Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...