Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...