್ದಿ ಸುಳ್ಳು ಎಂದು ಗೊತ್ತಾಗಿದೆ. ಇದು ಹೆಲ್ಮೆಟ್ ಪ್ರಕರಣವಲ್ಲ ಬದಲಿಗೆ ಕೊಡಗಿನಲ್ಲಿ ಎರಡು ತಿಂಗಳ ಹಿಂದೆ ಹುಡುಗಿಯೊಬ್ಬಳನ್ನು ಚುಡಾಯಿಸಿದ ಕಾರಣಕ್ಕಾಗಿ ಪೊಲೀಸರು ಯುವಕನಿಗೆ ಥಳಿಸಿದ ವಿಡಿಯೋ ಆಗಿದೆ ಎಂದು ತಿಳಿದುಬಂದಿದೆ.

ಕೇರಳದ ಯುವಕರು ಪ್ರತಿನಿತ್ಯ ವಿರಾಜಪೇಟೆ ಸುತ್ತಾ ಕಾಲೇಜಿಗೆ ಬರುತ್ತಿದ್ದ ಹೆಣ್ಣು ಮಕ್ಕಳನ್ನು ರೇಗಿಸುತ್ತಿದ್ದರು. ಒಂದು ದಿನ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಆಗ ಪೊಲೀಸರು ಹೊಡೆದಿರುವ ವಿಡಯೋ ಈಗ ಮತ್ತೊಮ್ಮೆ ಹೆಲ್ಮೆಟ್ ಹೆಸರಿನಲ್ಲಿ ವೈರಲ್ ಆಗಿದೆ ಅಷ್ಟೇ..

ಕೃಪೆ: ಆಲ್ಟ್ ನ್ಯೂಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...