Homeಎಕಾನಮಿನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

"ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ"

- Advertisement -
- Advertisement -

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗಿದೆ. ಆದರೆ ಪೇಟಿಯಂನ ಇತರ ಅಪ್ಲಿಕೇಶನ್‌ಗಳಾದ Paytm for Business, Paytm Mall, Paytm Money, ಮತ್ತು ಇನ್ನೂ ಕೆಲವು ಅಪ್ಲಿಕೇಶನ್‌ಗಳು ಡೌನ್‌ಲೋಡ್‌ಗೆ ಲಭ್ಯವಿದೆ.

ಭಾರತದಲ್ಲಿ ಸುಮಾರು 50 ಮಿಲಿಯನ್ ಮಾಸಿಕ ಸಕ್ರಿಯ ಬಳಕೆದಾರರನ್ನು ಪೇಟಿಯಂ ಹೊಂದಿದೆ. ಲಕ್ಷಾಂತರ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿರುವ ಪೇಟಿಎಂ ಅಪ್ಲಿಕೇಶನ್ ಅನ್ನು ತೆಗೆದುಹಾಕುವ ಹಿಂದಿನ ಕಾರಣವನ್ನು ಗೂಗಲ್ ನಿರ್ದಿಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ ಇಂದು ಪೋಸ್ಟ್ ಮಾಡಿದ ಬ್ಲಾಗ್‌ನಲ್ಲಿ ಪೇಟಿಯಂ ಗೂಗಲ್‌ ನೀತಿ-ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪೇಟಿಯಂ ತನ್ನ ಆಪ್ಯ್‌ನಲ್ಲಿ ಗ್ಯಾಂಬ್ಲಿಂಗ್, ಫ್ಯಾಂಟಸಿ ಕ್ರೀಡಾ ಸೇವೆಗಳನ್ನು ಮತ್ತು ಆನ್‌ಲೈನ್ ಕ್ಯಾಸಿನೋಗಳಿಗೆ ಅವಕಾಶ ಮಾಡಿಕೊಟ್ಟಿದೆ. ಡ್ರೀಮ್ 11 ನಂತಹ ಕ್ರೀಡಾ ಬೆಟ್ಟಿಂಗ್‌ಗೆ ಅನುಕೂಲವಾಗುವ ಆನ್‌ಲೈನ್ ಕ್ಯಾಸಿನೊಗಳು ಮತ್ತು ಇತರ ಅನಿಯಂತ್ರಿತ ಜೂಜಾಟದ ಅಪ್ಲಿಕೇಶನ್‌ಗಳನ್ನು ಗೂಗಲ್ ನಿಷೇಧಿಸುತ್ತದೆ ಹೀಗಾಗಿ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್‌ನ ಆಂಡ್ರಾಯ್ಡ್ ಸೆಕ್ಯುರಿಟಿ ಮತ್ತು ಗೌಪ್ಯತೆ ಉಪಾಧ್ಯಕ್ಷೆ  ಸುಝೇನ್ ಫ್ರೇ ತಿಳಿಸಿದ್ದಾರೆ.

“ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು ಡೆವಲಪರ್‌ಗೆ ಮಾಹಿತಿ ನೀಡಿ, ಅಪ್ಲಿಕೇಶನ್ ಅನ್ನು ಮತ್ತೆ ಸರಿಪಡಿಸುವವರೆಗೆ ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ. ಮತ್ತೆ ಮತ್ತೆ ನಮ್ಮ ನೀತಿಗಳನ್ನು ಉಲ್ಲಂಘಿಸಿದರೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ” ಎನ್ನುತ್ತಾರೆ.

ಇದನ್ನೂ ಓದಿ: ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಇನ್ನೂ ಪೇಟಿಯಂ ಕೂಡ ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವುದನ್ನು ತನ್ನ ಗ್ರಾಹಕರಿಗೆ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪೇಟಿಯಂ  “ಹೊಸ ಡೌನ್‌ಲೋಡ್‌ಗಳು ಅಥವಾ ನವೀಕರಣಗಳಿಗಾಗಿ Paytm Android ಅಪ್ಲಿಕೇಶನ್ Google Play Store ನಲ್ಲಿ ತಾತ್ಕಾಲಿಕವಾಗಿ ಲಭ್ಯವಿಲ್ಲ.” ಅತಿ ಶೀಘ್ರದಲ್ಲೇ ಹಿಂತಿರುಗಲಿದೆ. ನಿಮ್ಮ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಿಮ್ಮ Paytm ಅಪ್ಲಿಕೇಶನ್ ಬಳಕೆ  ಮುಂದುವರಿಸಬಹುದು” ಎಂದಿದೆ.

ಆದರೆ ಆಪಲ್ ಆಪ್ಯ್‌ ಸ್ಟೋರ್‌ನಲ್ಲಿ ಪೇಟಿಯಂ ಡೌನ್‌ಲೋಡ್ ಮಾಡಲು ಲಭ್ಯವಿದೆ.


ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...