Homeಮುಖಪುಟ'ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ': ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

- Advertisement -
- Advertisement -

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com ವರದಿ ಮಾಡಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವಿ ಅವರು ಕೃಷ್ಣ ಹರಿ, ನರಸಿಂಹ ಯಾದವ್, ಕುಂದನ್ ಕುಮಾರ್ ಯಾದವ್, ಅಜಯ್ ಕುಮಾರ್ ಸಿಂಗ್, ಜಿತೇಂದ್ರ ಸಿಂಗ್ ಯಾದವ್, ರಾಜಾ ಗುರ್ಜರ್, ಅಜಯ್ ಕುಮಾರ್ ವಿಮಲ್ @ ಬಂಟು, ಸೌರಭ್ ಸಿಂಗ್ ಮತ್ತು ಅರ್ಬಾಝ್ ಖಾನ್ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ನ್ಯಾಯಾಧೀಶರು ತಮ್ಮ ವಿವರವಾದ ಆದೇಶದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ‘ರಾಜಕೀಯ ಭಿನ್ನಾಭಿಪ್ರಾಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ‘ಪುನರಾವರ್ತಿತ ಹಿಂಸಾಚಾರ ಅಥವಾ ಸಂಘಟಿತ ಅಪರಾಧ’ ಅಲ್ಲ ಎಂಬುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಈ ಪ್ರತಿಭಟನೆಯು ಗರಿಷ್ಠ ಮಟ್ಟದಲ್ಲಿ, ಒಂದು ಸಾರ್ವಜನಿಕ ಕಾರ್ಯಕ್ರಮದ ಸಮಯದಲ್ಲಿ ನಡೆದ ಸಾಂಕೇತಿಕ ರಾಜಕೀಯ ಟೀಕೆಯಾಗಿತ್ತು. ನಾಯಕರ ಚಿತ್ರವಿರುವ ಟಿ-ಶರ್ಟ್‌ಗಳನ್ನು ಧರಿಸುವುದು, ಕೋಮು ಅಥವಾ ಪ್ರಾದೇಶಿಕ ದ್ವೇಷವಿಲ್ಲದ ಮತ್ತು ಪ್ರಚೋದನಕಾರಿಯಲ್ಲದ ಘೋಷಣೆಗಳನ್ನು ಕೂಗುವುದು ಹಾಗೂ ತಾತ್ಕಾಲಿಕವಾಗಿ ಗುಂಪು ಸೇರುವುದು ಇದರಲ್ಲಿ ಕಂಡುಬಂದಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಬಗ್ಗೆ ಅಥವಾ ಪ್ರತಿನಿಧಿಗಳಲ್ಲಿ ಭೀತಿ ಉಂಟುಮಾಡಿದ ಬಗ್ಗೆ ಯಾವುದೇ ಪುರಾವೆಗಳಿಲ್ಲ; ಬದಲಾಗಿ, ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಕ್ರಮಬದ್ಧವಾಗಿಯೇ ಅವರು ಹೊರಬಂದಿದ್ದಾರೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಯಾವುದೇ ತನಿಖಾ ಅವಶ್ಯಕತೆಯಿಲ್ಲದೆ, ದೀರ್ಘಾವಧಿಯ ಪೂರ್ವ ವಿಚಾರಣೆಯ ಬಂಧನವು ಸಂವಿಧಾನದ 21 ನೇ ವಿಧಿಯಡಿ ಖಾತ್ರಿಪಡಿಸಲಾದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಹೊರಿಸಲಾದ ಯಾವುದೇ ಅಪರಾಧದ ಸೆಕ್ಷನ್‌ಗಳು ಏಳು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಹೊಂದಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಅಲ್ಲದೆ, ಶಿಕ್ಷೆಯ ಅವಧಿಯು ಒಂದಾದ ನಂತರ ಒಂದು ಜಾರಿಯಾಗಬಹುದು ಎಂಬ ಪೊಲೀಸರ ವಾದವನ್ನು ತಿರಸ್ಕರಿಸಿದೆ.

“ಪೊಲೀಸರ ಈ ವಾದವು ಜಾಮೀನು ನೀಡುವ ಈ ಮಧ್ಯಂತರ ಹಂತದಲ್ಲಿ ಯಾವುದೇ ನ್ಯಾಯಶಾಸ್ತ್ರದ ಆಧಾರವನ್ನು ಹೊಂದಿಲ್ಲ; ಇಲ್ಲಿ ನ್ಯಾಯಾಂಗದ ದೃಷ್ಟಿಯು ಭವಿಷ್ಯದಲ್ಲಿ ಸಂಭವಿಸಬಹುದಾದ ಶಿಕ್ಷೆಯ ಮರೀಚಿಕೆಯ ಮೇಲಲ್ಲ, ಬದಲಾಗಿ ವಿಚಾರಣಾಪೂರ್ವ ಸ್ವಾತಂತ್ರ್ಯದ ನೈಜ ಸತ್ಯದ ಮೇಲೆ ನೆಟ್ಟಿದೆ” ಎಂದು ನ್ಯಾಯಾಲಯವು ಹೇಳಿದೆ.

“ಯಾವುದೇ ಅನಿವಾರ್ಯ ಅಗತ್ಯವಿಲ್ಲದೆ ಮತ್ತು ತನಿಖೆಗೆ ಪೂರಕವಾದ ಯಾವುದೇ ಬೇಡಿಕೆಗಳಿಲ್ಲದೆ ನಡೆಸುವ ವಿಚಾರಣಾಪೂರ್ವ ಬಂಧನವು ಅಂತಿಮವಾಗಿ ಅಪರಾಧ ಸಾಬೀತಾಗುವ ಮೊದಲೇ ವಿಧಿಸುವ ಕಾನೂನುಬಾಹಿರ ಮುನ್ನೆಚ್ಚರಿಕೆಯ ಶಿಕ್ಷೆಯಾಗಿ ಬದಲಾಗುತ್ತದೆ. ಇದು ಕ್ರಿಮಿನಲ್ ನ್ಯಾಯಶಾಸ್ತ್ರದ ಮೂಲಭೂತ ತತ್ವಗಳಿಗೆ ವಿರುದ್ಧವಾದ ದೊಡ್ಡ ವಿಪಥನವಾಗಿದೆ; ಏಕೆಂದರೆ ಈ ತತ್ವಗಳು ವ್ಯಕ್ತಿ ಸ್ವಾತಂತ್ರ್ಯವನ್ನು ಆಡಳಿತಾತ್ಮಕ ನಿಯಮವೆಂದು ಪರಿಗಣಿಸುತ್ತವೆ ಮತ್ತು ಕಾರಾಗೃಹ ವಾಸವನ್ನು ಅತ್ಯಂತ ಸೀಮಿತವಾದ ಅಪವಾದವನ್ನಾಗಿ ಮಾತ್ರ ನೋಡುತ್ತವೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ತನ್ನ ವಾದದಲ್ಲಿ, ಆರೋಪಿಗಳು ನಡೆಸಿದ ಪ್ರತಿಭಟನೆಯು ಒಂದು ಅತ್ಯಂತ ಪ್ರಮುಖವಾದ ಜಾಗತಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ರಾಷ್ಟ್ರೀಯ ಭದ್ರತೆ, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದಿದೆ ಎಂದು ಪ್ರತಿಪಾದಿಸಿತ್ತು.

ಪ್ರಕರಣದ ತನಿಖೆಯು ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಆರೋಪಿಗಳು ಸಾಕ್ಷ್ಯಧಾರಗಳನ್ನು ನಾಶಪಡಿಸುವ ಅಥವಾ ತಿರುಚುವ ಅಪಾಯವಿದೆ ಎಂದು ಹೇಳಿತ್ತು.

ಆದರೆ, ಹೋರಾಟಗಾರರ ಪರವಾಗಿ ಹಾಜರಾದ ವಕೀಲರು, ಆರೋಪಿಸಲಾದ ಎಲ್ಲಾ ಅಪರಾಧಗಳೂ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಹೊಂದಿವೆ. ಹೀಗಾಗಿ, ‘ಸತೇಂದರ್ ಕುಮಾರ್ ಆಂಟಿಲ್’ ಪ್ರಕರಣದ ತೀರ್ಪಿನ ಅಡಿಯಲ್ಲಿ ಈ ಪ್ರಕರಣವು ‘ವರ್ಗ ಎ’ಗೆ ಸೇರುತ್ತದೆ, ಇಲ್ಲಿ ಜಾಮೀನು ನೀಡುವುದೇ ನಿಯಮವಾಗಿದೆ ಎಂದು ವಾದಿಸಿದ್ದಾರೆ.

ಈ ಪ್ರತಿಭಟನೆಯು ಶಾಂತಿಯುತವಾಗಿತ್ತು, ಯಾವುದೇ ಹಿಂಸಾಚಾರ, ಹಾನಿ ಅಥವಾ ಬೆದರಿಕೆಯಿಲ್ಲದ ಸಾಂಕೇತಿಕ ರಾಜಕೀಯ ಭಿನ್ನಾಭಿಪ್ರಾಯವಾಗಿತ್ತು. ಇದು ಸಂವಿಧಾನದ ವಿಧಿ 19(1)(ಎ) ಮತ್ತು 19(1)(ಬಿ) ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ 9 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಆದೇಶಿಸಿದೆ ಎಂದು barandbench.com ತಿಳಿಸಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಹಿರಿಯ ನ್ಯಾಯವಾದಿ ತನ್ವೀರ್ ಅಹ್ಮದ್ ಮೀರ್ ಅವರೊಂದಿಗೆ ವಕೀಲರಾದ ರೂಪೇಶ್ ಸಿಂಗ್ ಭದೌರಿಯಾ, ಚಿತ್ವಾನ್ ಗೋದಾರಾ, ರಿಷಭ್ ರಂಜನ್, ಅಮನ್ ಪ್ರಸಾದ್, ವಿವೇಕ್ ಪುನಿಯಾ, ಸುಮಿತ್ ರಾವತ್, ಕೇಶವ್ ನಾಗಿ, ಲಿತೇಶ್ ಬಾತ್ರಾ, ಮರೂಫ್ ಖಾನ್, ಕಾಶಿಫ್ ಅಹ್ಮದ್ ಖಾನ್, ಪ್ರಖರ್ ವಸಿಷ್ಠ ಮತ್ತು ಅಮೃತ್ ಯಾದವ್ ಹಾಜರಾಗಿದ್ದರು.

ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ಅತುಲ್ ಶ್ರೀವಾಸ್ತವ ಮತ್ತು ಕಾರ್ತಿಕೇಯ ಶರ್ಮಾ ಅವರು ಹಾಜರಾಗಿದ್ದರು.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...