Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...