Homeಮುಖಪುಟ'ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ': ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

- Advertisement -
- Advertisement -

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com ವರದಿ ಮಾಡಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವಿ ಅವರು ಕೃಷ್ಣ ಹರಿ, ನರಸಿಂಹ ಯಾದವ್, ಕುಂದನ್ ಕುಮಾರ್ ಯಾದವ್, ಅಜಯ್ ಕುಮಾರ್ ಸಿಂಗ್, ಜಿತೇಂದ್ರ ಸಿಂಗ್ ಯಾದವ್, ರಾಜಾ ಗುರ್ಜರ್, ಅಜಯ್ ಕುಮಾರ್ ವಿಮಲ್ @ ಬಂಟು, ಸೌರಭ್ ಸಿಂಗ್ ಮತ್ತು ಅರ್ಬಾಝ್ ಖಾನ್ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ನ್ಯಾಯಾಧೀಶರು ತಮ್ಮ ವಿವರವಾದ ಆದೇಶದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ‘ರಾಜಕೀಯ ಭಿನ್ನಾಭಿಪ್ರಾಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ‘ಪುನರಾವರ್ತಿತ ಹಿಂಸಾಚಾರ ಅಥವಾ ಸಂಘಟಿತ ಅಪರಾಧ’ ಅಲ್ಲ ಎಂಬುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಈ ಪ್ರತಿಭಟನೆಯು ಗರಿಷ್ಠ ಮಟ್ಟದಲ್ಲಿ, ಒಂದು ಸಾರ್ವಜನಿಕ ಕಾರ್ಯಕ್ರಮದ ಸಮಯದಲ್ಲಿ ನಡೆದ ಸಾಂಕೇತಿಕ ರಾಜಕೀಯ ಟೀಕೆಯಾಗಿತ್ತು. ನಾಯಕರ ಚಿತ್ರವಿರುವ ಟಿ-ಶರ್ಟ್‌ಗಳನ್ನು ಧರಿಸುವುದು, ಕೋಮು ಅಥವಾ ಪ್ರಾದೇಶಿಕ ದ್ವೇಷವಿಲ್ಲದ ಮತ್ತು ಪ್ರಚೋದನಕಾರಿಯಲ್ಲದ ಘೋಷಣೆಗಳನ್ನು ಕೂಗುವುದು ಹಾಗೂ ತಾತ್ಕಾಲಿಕವಾಗಿ ಗುಂಪು ಸೇರುವುದು ಇದರಲ್ಲಿ ಕಂಡುಬಂದಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಬಗ್ಗೆ ಅಥವಾ ಪ್ರತಿನಿಧಿಗಳಲ್ಲಿ ಭೀತಿ ಉಂಟುಮಾಡಿದ ಬಗ್ಗೆ ಯಾವುದೇ ಪುರಾವೆಗಳಿಲ್ಲ; ಬದಲಾಗಿ, ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಕ್ರಮಬದ್ಧವಾಗಿಯೇ ಅವರು ಹೊರಬಂದಿದ್ದಾರೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಯಾವುದೇ ತನಿಖಾ ಅವಶ್ಯಕತೆಯಿಲ್ಲದೆ, ದೀರ್ಘಾವಧಿಯ ಪೂರ್ವ ವಿಚಾರಣೆಯ ಬಂಧನವು ಸಂವಿಧಾನದ 21 ನೇ ವಿಧಿಯಡಿ ಖಾತ್ರಿಪಡಿಸಲಾದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಹೊರಿಸಲಾದ ಯಾವುದೇ ಅಪರಾಧದ ಸೆಕ್ಷನ್‌ಗಳು ಏಳು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಹೊಂದಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಅಲ್ಲದೆ, ಶಿಕ್ಷೆಯ ಅವಧಿಯು ಒಂದಾದ ನಂತರ ಒಂದು ಜಾರಿಯಾಗಬಹುದು ಎಂಬ ಪೊಲೀಸರ ವಾದವನ್ನು ತಿರಸ್ಕರಿಸಿದೆ.

“ಪೊಲೀಸರ ಈ ವಾದವು ಜಾಮೀನು ನೀಡುವ ಈ ಮಧ್ಯಂತರ ಹಂತದಲ್ಲಿ ಯಾವುದೇ ನ್ಯಾಯಶಾಸ್ತ್ರದ ಆಧಾರವನ್ನು ಹೊಂದಿಲ್ಲ; ಇಲ್ಲಿ ನ್ಯಾಯಾಂಗದ ದೃಷ್ಟಿಯು ಭವಿಷ್ಯದಲ್ಲಿ ಸಂಭವಿಸಬಹುದಾದ ಶಿಕ್ಷೆಯ ಮರೀಚಿಕೆಯ ಮೇಲಲ್ಲ, ಬದಲಾಗಿ ವಿಚಾರಣಾಪೂರ್ವ ಸ್ವಾತಂತ್ರ್ಯದ ನೈಜ ಸತ್ಯದ ಮೇಲೆ ನೆಟ್ಟಿದೆ” ಎಂದು ನ್ಯಾಯಾಲಯವು ಹೇಳಿದೆ.

“ಯಾವುದೇ ಅನಿವಾರ್ಯ ಅಗತ್ಯವಿಲ್ಲದೆ ಮತ್ತು ತನಿಖೆಗೆ ಪೂರಕವಾದ ಯಾವುದೇ ಬೇಡಿಕೆಗಳಿಲ್ಲದೆ ನಡೆಸುವ ವಿಚಾರಣಾಪೂರ್ವ ಬಂಧನವು ಅಂತಿಮವಾಗಿ ಅಪರಾಧ ಸಾಬೀತಾಗುವ ಮೊದಲೇ ವಿಧಿಸುವ ಕಾನೂನುಬಾಹಿರ ಮುನ್ನೆಚ್ಚರಿಕೆಯ ಶಿಕ್ಷೆಯಾಗಿ ಬದಲಾಗುತ್ತದೆ. ಇದು ಕ್ರಿಮಿನಲ್ ನ್ಯಾಯಶಾಸ್ತ್ರದ ಮೂಲಭೂತ ತತ್ವಗಳಿಗೆ ವಿರುದ್ಧವಾದ ದೊಡ್ಡ ವಿಪಥನವಾಗಿದೆ; ಏಕೆಂದರೆ ಈ ತತ್ವಗಳು ವ್ಯಕ್ತಿ ಸ್ವಾತಂತ್ರ್ಯವನ್ನು ಆಡಳಿತಾತ್ಮಕ ನಿಯಮವೆಂದು ಪರಿಗಣಿಸುತ್ತವೆ ಮತ್ತು ಕಾರಾಗೃಹ ವಾಸವನ್ನು ಅತ್ಯಂತ ಸೀಮಿತವಾದ ಅಪವಾದವನ್ನಾಗಿ ಮಾತ್ರ ನೋಡುತ್ತವೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ತನ್ನ ವಾದದಲ್ಲಿ, ಆರೋಪಿಗಳು ನಡೆಸಿದ ಪ್ರತಿಭಟನೆಯು ಒಂದು ಅತ್ಯಂತ ಪ್ರಮುಖವಾದ ಜಾಗತಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ರಾಷ್ಟ್ರೀಯ ಭದ್ರತೆ, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದಿದೆ ಎಂದು ಪ್ರತಿಪಾದಿಸಿತ್ತು.

ಪ್ರಕರಣದ ತನಿಖೆಯು ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಆರೋಪಿಗಳು ಸಾಕ್ಷ್ಯಧಾರಗಳನ್ನು ನಾಶಪಡಿಸುವ ಅಥವಾ ತಿರುಚುವ ಅಪಾಯವಿದೆ ಎಂದು ಹೇಳಿತ್ತು.

ಆದರೆ, ಹೋರಾಟಗಾರರ ಪರವಾಗಿ ಹಾಜರಾದ ವಕೀಲರು, ಆರೋಪಿಸಲಾದ ಎಲ್ಲಾ ಅಪರಾಧಗಳೂ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಹೊಂದಿವೆ. ಹೀಗಾಗಿ, ‘ಸತೇಂದರ್ ಕುಮಾರ್ ಆಂಟಿಲ್’ ಪ್ರಕರಣದ ತೀರ್ಪಿನ ಅಡಿಯಲ್ಲಿ ಈ ಪ್ರಕರಣವು ‘ವರ್ಗ ಎ’ಗೆ ಸೇರುತ್ತದೆ, ಇಲ್ಲಿ ಜಾಮೀನು ನೀಡುವುದೇ ನಿಯಮವಾಗಿದೆ ಎಂದು ವಾದಿಸಿದ್ದಾರೆ.

ಈ ಪ್ರತಿಭಟನೆಯು ಶಾಂತಿಯುತವಾಗಿತ್ತು, ಯಾವುದೇ ಹಿಂಸಾಚಾರ, ಹಾನಿ ಅಥವಾ ಬೆದರಿಕೆಯಿಲ್ಲದ ಸಾಂಕೇತಿಕ ರಾಜಕೀಯ ಭಿನ್ನಾಭಿಪ್ರಾಯವಾಗಿತ್ತು. ಇದು ಸಂವಿಧಾನದ ವಿಧಿ 19(1)(ಎ) ಮತ್ತು 19(1)(ಬಿ) ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ 9 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಆದೇಶಿಸಿದೆ ಎಂದು barandbench.com ತಿಳಿಸಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಹಿರಿಯ ನ್ಯಾಯವಾದಿ ತನ್ವೀರ್ ಅಹ್ಮದ್ ಮೀರ್ ಅವರೊಂದಿಗೆ ವಕೀಲರಾದ ರೂಪೇಶ್ ಸಿಂಗ್ ಭದೌರಿಯಾ, ಚಿತ್ವಾನ್ ಗೋದಾರಾ, ರಿಷಭ್ ರಂಜನ್, ಅಮನ್ ಪ್ರಸಾದ್, ವಿವೇಕ್ ಪುನಿಯಾ, ಸುಮಿತ್ ರಾವತ್, ಕೇಶವ್ ನಾಗಿ, ಲಿತೇಶ್ ಬಾತ್ರಾ, ಮರೂಫ್ ಖಾನ್, ಕಾಶಿಫ್ ಅಹ್ಮದ್ ಖಾನ್, ಪ್ರಖರ್ ವಸಿಷ್ಠ ಮತ್ತು ಅಮೃತ್ ಯಾದವ್ ಹಾಜರಾಗಿದ್ದರು.

ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ಅತುಲ್ ಶ್ರೀವಾಸ್ತವ ಮತ್ತು ಕಾರ್ತಿಕೇಯ ಶರ್ಮಾ ಅವರು ಹಾಜರಾಗಿದ್ದರು.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...