Homeಮುಖಪುಟ'ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ': ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

- Advertisement -
- Advertisement -

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com ವರದಿ ಮಾಡಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವಿ ಅವರು ಕೃಷ್ಣ ಹರಿ, ನರಸಿಂಹ ಯಾದವ್, ಕುಂದನ್ ಕುಮಾರ್ ಯಾದವ್, ಅಜಯ್ ಕುಮಾರ್ ಸಿಂಗ್, ಜಿತೇಂದ್ರ ಸಿಂಗ್ ಯಾದವ್, ರಾಜಾ ಗುರ್ಜರ್, ಅಜಯ್ ಕುಮಾರ್ ವಿಮಲ್ @ ಬಂಟು, ಸೌರಭ್ ಸಿಂಗ್ ಮತ್ತು ಅರ್ಬಾಝ್ ಖಾನ್ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ನ್ಯಾಯಾಧೀಶರು ತಮ್ಮ ವಿವರವಾದ ಆದೇಶದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ‘ರಾಜಕೀಯ ಭಿನ್ನಾಭಿಪ್ರಾಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ‘ಪುನರಾವರ್ತಿತ ಹಿಂಸಾಚಾರ ಅಥವಾ ಸಂಘಟಿತ ಅಪರಾಧ’ ಅಲ್ಲ ಎಂಬುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಈ ಪ್ರತಿಭಟನೆಯು ಗರಿಷ್ಠ ಮಟ್ಟದಲ್ಲಿ, ಒಂದು ಸಾರ್ವಜನಿಕ ಕಾರ್ಯಕ್ರಮದ ಸಮಯದಲ್ಲಿ ನಡೆದ ಸಾಂಕೇತಿಕ ರಾಜಕೀಯ ಟೀಕೆಯಾಗಿತ್ತು. ನಾಯಕರ ಚಿತ್ರವಿರುವ ಟಿ-ಶರ್ಟ್‌ಗಳನ್ನು ಧರಿಸುವುದು, ಕೋಮು ಅಥವಾ ಪ್ರಾದೇಶಿಕ ದ್ವೇಷವಿಲ್ಲದ ಮತ್ತು ಪ್ರಚೋದನಕಾರಿಯಲ್ಲದ ಘೋಷಣೆಗಳನ್ನು ಕೂಗುವುದು ಹಾಗೂ ತಾತ್ಕಾಲಿಕವಾಗಿ ಗುಂಪು ಸೇರುವುದು ಇದರಲ್ಲಿ ಕಂಡುಬಂದಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಬಗ್ಗೆ ಅಥವಾ ಪ್ರತಿನಿಧಿಗಳಲ್ಲಿ ಭೀತಿ ಉಂಟುಮಾಡಿದ ಬಗ್ಗೆ ಯಾವುದೇ ಪುರಾವೆಗಳಿಲ್ಲ; ಬದಲಾಗಿ, ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಕ್ರಮಬದ್ಧವಾಗಿಯೇ ಅವರು ಹೊರಬಂದಿದ್ದಾರೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಯಾವುದೇ ತನಿಖಾ ಅವಶ್ಯಕತೆಯಿಲ್ಲದೆ, ದೀರ್ಘಾವಧಿಯ ಪೂರ್ವ ವಿಚಾರಣೆಯ ಬಂಧನವು ಸಂವಿಧಾನದ 21 ನೇ ವಿಧಿಯಡಿ ಖಾತ್ರಿಪಡಿಸಲಾದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಹೊರಿಸಲಾದ ಯಾವುದೇ ಅಪರಾಧದ ಸೆಕ್ಷನ್‌ಗಳು ಏಳು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಹೊಂದಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಅಲ್ಲದೆ, ಶಿಕ್ಷೆಯ ಅವಧಿಯು ಒಂದಾದ ನಂತರ ಒಂದು ಜಾರಿಯಾಗಬಹುದು ಎಂಬ ಪೊಲೀಸರ ವಾದವನ್ನು ತಿರಸ್ಕರಿಸಿದೆ.

“ಪೊಲೀಸರ ಈ ವಾದವು ಜಾಮೀನು ನೀಡುವ ಈ ಮಧ್ಯಂತರ ಹಂತದಲ್ಲಿ ಯಾವುದೇ ನ್ಯಾಯಶಾಸ್ತ್ರದ ಆಧಾರವನ್ನು ಹೊಂದಿಲ್ಲ; ಇಲ್ಲಿ ನ್ಯಾಯಾಂಗದ ದೃಷ್ಟಿಯು ಭವಿಷ್ಯದಲ್ಲಿ ಸಂಭವಿಸಬಹುದಾದ ಶಿಕ್ಷೆಯ ಮರೀಚಿಕೆಯ ಮೇಲಲ್ಲ, ಬದಲಾಗಿ ವಿಚಾರಣಾಪೂರ್ವ ಸ್ವಾತಂತ್ರ್ಯದ ನೈಜ ಸತ್ಯದ ಮೇಲೆ ನೆಟ್ಟಿದೆ” ಎಂದು ನ್ಯಾಯಾಲಯವು ಹೇಳಿದೆ.

“ಯಾವುದೇ ಅನಿವಾರ್ಯ ಅಗತ್ಯವಿಲ್ಲದೆ ಮತ್ತು ತನಿಖೆಗೆ ಪೂರಕವಾದ ಯಾವುದೇ ಬೇಡಿಕೆಗಳಿಲ್ಲದೆ ನಡೆಸುವ ವಿಚಾರಣಾಪೂರ್ವ ಬಂಧನವು ಅಂತಿಮವಾಗಿ ಅಪರಾಧ ಸಾಬೀತಾಗುವ ಮೊದಲೇ ವಿಧಿಸುವ ಕಾನೂನುಬಾಹಿರ ಮುನ್ನೆಚ್ಚರಿಕೆಯ ಶಿಕ್ಷೆಯಾಗಿ ಬದಲಾಗುತ್ತದೆ. ಇದು ಕ್ರಿಮಿನಲ್ ನ್ಯಾಯಶಾಸ್ತ್ರದ ಮೂಲಭೂತ ತತ್ವಗಳಿಗೆ ವಿರುದ್ಧವಾದ ದೊಡ್ಡ ವಿಪಥನವಾಗಿದೆ; ಏಕೆಂದರೆ ಈ ತತ್ವಗಳು ವ್ಯಕ್ತಿ ಸ್ವಾತಂತ್ರ್ಯವನ್ನು ಆಡಳಿತಾತ್ಮಕ ನಿಯಮವೆಂದು ಪರಿಗಣಿಸುತ್ತವೆ ಮತ್ತು ಕಾರಾಗೃಹ ವಾಸವನ್ನು ಅತ್ಯಂತ ಸೀಮಿತವಾದ ಅಪವಾದವನ್ನಾಗಿ ಮಾತ್ರ ನೋಡುತ್ತವೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ತನ್ನ ವಾದದಲ್ಲಿ, ಆರೋಪಿಗಳು ನಡೆಸಿದ ಪ್ರತಿಭಟನೆಯು ಒಂದು ಅತ್ಯಂತ ಪ್ರಮುಖವಾದ ಜಾಗತಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ರಾಷ್ಟ್ರೀಯ ಭದ್ರತೆ, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದಿದೆ ಎಂದು ಪ್ರತಿಪಾದಿಸಿತ್ತು.

ಪ್ರಕರಣದ ತನಿಖೆಯು ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಆರೋಪಿಗಳು ಸಾಕ್ಷ್ಯಧಾರಗಳನ್ನು ನಾಶಪಡಿಸುವ ಅಥವಾ ತಿರುಚುವ ಅಪಾಯವಿದೆ ಎಂದು ಹೇಳಿತ್ತು.

ಆದರೆ, ಹೋರಾಟಗಾರರ ಪರವಾಗಿ ಹಾಜರಾದ ವಕೀಲರು, ಆರೋಪಿಸಲಾದ ಎಲ್ಲಾ ಅಪರಾಧಗಳೂ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಹೊಂದಿವೆ. ಹೀಗಾಗಿ, ‘ಸತೇಂದರ್ ಕುಮಾರ್ ಆಂಟಿಲ್’ ಪ್ರಕರಣದ ತೀರ್ಪಿನ ಅಡಿಯಲ್ಲಿ ಈ ಪ್ರಕರಣವು ‘ವರ್ಗ ಎ’ಗೆ ಸೇರುತ್ತದೆ, ಇಲ್ಲಿ ಜಾಮೀನು ನೀಡುವುದೇ ನಿಯಮವಾಗಿದೆ ಎಂದು ವಾದಿಸಿದ್ದಾರೆ.

ಈ ಪ್ರತಿಭಟನೆಯು ಶಾಂತಿಯುತವಾಗಿತ್ತು, ಯಾವುದೇ ಹಿಂಸಾಚಾರ, ಹಾನಿ ಅಥವಾ ಬೆದರಿಕೆಯಿಲ್ಲದ ಸಾಂಕೇತಿಕ ರಾಜಕೀಯ ಭಿನ್ನಾಭಿಪ್ರಾಯವಾಗಿತ್ತು. ಇದು ಸಂವಿಧಾನದ ವಿಧಿ 19(1)(ಎ) ಮತ್ತು 19(1)(ಬಿ) ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ 9 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಆದೇಶಿಸಿದೆ ಎಂದು barandbench.com ತಿಳಿಸಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಹಿರಿಯ ನ್ಯಾಯವಾದಿ ತನ್ವೀರ್ ಅಹ್ಮದ್ ಮೀರ್ ಅವರೊಂದಿಗೆ ವಕೀಲರಾದ ರೂಪೇಶ್ ಸಿಂಗ್ ಭದೌರಿಯಾ, ಚಿತ್ವಾನ್ ಗೋದಾರಾ, ರಿಷಭ್ ರಂಜನ್, ಅಮನ್ ಪ್ರಸಾದ್, ವಿವೇಕ್ ಪುನಿಯಾ, ಸುಮಿತ್ ರಾವತ್, ಕೇಶವ್ ನಾಗಿ, ಲಿತೇಶ್ ಬಾತ್ರಾ, ಮರೂಫ್ ಖಾನ್, ಕಾಶಿಫ್ ಅಹ್ಮದ್ ಖಾನ್, ಪ್ರಖರ್ ವಸಿಷ್ಠ ಮತ್ತು ಅಮೃತ್ ಯಾದವ್ ಹಾಜರಾಗಿದ್ದರು.

ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ಅತುಲ್ ಶ್ರೀವಾಸ್ತವ ಮತ್ತು ಕಾರ್ತಿಕೇಯ ಶರ್ಮಾ ಅವರು ಹಾಜರಾಗಿದ್ದರು.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...