Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...