Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...