Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...