Homeಮುಖಪುಟ'ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ': ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

- Advertisement -
- Advertisement -

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com ವರದಿ ಮಾಡಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವಿ ಅವರು ಕೃಷ್ಣ ಹರಿ, ನರಸಿಂಹ ಯಾದವ್, ಕುಂದನ್ ಕುಮಾರ್ ಯಾದವ್, ಅಜಯ್ ಕುಮಾರ್ ಸಿಂಗ್, ಜಿತೇಂದ್ರ ಸಿಂಗ್ ಯಾದವ್, ರಾಜಾ ಗುರ್ಜರ್, ಅಜಯ್ ಕುಮಾರ್ ವಿಮಲ್ @ ಬಂಟು, ಸೌರಭ್ ಸಿಂಗ್ ಮತ್ತು ಅರ್ಬಾಝ್ ಖಾನ್ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ನ್ಯಾಯಾಧೀಶರು ತಮ್ಮ ವಿವರವಾದ ಆದೇಶದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ‘ರಾಜಕೀಯ ಭಿನ್ನಾಭಿಪ್ರಾಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ‘ಪುನರಾವರ್ತಿತ ಹಿಂಸಾಚಾರ ಅಥವಾ ಸಂಘಟಿತ ಅಪರಾಧ’ ಅಲ್ಲ ಎಂಬುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಈ ಪ್ರತಿಭಟನೆಯು ಗರಿಷ್ಠ ಮಟ್ಟದಲ್ಲಿ, ಒಂದು ಸಾರ್ವಜನಿಕ ಕಾರ್ಯಕ್ರಮದ ಸಮಯದಲ್ಲಿ ನಡೆದ ಸಾಂಕೇತಿಕ ರಾಜಕೀಯ ಟೀಕೆಯಾಗಿತ್ತು. ನಾಯಕರ ಚಿತ್ರವಿರುವ ಟಿ-ಶರ್ಟ್‌ಗಳನ್ನು ಧರಿಸುವುದು, ಕೋಮು ಅಥವಾ ಪ್ರಾದೇಶಿಕ ದ್ವೇಷವಿಲ್ಲದ ಮತ್ತು ಪ್ರಚೋದನಕಾರಿಯಲ್ಲದ ಘೋಷಣೆಗಳನ್ನು ಕೂಗುವುದು ಹಾಗೂ ತಾತ್ಕಾಲಿಕವಾಗಿ ಗುಂಪು ಸೇರುವುದು ಇದರಲ್ಲಿ ಕಂಡುಬಂದಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಬಗ್ಗೆ ಅಥವಾ ಪ್ರತಿನಿಧಿಗಳಲ್ಲಿ ಭೀತಿ ಉಂಟುಮಾಡಿದ ಬಗ್ಗೆ ಯಾವುದೇ ಪುರಾವೆಗಳಿಲ್ಲ; ಬದಲಾಗಿ, ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಕ್ರಮಬದ್ಧವಾಗಿಯೇ ಅವರು ಹೊರಬಂದಿದ್ದಾರೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಯಾವುದೇ ತನಿಖಾ ಅವಶ್ಯಕತೆಯಿಲ್ಲದೆ, ದೀರ್ಘಾವಧಿಯ ಪೂರ್ವ ವಿಚಾರಣೆಯ ಬಂಧನವು ಸಂವಿಧಾನದ 21 ನೇ ವಿಧಿಯಡಿ ಖಾತ್ರಿಪಡಿಸಲಾದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಹೊರಿಸಲಾದ ಯಾವುದೇ ಅಪರಾಧದ ಸೆಕ್ಷನ್‌ಗಳು ಏಳು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಹೊಂದಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಅಲ್ಲದೆ, ಶಿಕ್ಷೆಯ ಅವಧಿಯು ಒಂದಾದ ನಂತರ ಒಂದು ಜಾರಿಯಾಗಬಹುದು ಎಂಬ ಪೊಲೀಸರ ವಾದವನ್ನು ತಿರಸ್ಕರಿಸಿದೆ.

“ಪೊಲೀಸರ ಈ ವಾದವು ಜಾಮೀನು ನೀಡುವ ಈ ಮಧ್ಯಂತರ ಹಂತದಲ್ಲಿ ಯಾವುದೇ ನ್ಯಾಯಶಾಸ್ತ್ರದ ಆಧಾರವನ್ನು ಹೊಂದಿಲ್ಲ; ಇಲ್ಲಿ ನ್ಯಾಯಾಂಗದ ದೃಷ್ಟಿಯು ಭವಿಷ್ಯದಲ್ಲಿ ಸಂಭವಿಸಬಹುದಾದ ಶಿಕ್ಷೆಯ ಮರೀಚಿಕೆಯ ಮೇಲಲ್ಲ, ಬದಲಾಗಿ ವಿಚಾರಣಾಪೂರ್ವ ಸ್ವಾತಂತ್ರ್ಯದ ನೈಜ ಸತ್ಯದ ಮೇಲೆ ನೆಟ್ಟಿದೆ” ಎಂದು ನ್ಯಾಯಾಲಯವು ಹೇಳಿದೆ.

“ಯಾವುದೇ ಅನಿವಾರ್ಯ ಅಗತ್ಯವಿಲ್ಲದೆ ಮತ್ತು ತನಿಖೆಗೆ ಪೂರಕವಾದ ಯಾವುದೇ ಬೇಡಿಕೆಗಳಿಲ್ಲದೆ ನಡೆಸುವ ವಿಚಾರಣಾಪೂರ್ವ ಬಂಧನವು ಅಂತಿಮವಾಗಿ ಅಪರಾಧ ಸಾಬೀತಾಗುವ ಮೊದಲೇ ವಿಧಿಸುವ ಕಾನೂನುಬಾಹಿರ ಮುನ್ನೆಚ್ಚರಿಕೆಯ ಶಿಕ್ಷೆಯಾಗಿ ಬದಲಾಗುತ್ತದೆ. ಇದು ಕ್ರಿಮಿನಲ್ ನ್ಯಾಯಶಾಸ್ತ್ರದ ಮೂಲಭೂತ ತತ್ವಗಳಿಗೆ ವಿರುದ್ಧವಾದ ದೊಡ್ಡ ವಿಪಥನವಾಗಿದೆ; ಏಕೆಂದರೆ ಈ ತತ್ವಗಳು ವ್ಯಕ್ತಿ ಸ್ವಾತಂತ್ರ್ಯವನ್ನು ಆಡಳಿತಾತ್ಮಕ ನಿಯಮವೆಂದು ಪರಿಗಣಿಸುತ್ತವೆ ಮತ್ತು ಕಾರಾಗೃಹ ವಾಸವನ್ನು ಅತ್ಯಂತ ಸೀಮಿತವಾದ ಅಪವಾದವನ್ನಾಗಿ ಮಾತ್ರ ನೋಡುತ್ತವೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ತನ್ನ ವಾದದಲ್ಲಿ, ಆರೋಪಿಗಳು ನಡೆಸಿದ ಪ್ರತಿಭಟನೆಯು ಒಂದು ಅತ್ಯಂತ ಪ್ರಮುಖವಾದ ಜಾಗತಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ರಾಷ್ಟ್ರೀಯ ಭದ್ರತೆ, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದಿದೆ ಎಂದು ಪ್ರತಿಪಾದಿಸಿತ್ತು.

ಪ್ರಕರಣದ ತನಿಖೆಯು ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಆರೋಪಿಗಳು ಸಾಕ್ಷ್ಯಧಾರಗಳನ್ನು ನಾಶಪಡಿಸುವ ಅಥವಾ ತಿರುಚುವ ಅಪಾಯವಿದೆ ಎಂದು ಹೇಳಿತ್ತು.

ಆದರೆ, ಹೋರಾಟಗಾರರ ಪರವಾಗಿ ಹಾಜರಾದ ವಕೀಲರು, ಆರೋಪಿಸಲಾದ ಎಲ್ಲಾ ಅಪರಾಧಗಳೂ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಹೊಂದಿವೆ. ಹೀಗಾಗಿ, ‘ಸತೇಂದರ್ ಕುಮಾರ್ ಆಂಟಿಲ್’ ಪ್ರಕರಣದ ತೀರ್ಪಿನ ಅಡಿಯಲ್ಲಿ ಈ ಪ್ರಕರಣವು ‘ವರ್ಗ ಎ’ಗೆ ಸೇರುತ್ತದೆ, ಇಲ್ಲಿ ಜಾಮೀನು ನೀಡುವುದೇ ನಿಯಮವಾಗಿದೆ ಎಂದು ವಾದಿಸಿದ್ದಾರೆ.

ಈ ಪ್ರತಿಭಟನೆಯು ಶಾಂತಿಯುತವಾಗಿತ್ತು, ಯಾವುದೇ ಹಿಂಸಾಚಾರ, ಹಾನಿ ಅಥವಾ ಬೆದರಿಕೆಯಿಲ್ಲದ ಸಾಂಕೇತಿಕ ರಾಜಕೀಯ ಭಿನ್ನಾಭಿಪ್ರಾಯವಾಗಿತ್ತು. ಇದು ಸಂವಿಧಾನದ ವಿಧಿ 19(1)(ಎ) ಮತ್ತು 19(1)(ಬಿ) ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ 9 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಆದೇಶಿಸಿದೆ ಎಂದು barandbench.com ತಿಳಿಸಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಹಿರಿಯ ನ್ಯಾಯವಾದಿ ತನ್ವೀರ್ ಅಹ್ಮದ್ ಮೀರ್ ಅವರೊಂದಿಗೆ ವಕೀಲರಾದ ರೂಪೇಶ್ ಸಿಂಗ್ ಭದೌರಿಯಾ, ಚಿತ್ವಾನ್ ಗೋದಾರಾ, ರಿಷಭ್ ರಂಜನ್, ಅಮನ್ ಪ್ರಸಾದ್, ವಿವೇಕ್ ಪುನಿಯಾ, ಸುಮಿತ್ ರಾವತ್, ಕೇಶವ್ ನಾಗಿ, ಲಿತೇಶ್ ಬಾತ್ರಾ, ಮರೂಫ್ ಖಾನ್, ಕಾಶಿಫ್ ಅಹ್ಮದ್ ಖಾನ್, ಪ್ರಖರ್ ವಸಿಷ್ಠ ಮತ್ತು ಅಮೃತ್ ಯಾದವ್ ಹಾಜರಾಗಿದ್ದರು.

ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ಅತುಲ್ ಶ್ರೀವಾಸ್ತವ ಮತ್ತು ಕಾರ್ತಿಕೇಯ ಶರ್ಮಾ ಅವರು ಹಾಜರಾಗಿದ್ದರು.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...