Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...