Homeಮುಖಪುಟಅರುಣ್ ಗೋಯೆಲ್ ರಾಜೀನಾಮೆ; 'ಖಾಸಗಿತನ' ಮುಖ್ಯ ಎಂದ ಮುಖ್ಯ ಚುನಾವಣಾ ಆಯುಕ್ತರು!

ಅರುಣ್ ಗೋಯೆಲ್ ರಾಜೀನಾಮೆ; ‘ಖಾಸಗಿತನ’ ಮುಖ್ಯ ಎಂದ ಮುಖ್ಯ ಚುನಾವಣಾ ಆಯುಕ್ತರು!

- Advertisement -
- Advertisement -

ಮಾಜಿ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಮತ್ತು ಚುನಾವಣಾ ಬಾಂಡ್‌ ಕುರಿತ ಪಾರದರ್ಶಕತೆಯ ಕುರಿತು ಕೇಳಿದಾಗ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ವಿಷಯಗಳಲ್ಲಿ ಖಾಸಗಿತನವನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.

ಗೋಯೆಲ್ ಅವರ ರಾಜೀನಾಮೆ ಕುರಿತ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ರಾಜೀವ್‌ ಕುಮಾರ್, ಈ ವಿಷಯ ವೈಯಕ್ತಿಕ. ಅರುಣ್ ಅವರು ನಮ್ಮ ತಂಡದ ಅತ್ಯಂತ ಗೌರವಾನ್ವಿತ ಸದಸ್ಯರಾಗಿದ್ದರು ಮತ್ತು ನಾನು ಅವರೊಂದಿಗೆ  ಕೆಲಸ ಮಾಡುವುದನ್ನು ಸಂಪೂರ್ಣವಾಗಿ ಆನಂದಿಸಿದ್ದೇನೆ. ಆದರೆ ಪ್ರತಿ ಸಂಸ್ಥೆಯಲ್ಲಿ ಯಾರಿಗಾದರೂ ವೈಯಕ್ತಿಕ ಸ್ಥಳವನ್ನು ನೀಡಬೇಕಾಗುತ್ತದೆ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳುವುದು ಸಂವೇದನಾಶೀಲವಲ್ಲ. ವೈಯಕ್ತಿಕ ಕಾರಣದಿಂದ ಅವರು ರಾಜೀನಾಮೆ ನೀಡಿದ್ದರೆ ಅದನ್ನು ನಾವು ಗೌರವಿಸಬೇಕು ಎಂದು ಹೇಳಿದ್ದಾರೆ.

ನಮ್ಮಲ್ಲಿ ಒಂದು ಉತ್ತಮ ಪದ್ದತಿಯಿದೆ. ಆಯೋಗದೊಳಗಿನ ಭಿನ್ನಾಭಿಪ್ರಾಯವನ್ನು ನಾವು ಉತ್ತೇಜಿಸುತ್ತೇವೆ, ಇದು ಕಠಿಣ ಕೆಲಸವಾದ್ದರಿಂದ ಒಬ್ಬರಿಗಿಂತ ಮೂರು ಮನಸ್ಸುಗಳು ಉತ್ತಮ, ನಾವು ವಿಚಾರ ಮಂಥನ ಮಾಡುತ್ತೇವೆ, ನಾವು ವಿಶ್ಲೇಷಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ಚುನಾವಣಾ ಬಾಂಡ್‌ ಕುರಿತು ಮಾನಾಡಿದ ರಾಜೀವ್‌ ಕುಮಾರ್‌, ಭಾರತದ ಚುನಾವಣಾ ಆಯೋಗವು  ದಾನಿಗಳ ಖಾಸಗಿತನವನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ, ಆಯೋಗವು ಯಾವಾಗಲೂ ಪಾರದರ್ಶಕತೆಯ ಪರವಾಗಿಯೇ ಇದೆ. ಪ್ರಜಾಪ್ರಭುತ್ವದಲ್ಲಿ ವಿಷಯಗಳನ್ನು ಮರೆಮಾಚಲು ಅವಕಾಶವಿಲ್ಲ. ಚುನಾವಣೆಯಲ್ಲಿ ಬಳಕೆಯಾಗುತ್ತಿರುವ ಲೆಕ್ಕಕ್ಕೆ ಸಿಗದ ಹಣಗಳ ಬಗ್ಗೆ ನಾವು ನಿಗಾ ವಹಿಸುತ್ತೇವೆ, ಲೆಕ್ಕಕ್ಕೆ ಸಿಗದ ರೂಪದಲ್ಲಿ ದೇಣಿಗೆಯನ್ನು ನಾವು ಹೇಗೆ ನಿಯಂತ್ರಿಸಬೇಕು ಎಂಬವುದರ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆ ಮತ್ತು ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ  ದಿನಾಂಕವನ್ನು ನಿನ್ನೆ ಕೇಂದ್ರ ಚುನಾವಣಾ ಆಯೋಗದ ಪತ್ರಿಕಾಗೋಷ್ಟಿಯಲ್ಲಿ ಪ್ರಕಟಿಸಲಾಗಿದೆ. ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದರು.

ಇದನ್ನು ಓದಿ:  ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...