Homeಕರ್ನಾಟಕಪೊಲೀಸರೆಂದರೆ.... ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

ಪೊಲೀಸರೆಂದರೆ…. ಇಲ್ಲಿದೆ ನೋಡಿ ಪೊಲೀಸರ ಮಾನವೀಯ ಮುಖ: ವಿಡಿಯೋ ನೋಡಿ

- Advertisement -
- Advertisement -

ಪೊಲೀಸರೆಂದರೆ ಕಲ್ಲು ಹೃದಯದವರು, ಅವರಿಗೆ ಭಾವನೆಗಳು ಅರ್ಥವಾಗುವುದಿಲ್ಲ. ಕಷ್ಟ ಸುಖ ಯಾವುದೂ ನೋಡದೇ ಜನರೊಂದಿಗೆ ವರ್ತಿಸುತ್ತಾರೆ ಎಂಬುದರಿಂದ ಹಿಡಿದು ಅಮಾನವೀಯರು, ಅವರಿಗೆ ಹೊಡಿ ಬಡಿ ಎಂಬುದಷ್ಟೇ ಗೊತ್ತು ಎಂಬುವವರೆಗೂ ಆರೋಪಗಳಿವೆ. ಅದರಲ್ಲೂ ಟ್ರಾಫಿಕ್ ಪೊಲೀಸ್ ಗಳೆಂದರೆ ಜನರಿಗೆ ಮತ್ತಷ್ಟು ಸಿಟ್ಟು. ಹೆಲ್ಮೆಟ್, ಡಿ.ಎಲ್ ಇಲ್ಲದಿದ್ದರೆ ದಂಡ ಹಾಕುವುದಲ್ಲದೇ, ಲಂಚ ತಿನ್ನುತ್ತಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಇದರಲ್ಲಿ ಕೆಲವು ವಾಸ್ತವಾಂಶಗಳಿರುವುದು ಸಹ ಸತ್ಯವೇ. ಆದರೆ ಅವರಲ್ಲಿ ಕೆಲವರು ಮಾನವೀಯ ಮೂರ್ತಿಗಳು ಇದ್ದಾರೆ. ಅವರಿಗೂ ನೋವು-ನಲಿವು ಸಮಾಜಕ್ಕೆ ಸ್ಪಂದಿಸುವ ಭಾವನೆಗಳಿರುತ್ತವೆ ಎಂಬುದು ಅಷ್ಟೇ ಸತ್ಯ. ಅಂತಹ ಒಂದು ಘಟನೆ ಇಲ್ಲಿದೆ.

ಬೆಂಗಳೂರಿನ ಹೊರಮಾವು ಬಳಿ ಮೂರು ದಿನಗಳಿಂದ ಹೊಟ್ಟೆಗೆ ಊಟವಿಲ್ಲದೇ, ಮೈಗೆ ಬಟ್ಟೆಯಿಲ್ಲದೇ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ನೂರಾರು ಜನ ನೋಡಿಯೂ ನೋಡದಂತೆ ಮುಂದೆ ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ಆ ವ್ಯಕ್ತಿಯೂ ಏನು ಮಾಡಬೇಕೆಂದು ತೋಚದೆ ವಾಹನಗಳ ಎದುರು ಹೋಗಿ ನಿಲ್ಲುವುದು, ವಾಪಸ್ ಬಂದು ಕೂರುವುದು, ಮಲಗುವುದು ಇಷ್ಟೇ ಮಾಡುತ್ತಿದ್ದ. ಅಂತಹ ಸಂದರ್ಭದಲ್ಲಿ ಅವನ ನೆರವಿಗೆ ಧಾವಿಸಿದವರೆ ಬಾಣಸವಾಡಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಗಳಾದ ಅತೀಕ್ ಅಹ್ಮದ್ ಮತ್ತು ನಯಾಜ್ ಬಾಷಾ.

ವಿಡಿಯೋ ನೋಡಿ

ಬಟ್ಟೆ, ಊಟ, ಹಣ ನೀಡಿದ ಈ ಪೊಲೀಸ್ ರಿಗಿರಲಿ ಒಂದು ಸೆಲ್ಯೂಟ್.. ??

Naanu Gauri यांनी वर पोस्ट केले शुक्रवार, २१ जून, २०१९

ಇವರಿಬ್ಬರೂ ಸ್ಥಳೀಯ ಯುವಕ ಗೋಪಿಯ ಸಹಾಯದಿಂದ ಆ ವ್ಯಕ್ತಿಯ ಬಳಿ ಹೋಗಿ ಆತ ಬೆತ್ತಲೆ ಇದ್ದರೂ ತಲೆಕೆಡಿಸಿಕೊಳ್ಳದೇ ಮಾತನಾಡಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿ, ಹೋಟೆಲ್ ನಲ್ಲಿ ಊಟ ಮಾಡಿಸಿ ನಂತರ ಆತನ ಊರು ಧರ್ಮಪುರಿ ಎಂದು ತಿಳಿದು, ಊರಿಗೆ ಹೋಗಲು ಹಣವನ್ನು ಸಹ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಳೆ ಸುರಿಸಿದ್ದಾರೆ. ಇದು ಚಿಕ್ಕ ಕೆಲಸವೇ ಆದರೂ ಇಂತ ಚಿಕ್ಕ ಚಿಕ್ಕ ಕೆಲಸಗಳೇ ಇಡೀ ಸಮಾಜವನ್ನು ಸುಧಾರಿಸಬಲ್ಲವು. ಈ ಘಟನೆಯಿಂದ ನಾವುಗಳು ಸಹ ಪ್ರೇರಣೆಗೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಸಮಾಜಕ್ಕೆ ಮತ್ತಷ್ಟು ಒಳಿತಾಗುತ್ತದೆ ಅಲ್ಲವೇ?

ಇಂತಹ ಒಳ್ಳೆಯ ಕೆಲಸದ ನಡುವೆಯೇ ಕಳೆದ 10 ದಿನಗಳ ಹಿಂದೆ ಗುಂಡ್ಲುಪೇಟೆಯ ಬಳಿ ಯುವಕನೊಬ್ಬನ್ನನ್ನು ಬೆತ್ತಲೆ ಮೆರವಣಿಗೆ ಮಾಡಿದ ಕ್ರೂರ ಘಟನೆ ಕೂಡ ನಡೆದುಹೋಗಿದೆ. ಇದನ್ನು ಕೂಡ ನಾವು ಮರೆಯಬಾರದು, ಇಂತಹ ಘಟನೆಗಳನ್ನು ಕೂಡ ಖಂಡಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...