Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...