Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...