Homeಮುಖಪುಟಪೊಲೀಸಿಂಗ್ ಮತ್ತು ಭಾರತದ ಪ್ರಜಾಪ್ರಭುತ್ವ: ಡಾ.ಕೆ.ಪಿ ನಟರಾಜ

ಪೊಲೀಸಿಂಗ್ ಮತ್ತು ಭಾರತದ ಪ್ರಜಾಪ್ರಭುತ್ವ: ಡಾ.ಕೆ.ಪಿ ನಟರಾಜ

- Advertisement -
- Advertisement -

ಚಿಕ್ಕ‌ಮಗಳೂರು ಜಿಲ್ಲೆಯ ಕೊಪ್ಪದಂತಹ ಸಣ್ಣ ಊರಿನಲ್ಲಿ‌ ಕರ್ನಾಟಕ‌ ಕೋಮು ಸೌಹಾರ್ದ ವೇದಿಕೆಯ ಮುಖಂಡರಾದ ಕೆ. ಎಲ್.ಅಶೋಕ್ ಅವರು ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿಕೊಂಡಿದ್ದಕ್ಕಾಗಿ ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್ಸ್‌ಟೆಬಲ್  ಇಬ್ಬರೂ ಅವಾಚ್ಯವಾಗಿ‌ ನಿಂದಿಸಿ, ಪ್ರಕರಣ ದಾಖಲಿಸಿದ್ದರು.

ಕೆ. ಎಲ್.ಅಶೋಕ್ ಚಿಕ್ಕ‌ಮಗಳೂರು ಜಿಲ್ಲೆಯಲ್ಲಿ ಎಡಪಂಥೀಯ ಸಂಘಟನೆಗಳ  ನಾಯಕರೂ ಆಗಿರುವುದರಿಂದ ಇದು ಉದ್ದೇಶ ಪೂರ್ವಕ ನಿಂದನೆ  ಮತ್ತು ದಾಳಿಯಾಗಿದೆ ಎಂದು ಸ್ಥಳೀಯ ಸ್ನೇಹಿತರು ಆರೋಪಿಸುತ್ತಾರೆ.

ಇದು ನಿಜವಿರಬಹುದು, ಯಾಕೆಂದರೆ ಕೊಪ್ಪದಂತಹ ಪುಟ್ಟ ಊರುಗಳಲ್ಲಿ ಟ್ರಾಫಿಕ್ ಸಮಸ್ಯೆ ದೊಡ್ಡದಿರಲಾರದು.. ಹೀಗಾಗಿ ಈ ಪೊಲೀಸ್ ‘ಕಾರ್ಯಾಚರಣೆ’ ಸ್ಥಳೀಯ ರಾಜಕೀಯದಿಂದ  ಪ್ರಚೋದಿತವೆನ್ನಿಸದೆ ಇರದು.

ನೆನ್ನೆ ಮೊನ್ನೆ ನಡೆದ ಈ ಘಟನೆ  ಈ ಪೊಲೀಸ್ ‘ಕಾರ್ಯಾಚರಣೆ’ಯ ಸಣ್ಣ ಉದಾಹರಣೆ  ಮಾತ್ರ…

ನಾವು ಸ್ವಾತಂತ್ರ್ಯೋತ್ತರದ ಈ ದೀರ್ಘಾವಧಿಯ ಇತಿಹಾಸದುದ್ದಕ್ಕೂ ದೇಶದ ಜನರ ಚಳವಳಿಗಳನ್ನು ಪೊಲೀಸ್ ಶಕ್ತಿಯನ್ನು ಬಳಸಿ ದಮನ ಮಾಡಿದ್ದು ಗೋಚರಿಸುತ್ತದೆ. 1975ರಲ್ಲಿ ಇಂದಿರಾ ಗಾಂಧಿ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ದೊಡ್ಡ ಪ್ರಮಾಣದ ಮಾನವ ಹಕ್ಕುಗಳ  ದಮನ ಮತ್ತು  ಹಿಂಸೆಯ ವರದಿಗಳನ್ನು ನೋಡಿದ್ದೆವೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಪಕ್ಕದ ಆಂಧ್ರದಲ್ಲಿ ಕಳೆದ ಐದು ದಶಕಗಳಲ್ಲಿ ನಕ್ಸಲ್ ಚಳವಳಿ ತಾರಕಾವಸ್ಥೆ ಮುಟ್ಟಿದ್ದಾಗ ನಡೆಯುತ್ತಿದ್ದ ಪೊಲೀಸ್ ಎನ್‌ಕೌಂಟರ್‌ಗಳು ಮತ್ತು ಪೊಲೀಸರ ಹೇಳಿಕೆಗಳ  ಅಸಲುತನದ ತನಿಖೆಗಾಗಿ ಗದ್ದರ್ ಅವರಂತಹವರು ಕಾನೂನು ಹೋರಾಟಕ್ಕೆ ಮುಂದಾಗಿದ್ದನ್ನು ನೋಡಿದ್ದೆವೆ. ಬೆಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ನಗರಿ ಬಾಬಯ್ಯ ಅವರನ್ನು ನಕ್ಸಲ್ ಸಂಪರ್ಕ ಹೊಂದಿದ್ದರು ಎಂದು ಬಂಧಿಸಿ ಚಿತ್ರಹಿಂಸೆ ಕೊಟ್ಟ ಇತಿಹಾಸ ಕೂಡ ನಮ್ಮ ಕಣ್ಣೆದುರಿಗಿದೆ.

ಮೊನ್ನೆ ಮೊನ್ನೆಯಷ್ಟೇ ಮಕ್ಕಳ  ಸಾವನ್ನು ತಪ್ಪಿಸಲು ಹೋರಾಡುತ್ತಾ ಅದರ ಭಾಗವಾಗಿ  ವ್ಯವಸ್ಥೆಯ ದೋಷವನ್ನು ಪ್ರಶ್ನಿಸಿದ  ಮಕ್ಕಳ ವೈದ್ಯ ಡಾ.ಕಫೀಲ್ ಖಾನ್  ಅವರತ್ತ ಕೆಂಗಣ್ಣು ಬೀರಿ ದೇಶದ್ರೋಹದ ಆರೋಪ ಹೊರಿಸಿ ಏಳೆಂಟು ತಿಂಗಳ ಕಾಲ ಜೈಲಿನಲ್ಲಿ ಕೊಳೆಸಿದ ಯೋಗಿ ಆದಿತ್ಯ ನಾಥರ ಉತ್ತರ ಪ್ರದೇಶದ ಪೊಲೀಸರು  ನೆನಪಾಗುತ್ತಾರೆ.

ಚಳವಳಿಗಳನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬುದಕ್ಕೆ ತಮ್ಮನ್ನು ಎನ್ ಕೌಂಟರ್ ಮಾಡಿ ಕೊಲ್ಲದೆ ಇದ್ದುದಕ್ಕೆ  ಎಸ್ಐಟಿಗೆ ಕೃತಜ್ಞತೆ ಸಲ್ಲಿಸಿದ ಕಫೀಲ್ ಖಾನ್, ಪೊಲೀಸರಿಗೆ ಹೆದರಿ ತಮ್ಮ ರಾಜ್ಯವಾದ ಉತ್ತರ ಪ್ರದೇಶ ಬಿಟ್ಟು ರಾಜಸ್ತಾನದಲ್ಲಿ ಆಶ್ರಯ ಪಡೆಯಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.

ಇದನ್ನೂ ಓದಿ: ಮಾಸ್ಕ್ ಧರಿಸದ ಕಾರಣಕ್ಕೆ ಬಂಧನಕ್ಕೊಳಗಾದ ದಲಿತ ಯುವಕ ಪೊಲೀಸ್ ಕಸ್ಟಡಿಯಲ್ಲಿ ಸಾವು!

ದೆಹಲಿಯ ಜೆಎನ್‌ಯು ಕ್ಯಾಂಪಸ್‌ಗೆ ನುಗ್ಗಿ ಹಲ್ಲೆ, ದಾಂಧಲೆ ನಡೆಸಿದ  ಎಬಿವಿಪಿ ಗೂಂಡಾಗಳನ್ನು ರಕ್ಷಿಸಿ ಬೆಂಗಾವಲಾಗಿ ನಿಂತ ಪೊಲೀಸರು, CAA, NRC ವಿರೋಧಿಸುತ್ತಿದ್ದ ಚಳವಳಿಗಾರರ ಮೇಲೆ ಗುಂಡು ಹಾರಿಸಲು ಮುಂದಾದ ಪುಂಡನೊಬ್ಬನನ್ನು  ತಡೆಯದೆ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದ ಪೊಲೀಸರು ಸರ್ಕಾರರದ ಪೊಲೀಸಿಂಗ್ ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುತ್ತಾರೆ.

ಗಲಭೆಗಳು , ಮಾಬ್ ಲಿಂಚ್ , ಮಾರಲ್ ಪೊಲೀಸಿಂಗ್‌ಗಳು ನಡೆಯುವಾಗ ಪೊಲೀಸರು ಒಂದೋ ಮೂಕ ಪ್ರೇಕ್ಷಕರಂತೆ ನಿಂತು ಗಲಭೆಕೋರರಿಗೆ ಸಹಕರಿಸುವ, ಇಲ್ಲವೇ  ದುರ್ಬಲರನ್ನು  ಪೊಲೀಸ್ ಬಲ ಬಳಸಿ ಸುಮ್ಮನಾಗಿಸುತ್ತಾರೆ. ಇಂತಹ ಪೊಲೀಸ್ ವ್ಯವಸ್ಥೆ ನೋಡಿದರೆ,  ಸ್ವಾತಂತ್ರ್ಯ ಪೂರ್ವದ ಜಲಿಯನ್ ವಾಲಾಭಾಗ್ ಘಟನೆ, 1975ರ ತುರ್ತು ಪರಿಸ್ಥಿತಿ , 1984ರಲ್ಲಿ ದೆಹಲಿಯಲ್ಲಿ ನಡೆದ  ಸಿಖ್ಖರ ನರಮೇಧ , 2002ರ ಗುಜರಾತ್ ಮುಸ್ಲಿಂ ನರಮೇಧಗಳು ಮತ್ತು ವರ್ತಮಾನದ  CAA  ಚಳವಳಿಯನ್ನು ಹತ್ತಿಕ್ಕಲು  ನಡೆಸಿದ ದಿಲ್ಲಿ ಗಲಭೆಗಳು ನೆನಪಾಗಿ ನಾವು ಸ್ವತಂತ್ರ ರಾಷ್ಟ್ರದಲ್ಲಿದ್ದೇವೆಯೇ ಎಂಬ ಸಂಶಯ ಹುಟ್ಟಿಸುತ್ತವೆ.

ಆರ್‌ಎಸ್‌ಎಸ್

ಈ ಎಲ್ಲಾ ಸಂದರ್ಭಗಳಲ್ಲೂ ಪೊಲೀಸರು ಆಡಳಿತಾರೂಢ ಸರ್ಕಾರಗಳ ಖಾಸಗಿ‌ ಸುಸಜ್ಜಿತ ಗೂಂಡಾ ಪಡೆಯಂತೆ ವರ್ತಿಸಿರುವುದು ಆಘಾತಕಾರಿಯಾದ ಮತ್ತು ವಾಸ್ತವ ಸಂಗತಿಯಾಗಿದೆ.  ದೇಶದ ನಾಗರಿಕರ ತೆರಿಗೆಯ ಹಣದಲ್ಲಿ ನಡೆಯುವ ಈ ಪೊಲೀಸ್ ವ್ಯವಸ್ಥೆ ನಾಗರಿಕರು ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಿ ಹೋರಾಟಕ್ಕಿಳಿದಾಗಲೆಲ್ಲ ಪ್ರಜಾಪ್ರಭುತ್ವದ ರಕ್ಷಕನಂತಲ್ಲದೆ ಆಳುವವರ ಕೂಲಿಯಾಳುಗಳಂತೆ ನಡೆದುಕೊಂಡಿದೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ಪೊಲೀಸಿಂಗ್ ವ್ಯವಸ್ಥೆಯನ್ನು ಸ್ವಾಯತ್ತಗೊಳಿಸಲಾಗದೆ…?

ಈ ಹಿನ್ನೆಲೆಯಲ್ಲಿ ” ಪೊಲೀಸಿಂಗ್” ಅನ್ನು  (ಪೊಲೀಸ್, CBI, ED ಇತ್ಯಾದಿ ) ಯನ್ನಾಗಿ ಪುನಾರಚಿಸಿ  ಸ್ವತಂತ್ರಗೊಳಿಸಬಾರದೇಕೆ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಬೇಕಾಗಿದೆ . ಇದು ಪ್ರಜಾಪ್ರಭುತ್ವದ ಸ್ಫೂರ್ತಿಯಿಂದ, ಕಾಳಜಿಯಿಂದ ಹುಟ್ಟಿದ ಪ್ರಶ್ನೆಯಾಗಿದೆ . ಹೀಗೆ ಪೊಲೀಸ್ ವ್ಯವಸ್ಥೆಯನ್ನು  ಸ್ವತಂತ್ರಗೊಳಿಸಿ ನಮ್ಮ ರಾಷ್ಟ್ರದ ಸಂವಿಧಾನವನ್ನು ಅದರ ಮಾರ್ಗದರ್ಶಿ ಸಂಹಿತೆಯನ್ನಾಗಿ ಮಾಡದೆ ಇದ್ದರೆ , ದೇಶದಾದ್ಯಂತ ವರದಿಯಾಗುತ್ತಿರುವ Police atrocities ಗಳು ಮತ್ತು ಸರ್ಕಾರಗಳ ರಾಜಕಾರಣಿಗಳ ತಾಳಕ್ಕೆ ಕುಣಿಯುತ್ತ ನಡೆಸುವ ಮಾನವ ಹಕ್ಕು ದಮನದ  ದೌರ್ಜನ್ಯಗಳಿಗೆ  ಭವಿಷ್ಯದಲ್ಲಿಯೂ ಕೊನೆ ಎನ್ನುವುದು ಇರುವುದಿಲ್ಲ.

ಆಡಳಿತಾರೂಢ ಶಾಸಕಾಂಗ ಮತ್ತು  ಕಾರ್ಯಾಂಗಗಳ  ಸೂಚನೆಯಂತೆ ಕೆಲಸ ಮಾಡುವ ಪೊಲೀಸ್ ವ್ಯವಸ್ತೆಯ  ತಾತ್ವಿಕ ರೂಪುರೇ಼ಷೆಯು  ದೋಷರಹಿತವಾಗಿ ಕಂಡರೂ ಕಳೆದ ಎಪ್ಪತ್ಮೂರು ವರ್ಷಗಳ ಭಾರತೀಯ ನಾಗರಿಕರ  ಅನುಭವದಲ್ಲಿ ಅದು ಒಂದು ದುಃಸ್ವಪ್ನದಂತೆ ಕಂಡಿದೆ. ಇತಿಹಾಸದಿಂದ ವರ್ತಮಾನದವರೆಗೆ ನಾನು ನೆನಪಿನಿಂದ ಉಲ್ಲೇಖಿಸಿದ ಮೇಲಿನ ಕೆಲವು ಘಟನೆಗಳಿಂದ ಹಿಡಿದು ವರ್ತಮಾನದ ಘಟನೆಗಳವರೆಗೆ ಲೆಕ್ಕವಿಲ್ಲದಷ್ಟು ಘಟನೆಗಳನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

ಗಲಭೆಗಳು, ಹಲ್ಲೆಗಳು ಮಾಬ್ ಲಿಂಚ್‌ಗಳು ನಡೆದಾಗಲೆಲ್ಲಾ ನಾಗರಿಕ ಸಮಾಜ, ಮಾದ್ಯಮಗಳು, ಸಾರ್ವಜನಿಕ ಕ್ಷೇತ್ರದ ರಾಜಕೀಯ ಮುತ್ಸದ್ದಿಗಳು , ಬುದ್ದಿಜೀವಿಗಳು ಪೊಲೀಸರ ಪಕ್ಷಪಾತ ಧೋರಣೆಯನ್ನು ಪ್ರಶ್ನಿಸುವುದು , ಖಂಡಿಸುವುದು ಇವನ್ನೆಲ್ಲ ನೋಡುತ್ತಲೇ ಇದ್ದರೂ ಪೊಲೀಸ್ ಕಾರ್ಯಾಚರಣೆಗಳ ವಿರುದ್ದ ಒಂದು ರಾಷ್ಟ್ರವ್ಯಾಪಿ  ಅಭಿಪ್ರಾಯವನ್ನು ರೂಪಿಸಲು ಮುಂದಾಗದೆ ಇರುವುದು ವಿಷಾದವೇ ಸರಿ.

ಇದನ್ನೂ ಓದಿ: ಸಾತಾನ್ ಕುಳಂ ಲಾಕಪ್ ಸಾವಿನಿಂದ ಕಲಿಯಬೇಕಾಗಿರುವ ಪಾಠಗಳು

ಪೊಲೀಸ್ ವ್ಯವಸ್ಥೆಯನ್ನು ಆಡಳಿತಾರೂಢ ಸರ್ಕಾರಿ ಶಕ್ತಿಯಿಂದ ಪ್ರತ್ಯೇಕಿಸಿ ಸ್ವಾಯತ್ತಗೊಳಿಸಿದರೆ  ಪೊಲೀಸರು ಒತ್ತಡ ಮುಕ್ತವಾಗಿ  ಸಾಂವಿಧಾನಿಕವಾಗಿ, ಸ್ವತಂತ್ರ ನಿರ್ಧಾರಗಳನ್ನು ತಳೆಯಲು ಮತ್ತು ಪ್ರಜಾಪ್ರಭುತ್ವದ ಸಂವೇದನೆಯಿಂದ  ಕಾರ್ಯಾಚರಣೆ  ನಡೆಸಲು ಅನುಕೂಲ ಮಾಡಿದಂತಾಗುತ್ತದೆ.

ಈ ಪರಿಷ್ಕೃತ ಸುಧಾರಿತ ಪೊಲೀಸಿಂಗ್ ನಮ್ಮ ತ್ರಿವಳಿ ಅಂಗಗಳ ಅಗತ್ಯಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿದರೂ ಅವುಗಳ‌ ಗುಲಾಮರಾಗಿರುವುದಿಲ್ಲ, ಬದಲಾಗಿ ಪ್ರಜಾಪ್ರಭುತ್ವದ  ಮೌಲ್ಯಗಳಾದ ವ್ಯಕ್ತಿ ಸ್ವಾತಂತ್ರ್ಯ , ಅಭಿವ್ಯಕ್ತಿ  ಸ್ವಾತಂತ್ರ್ಯ ಮತ್ತು ಬಾಳುವ ಹಕ್ಕುಗಳನ್ನೂ ಒಳಗೊಂಡ ವಿಸ್ತೃತ  ಸಂವಿಧಾನ ಪ್ರತಿಪಾದಿತ ಮಾರ್ಗದರ್ಶಿ ಸೂತ್ರಗಳಡಿ ಕಾರ್ಯನಿರ್ವಹಿಸುತ್ತದೆ.

ಸತತವಾಗಿ ಪೊಲೀಸ್ ದೌರ್ಜನ್ಯದ ಬಲಿಪಶುಗಳಾಗುವ ಚಿಂತಕರು, ಬರಹಗಾರರು, ಪ್ರಾಧ್ಯಾಪಕರು, ಮಹಿಳೆಯರು, ಅಲ್ಪಸಂಖ್ಯಾತ ಜಾತಿ‌ ಮತ್ತು ಧಾರ್ಮಿಕ ಸಮುದಾಯಗಳು, ಮಾನವ ಹಕ್ಕುಗಳ  ರಕ್ಷಣೆಗಾಗಿ ಕೆಲಸ ಮಾಡುತ್ತಿರುವ  ಸಂಘಟನೆಗಳು  ಈ ಜ್ವಲಂತ ಸಮಸ್ಯೆಯ  ಬಗ್ಗೆ ರಾಷ್ಟ್ರ ಮಟ್ಟದ ಅಭಿಪ್ರಾಯ ರೂಪಿಸಲು ಒತ್ತಡ ತರುವ ಕಾರ್ಯ ಮಾಡಬೇಕಾಗಿದೆ.

ಸಂವಿಧಾನ ತಜ್ಞರು‍, ರಾಜಕೀಯ ಪಕ್ಷಗಳು, ವಿವಿಧ ವಿಶ್ವ ವಿದ್ಯಾನಿಲಯಗಳ  ಪ್ರಾಧ್ಯಾಪಕರು, ಮುತ್ಸದ್ಧಿಗಳು, ಜನಪರ  ಸಂಘಟನೆಗಳು ಈ ಪ್ರಸ್ತಾವದ ಸಾಧಕ ಬಾಧಕಗಳ ಬಗ್ಗೆ ವಿಸ್ತೃತವಾಗಿ  ಚರ್ಚಿಸಲು ಮುಂದೆ ಬರಬೇಕಾಗಿದೆ.

ಕಾನೂನು ಸುವ್ಯವಸ್ಥೆಯ ನಿತ್ಯದ ಅವಶ್ಯಕತೆಗಳನ್ನೂ ಒಳಗೊಂಡು  ಪ್ರಜಾಪ್ರಭುತ್ವವು  ಮುಂದೊಡ್ಡುವ  ಸವಾಲುಗಳನ್ನು ಸ್ವತಂತ್ರವಾಗಿ ನಿರ್ವಹಿಸಲು  ಸ್ವಾಯತ್ತತೆಯನ್ನು, ಪರಮಾಧಿಕಾರವನ್ನು ನೀಡುವ ಮೂಲಕ ಪೊಲೀಸ್ ವ್ಯವಸ್ಥೆಯನ್ನು  ಸ್ವತಂತ್ರ ಸಾಂವಿಧಾನಿಕ ವ್ಯವಸ್ಥೆಯನ್ನಾಗಿ ಪುನರ್ರಚಿಸಬೇಕಾಗಿದೆ. ಇದು ಪ್ರಜಾಪ್ರಭುತ್ವವನ್ನು ಬಲಪಡಿಸುವ, ಮಾನವ ಹತ್ಯೆಗಳನ್ನು ತಡೆಯುವುದಕ್ಕಾಗಿ ತುರ್ತಾಗಿ ಆಗಬೇಕಾದ ಕಾರ್ಯವಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...