Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...