Homeಮುಖಪುಟ'ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ': ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

- Advertisement -
- Advertisement -

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com ವರದಿ ಮಾಡಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವಿ ಅವರು ಕೃಷ್ಣ ಹರಿ, ನರಸಿಂಹ ಯಾದವ್, ಕುಂದನ್ ಕುಮಾರ್ ಯಾದವ್, ಅಜಯ್ ಕುಮಾರ್ ಸಿಂಗ್, ಜಿತೇಂದ್ರ ಸಿಂಗ್ ಯಾದವ್, ರಾಜಾ ಗುರ್ಜರ್, ಅಜಯ್ ಕುಮಾರ್ ವಿಮಲ್ @ ಬಂಟು, ಸೌರಭ್ ಸಿಂಗ್ ಮತ್ತು ಅರ್ಬಾಝ್ ಖಾನ್ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ನ್ಯಾಯಾಧೀಶರು ತಮ್ಮ ವಿವರವಾದ ಆದೇಶದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ‘ರಾಜಕೀಯ ಭಿನ್ನಾಭಿಪ್ರಾಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ‘ಪುನರಾವರ್ತಿತ ಹಿಂಸಾಚಾರ ಅಥವಾ ಸಂಘಟಿತ ಅಪರಾಧ’ ಅಲ್ಲ ಎಂಬುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಈ ಪ್ರತಿಭಟನೆಯು ಗರಿಷ್ಠ ಮಟ್ಟದಲ್ಲಿ, ಒಂದು ಸಾರ್ವಜನಿಕ ಕಾರ್ಯಕ್ರಮದ ಸಮಯದಲ್ಲಿ ನಡೆದ ಸಾಂಕೇತಿಕ ರಾಜಕೀಯ ಟೀಕೆಯಾಗಿತ್ತು. ನಾಯಕರ ಚಿತ್ರವಿರುವ ಟಿ-ಶರ್ಟ್‌ಗಳನ್ನು ಧರಿಸುವುದು, ಕೋಮು ಅಥವಾ ಪ್ರಾದೇಶಿಕ ದ್ವೇಷವಿಲ್ಲದ ಮತ್ತು ಪ್ರಚೋದನಕಾರಿಯಲ್ಲದ ಘೋಷಣೆಗಳನ್ನು ಕೂಗುವುದು ಹಾಗೂ ತಾತ್ಕಾಲಿಕವಾಗಿ ಗುಂಪು ಸೇರುವುದು ಇದರಲ್ಲಿ ಕಂಡುಬಂದಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಬಗ್ಗೆ ಅಥವಾ ಪ್ರತಿನಿಧಿಗಳಲ್ಲಿ ಭೀತಿ ಉಂಟುಮಾಡಿದ ಬಗ್ಗೆ ಯಾವುದೇ ಪುರಾವೆಗಳಿಲ್ಲ; ಬದಲಾಗಿ, ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಕ್ರಮಬದ್ಧವಾಗಿಯೇ ಅವರು ಹೊರಬಂದಿದ್ದಾರೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಯಾವುದೇ ತನಿಖಾ ಅವಶ್ಯಕತೆಯಿಲ್ಲದೆ, ದೀರ್ಘಾವಧಿಯ ಪೂರ್ವ ವಿಚಾರಣೆಯ ಬಂಧನವು ಸಂವಿಧಾನದ 21 ನೇ ವಿಧಿಯಡಿ ಖಾತ್ರಿಪಡಿಸಲಾದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಹೊರಿಸಲಾದ ಯಾವುದೇ ಅಪರಾಧದ ಸೆಕ್ಷನ್‌ಗಳು ಏಳು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಹೊಂದಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಅಲ್ಲದೆ, ಶಿಕ್ಷೆಯ ಅವಧಿಯು ಒಂದಾದ ನಂತರ ಒಂದು ಜಾರಿಯಾಗಬಹುದು ಎಂಬ ಪೊಲೀಸರ ವಾದವನ್ನು ತಿರಸ್ಕರಿಸಿದೆ.

“ಪೊಲೀಸರ ಈ ವಾದವು ಜಾಮೀನು ನೀಡುವ ಈ ಮಧ್ಯಂತರ ಹಂತದಲ್ಲಿ ಯಾವುದೇ ನ್ಯಾಯಶಾಸ್ತ್ರದ ಆಧಾರವನ್ನು ಹೊಂದಿಲ್ಲ; ಇಲ್ಲಿ ನ್ಯಾಯಾಂಗದ ದೃಷ್ಟಿಯು ಭವಿಷ್ಯದಲ್ಲಿ ಸಂಭವಿಸಬಹುದಾದ ಶಿಕ್ಷೆಯ ಮರೀಚಿಕೆಯ ಮೇಲಲ್ಲ, ಬದಲಾಗಿ ವಿಚಾರಣಾಪೂರ್ವ ಸ್ವಾತಂತ್ರ್ಯದ ನೈಜ ಸತ್ಯದ ಮೇಲೆ ನೆಟ್ಟಿದೆ” ಎಂದು ನ್ಯಾಯಾಲಯವು ಹೇಳಿದೆ.

“ಯಾವುದೇ ಅನಿವಾರ್ಯ ಅಗತ್ಯವಿಲ್ಲದೆ ಮತ್ತು ತನಿಖೆಗೆ ಪೂರಕವಾದ ಯಾವುದೇ ಬೇಡಿಕೆಗಳಿಲ್ಲದೆ ನಡೆಸುವ ವಿಚಾರಣಾಪೂರ್ವ ಬಂಧನವು ಅಂತಿಮವಾಗಿ ಅಪರಾಧ ಸಾಬೀತಾಗುವ ಮೊದಲೇ ವಿಧಿಸುವ ಕಾನೂನುಬಾಹಿರ ಮುನ್ನೆಚ್ಚರಿಕೆಯ ಶಿಕ್ಷೆಯಾಗಿ ಬದಲಾಗುತ್ತದೆ. ಇದು ಕ್ರಿಮಿನಲ್ ನ್ಯಾಯಶಾಸ್ತ್ರದ ಮೂಲಭೂತ ತತ್ವಗಳಿಗೆ ವಿರುದ್ಧವಾದ ದೊಡ್ಡ ವಿಪಥನವಾಗಿದೆ; ಏಕೆಂದರೆ ಈ ತತ್ವಗಳು ವ್ಯಕ್ತಿ ಸ್ವಾತಂತ್ರ್ಯವನ್ನು ಆಡಳಿತಾತ್ಮಕ ನಿಯಮವೆಂದು ಪರಿಗಣಿಸುತ್ತವೆ ಮತ್ತು ಕಾರಾಗೃಹ ವಾಸವನ್ನು ಅತ್ಯಂತ ಸೀಮಿತವಾದ ಅಪವಾದವನ್ನಾಗಿ ಮಾತ್ರ ನೋಡುತ್ತವೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ತನ್ನ ವಾದದಲ್ಲಿ, ಆರೋಪಿಗಳು ನಡೆಸಿದ ಪ್ರತಿಭಟನೆಯು ಒಂದು ಅತ್ಯಂತ ಪ್ರಮುಖವಾದ ಜಾಗತಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ರಾಷ್ಟ್ರೀಯ ಭದ್ರತೆ, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದಿದೆ ಎಂದು ಪ್ರತಿಪಾದಿಸಿತ್ತು.

ಪ್ರಕರಣದ ತನಿಖೆಯು ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಆರೋಪಿಗಳು ಸಾಕ್ಷ್ಯಧಾರಗಳನ್ನು ನಾಶಪಡಿಸುವ ಅಥವಾ ತಿರುಚುವ ಅಪಾಯವಿದೆ ಎಂದು ಹೇಳಿತ್ತು.

ಆದರೆ, ಹೋರಾಟಗಾರರ ಪರವಾಗಿ ಹಾಜರಾದ ವಕೀಲರು, ಆರೋಪಿಸಲಾದ ಎಲ್ಲಾ ಅಪರಾಧಗಳೂ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಹೊಂದಿವೆ. ಹೀಗಾಗಿ, ‘ಸತೇಂದರ್ ಕುಮಾರ್ ಆಂಟಿಲ್’ ಪ್ರಕರಣದ ತೀರ್ಪಿನ ಅಡಿಯಲ್ಲಿ ಈ ಪ್ರಕರಣವು ‘ವರ್ಗ ಎ’ಗೆ ಸೇರುತ್ತದೆ, ಇಲ್ಲಿ ಜಾಮೀನು ನೀಡುವುದೇ ನಿಯಮವಾಗಿದೆ ಎಂದು ವಾದಿಸಿದ್ದಾರೆ.

ಈ ಪ್ರತಿಭಟನೆಯು ಶಾಂತಿಯುತವಾಗಿತ್ತು, ಯಾವುದೇ ಹಿಂಸಾಚಾರ, ಹಾನಿ ಅಥವಾ ಬೆದರಿಕೆಯಿಲ್ಲದ ಸಾಂಕೇತಿಕ ರಾಜಕೀಯ ಭಿನ್ನಾಭಿಪ್ರಾಯವಾಗಿತ್ತು. ಇದು ಸಂವಿಧಾನದ ವಿಧಿ 19(1)(ಎ) ಮತ್ತು 19(1)(ಬಿ) ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ 9 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಆದೇಶಿಸಿದೆ ಎಂದು barandbench.com ತಿಳಿಸಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಹಿರಿಯ ನ್ಯಾಯವಾದಿ ತನ್ವೀರ್ ಅಹ್ಮದ್ ಮೀರ್ ಅವರೊಂದಿಗೆ ವಕೀಲರಾದ ರೂಪೇಶ್ ಸಿಂಗ್ ಭದೌರಿಯಾ, ಚಿತ್ವಾನ್ ಗೋದಾರಾ, ರಿಷಭ್ ರಂಜನ್, ಅಮನ್ ಪ್ರಸಾದ್, ವಿವೇಕ್ ಪುನಿಯಾ, ಸುಮಿತ್ ರಾವತ್, ಕೇಶವ್ ನಾಗಿ, ಲಿತೇಶ್ ಬಾತ್ರಾ, ಮರೂಫ್ ಖಾನ್, ಕಾಶಿಫ್ ಅಹ್ಮದ್ ಖಾನ್, ಪ್ರಖರ್ ವಸಿಷ್ಠ ಮತ್ತು ಅಮೃತ್ ಯಾದವ್ ಹಾಜರಾಗಿದ್ದರು.

ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ಅತುಲ್ ಶ್ರೀವಾಸ್ತವ ಮತ್ತು ಕಾರ್ತಿಕೇಯ ಶರ್ಮಾ ಅವರು ಹಾಜರಾಗಿದ್ದರು.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...