Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...