Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...