Homeಎಕಾನಮಿನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

"ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ"

- Advertisement -
- Advertisement -

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗಿದೆ. ಆದರೆ ಪೇಟಿಯಂನ ಇತರ ಅಪ್ಲಿಕೇಶನ್‌ಗಳಾದ Paytm for Business, Paytm Mall, Paytm Money, ಮತ್ತು ಇನ್ನೂ ಕೆಲವು ಅಪ್ಲಿಕೇಶನ್‌ಗಳು ಡೌನ್‌ಲೋಡ್‌ಗೆ ಲಭ್ಯವಿದೆ.

ಭಾರತದಲ್ಲಿ ಸುಮಾರು 50 ಮಿಲಿಯನ್ ಮಾಸಿಕ ಸಕ್ರಿಯ ಬಳಕೆದಾರರನ್ನು ಪೇಟಿಯಂ ಹೊಂದಿದೆ. ಲಕ್ಷಾಂತರ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿರುವ ಪೇಟಿಎಂ ಅಪ್ಲಿಕೇಶನ್ ಅನ್ನು ತೆಗೆದುಹಾಕುವ ಹಿಂದಿನ ಕಾರಣವನ್ನು ಗೂಗಲ್ ನಿರ್ದಿಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ ಇಂದು ಪೋಸ್ಟ್ ಮಾಡಿದ ಬ್ಲಾಗ್‌ನಲ್ಲಿ ಪೇಟಿಯಂ ಗೂಗಲ್‌ ನೀತಿ-ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪೇಟಿಯಂ ತನ್ನ ಆಪ್ಯ್‌ನಲ್ಲಿ ಗ್ಯಾಂಬ್ಲಿಂಗ್, ಫ್ಯಾಂಟಸಿ ಕ್ರೀಡಾ ಸೇವೆಗಳನ್ನು ಮತ್ತು ಆನ್‌ಲೈನ್ ಕ್ಯಾಸಿನೋಗಳಿಗೆ ಅವಕಾಶ ಮಾಡಿಕೊಟ್ಟಿದೆ. ಡ್ರೀಮ್ 11 ನಂತಹ ಕ್ರೀಡಾ ಬೆಟ್ಟಿಂಗ್‌ಗೆ ಅನುಕೂಲವಾಗುವ ಆನ್‌ಲೈನ್ ಕ್ಯಾಸಿನೊಗಳು ಮತ್ತು ಇತರ ಅನಿಯಂತ್ರಿತ ಜೂಜಾಟದ ಅಪ್ಲಿಕೇಶನ್‌ಗಳನ್ನು ಗೂಗಲ್ ನಿಷೇಧಿಸುತ್ತದೆ ಹೀಗಾಗಿ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್‌ನ ಆಂಡ್ರಾಯ್ಡ್ ಸೆಕ್ಯುರಿಟಿ ಮತ್ತು ಗೌಪ್ಯತೆ ಉಪಾಧ್ಯಕ್ಷೆ  ಸುಝೇನ್ ಫ್ರೇ ತಿಳಿಸಿದ್ದಾರೆ.

“ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು ಡೆವಲಪರ್‌ಗೆ ಮಾಹಿತಿ ನೀಡಿ, ಅಪ್ಲಿಕೇಶನ್ ಅನ್ನು ಮತ್ತೆ ಸರಿಪಡಿಸುವವರೆಗೆ ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ. ಮತ್ತೆ ಮತ್ತೆ ನಮ್ಮ ನೀತಿಗಳನ್ನು ಉಲ್ಲಂಘಿಸಿದರೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ” ಎನ್ನುತ್ತಾರೆ.

ಇದನ್ನೂ ಓದಿ: ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಇನ್ನೂ ಪೇಟಿಯಂ ಕೂಡ ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವುದನ್ನು ತನ್ನ ಗ್ರಾಹಕರಿಗೆ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪೇಟಿಯಂ  “ಹೊಸ ಡೌನ್‌ಲೋಡ್‌ಗಳು ಅಥವಾ ನವೀಕರಣಗಳಿಗಾಗಿ Paytm Android ಅಪ್ಲಿಕೇಶನ್ Google Play Store ನಲ್ಲಿ ತಾತ್ಕಾಲಿಕವಾಗಿ ಲಭ್ಯವಿಲ್ಲ.” ಅತಿ ಶೀಘ್ರದಲ್ಲೇ ಹಿಂತಿರುಗಲಿದೆ. ನಿಮ್ಮ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಿಮ್ಮ Paytm ಅಪ್ಲಿಕೇಶನ್ ಬಳಕೆ  ಮುಂದುವರಿಸಬಹುದು” ಎಂದಿದೆ.

ಆದರೆ ಆಪಲ್ ಆಪ್ಯ್‌ ಸ್ಟೋರ್‌ನಲ್ಲಿ ಪೇಟಿಯಂ ಡೌನ್‌ಲೋಡ್ ಮಾಡಲು ಲಭ್ಯವಿದೆ.


ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...