Homeಮುಖಪುಟಅರುಣ್ ಗೋಯೆಲ್ ರಾಜೀನಾಮೆ; 'ಖಾಸಗಿತನ' ಮುಖ್ಯ ಎಂದ ಮುಖ್ಯ ಚುನಾವಣಾ ಆಯುಕ್ತರು!

ಅರುಣ್ ಗೋಯೆಲ್ ರಾಜೀನಾಮೆ; ‘ಖಾಸಗಿತನ’ ಮುಖ್ಯ ಎಂದ ಮುಖ್ಯ ಚುನಾವಣಾ ಆಯುಕ್ತರು!

- Advertisement -
- Advertisement -

ಮಾಜಿ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಮತ್ತು ಚುನಾವಣಾ ಬಾಂಡ್‌ ಕುರಿತ ಪಾರದರ್ಶಕತೆಯ ಕುರಿತು ಕೇಳಿದಾಗ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ವಿಷಯಗಳಲ್ಲಿ ಖಾಸಗಿತನವನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.

ಗೋಯೆಲ್ ಅವರ ರಾಜೀನಾಮೆ ಕುರಿತ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ರಾಜೀವ್‌ ಕುಮಾರ್, ಈ ವಿಷಯ ವೈಯಕ್ತಿಕ. ಅರುಣ್ ಅವರು ನಮ್ಮ ತಂಡದ ಅತ್ಯಂತ ಗೌರವಾನ್ವಿತ ಸದಸ್ಯರಾಗಿದ್ದರು ಮತ್ತು ನಾನು ಅವರೊಂದಿಗೆ  ಕೆಲಸ ಮಾಡುವುದನ್ನು ಸಂಪೂರ್ಣವಾಗಿ ಆನಂದಿಸಿದ್ದೇನೆ. ಆದರೆ ಪ್ರತಿ ಸಂಸ್ಥೆಯಲ್ಲಿ ಯಾರಿಗಾದರೂ ವೈಯಕ್ತಿಕ ಸ್ಥಳವನ್ನು ನೀಡಬೇಕಾಗುತ್ತದೆ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳುವುದು ಸಂವೇದನಾಶೀಲವಲ್ಲ. ವೈಯಕ್ತಿಕ ಕಾರಣದಿಂದ ಅವರು ರಾಜೀನಾಮೆ ನೀಡಿದ್ದರೆ ಅದನ್ನು ನಾವು ಗೌರವಿಸಬೇಕು ಎಂದು ಹೇಳಿದ್ದಾರೆ.

ನಮ್ಮಲ್ಲಿ ಒಂದು ಉತ್ತಮ ಪದ್ದತಿಯಿದೆ. ಆಯೋಗದೊಳಗಿನ ಭಿನ್ನಾಭಿಪ್ರಾಯವನ್ನು ನಾವು ಉತ್ತೇಜಿಸುತ್ತೇವೆ, ಇದು ಕಠಿಣ ಕೆಲಸವಾದ್ದರಿಂದ ಒಬ್ಬರಿಗಿಂತ ಮೂರು ಮನಸ್ಸುಗಳು ಉತ್ತಮ, ನಾವು ವಿಚಾರ ಮಂಥನ ಮಾಡುತ್ತೇವೆ, ನಾವು ವಿಶ್ಲೇಷಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ಚುನಾವಣಾ ಬಾಂಡ್‌ ಕುರಿತು ಮಾನಾಡಿದ ರಾಜೀವ್‌ ಕುಮಾರ್‌, ಭಾರತದ ಚುನಾವಣಾ ಆಯೋಗವು  ದಾನಿಗಳ ಖಾಸಗಿತನವನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ, ಆಯೋಗವು ಯಾವಾಗಲೂ ಪಾರದರ್ಶಕತೆಯ ಪರವಾಗಿಯೇ ಇದೆ. ಪ್ರಜಾಪ್ರಭುತ್ವದಲ್ಲಿ ವಿಷಯಗಳನ್ನು ಮರೆಮಾಚಲು ಅವಕಾಶವಿಲ್ಲ. ಚುನಾವಣೆಯಲ್ಲಿ ಬಳಕೆಯಾಗುತ್ತಿರುವ ಲೆಕ್ಕಕ್ಕೆ ಸಿಗದ ಹಣಗಳ ಬಗ್ಗೆ ನಾವು ನಿಗಾ ವಹಿಸುತ್ತೇವೆ, ಲೆಕ್ಕಕ್ಕೆ ಸಿಗದ ರೂಪದಲ್ಲಿ ದೇಣಿಗೆಯನ್ನು ನಾವು ಹೇಗೆ ನಿಯಂತ್ರಿಸಬೇಕು ಎಂಬವುದರ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆ ಮತ್ತು ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ  ದಿನಾಂಕವನ್ನು ನಿನ್ನೆ ಕೇಂದ್ರ ಚುನಾವಣಾ ಆಯೋಗದ ಪತ್ರಿಕಾಗೋಷ್ಟಿಯಲ್ಲಿ ಪ್ರಕಟಿಸಲಾಗಿದೆ. ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದರು.

ಇದನ್ನು ಓದಿ:  ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...