Homeಎಕಾನಮಿನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

"ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ"

- Advertisement -
- Advertisement -

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗಿದೆ. ಆದರೆ ಪೇಟಿಯಂನ ಇತರ ಅಪ್ಲಿಕೇಶನ್‌ಗಳಾದ Paytm for Business, Paytm Mall, Paytm Money, ಮತ್ತು ಇನ್ನೂ ಕೆಲವು ಅಪ್ಲಿಕೇಶನ್‌ಗಳು ಡೌನ್‌ಲೋಡ್‌ಗೆ ಲಭ್ಯವಿದೆ.

ಭಾರತದಲ್ಲಿ ಸುಮಾರು 50 ಮಿಲಿಯನ್ ಮಾಸಿಕ ಸಕ್ರಿಯ ಬಳಕೆದಾರರನ್ನು ಪೇಟಿಯಂ ಹೊಂದಿದೆ. ಲಕ್ಷಾಂತರ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿರುವ ಪೇಟಿಎಂ ಅಪ್ಲಿಕೇಶನ್ ಅನ್ನು ತೆಗೆದುಹಾಕುವ ಹಿಂದಿನ ಕಾರಣವನ್ನು ಗೂಗಲ್ ನಿರ್ದಿಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ ಇಂದು ಪೋಸ್ಟ್ ಮಾಡಿದ ಬ್ಲಾಗ್‌ನಲ್ಲಿ ಪೇಟಿಯಂ ಗೂಗಲ್‌ ನೀತಿ-ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪೇಟಿಯಂ ತನ್ನ ಆಪ್ಯ್‌ನಲ್ಲಿ ಗ್ಯಾಂಬ್ಲಿಂಗ್, ಫ್ಯಾಂಟಸಿ ಕ್ರೀಡಾ ಸೇವೆಗಳನ್ನು ಮತ್ತು ಆನ್‌ಲೈನ್ ಕ್ಯಾಸಿನೋಗಳಿಗೆ ಅವಕಾಶ ಮಾಡಿಕೊಟ್ಟಿದೆ. ಡ್ರೀಮ್ 11 ನಂತಹ ಕ್ರೀಡಾ ಬೆಟ್ಟಿಂಗ್‌ಗೆ ಅನುಕೂಲವಾಗುವ ಆನ್‌ಲೈನ್ ಕ್ಯಾಸಿನೊಗಳು ಮತ್ತು ಇತರ ಅನಿಯಂತ್ರಿತ ಜೂಜಾಟದ ಅಪ್ಲಿಕೇಶನ್‌ಗಳನ್ನು ಗೂಗಲ್ ನಿಷೇಧಿಸುತ್ತದೆ ಹೀಗಾಗಿ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್‌ನ ಆಂಡ್ರಾಯ್ಡ್ ಸೆಕ್ಯುರಿಟಿ ಮತ್ತು ಗೌಪ್ಯತೆ ಉಪಾಧ್ಯಕ್ಷೆ  ಸುಝೇನ್ ಫ್ರೇ ತಿಳಿಸಿದ್ದಾರೆ.

“ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು ಡೆವಲಪರ್‌ಗೆ ಮಾಹಿತಿ ನೀಡಿ, ಅಪ್ಲಿಕೇಶನ್ ಅನ್ನು ಮತ್ತೆ ಸರಿಪಡಿಸುವವರೆಗೆ ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ. ಮತ್ತೆ ಮತ್ತೆ ನಮ್ಮ ನೀತಿಗಳನ್ನು ಉಲ್ಲಂಘಿಸಿದರೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ” ಎನ್ನುತ್ತಾರೆ.

ಇದನ್ನೂ ಓದಿ: ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಇನ್ನೂ ಪೇಟಿಯಂ ಕೂಡ ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವುದನ್ನು ತನ್ನ ಗ್ರಾಹಕರಿಗೆ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪೇಟಿಯಂ  “ಹೊಸ ಡೌನ್‌ಲೋಡ್‌ಗಳು ಅಥವಾ ನವೀಕರಣಗಳಿಗಾಗಿ Paytm Android ಅಪ್ಲಿಕೇಶನ್ Google Play Store ನಲ್ಲಿ ತಾತ್ಕಾಲಿಕವಾಗಿ ಲಭ್ಯವಿಲ್ಲ.” ಅತಿ ಶೀಘ್ರದಲ್ಲೇ ಹಿಂತಿರುಗಲಿದೆ. ನಿಮ್ಮ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಿಮ್ಮ Paytm ಅಪ್ಲಿಕೇಶನ್ ಬಳಕೆ  ಮುಂದುವರಿಸಬಹುದು” ಎಂದಿದೆ.

ಆದರೆ ಆಪಲ್ ಆಪ್ಯ್‌ ಸ್ಟೋರ್‌ನಲ್ಲಿ ಪೇಟಿಯಂ ಡೌನ್‌ಲೋಡ್ ಮಾಡಲು ಲಭ್ಯವಿದೆ.


ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...