Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...