Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...