Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...