Homeಕರ್ನಾಟಕಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಚಾಮುಂಡಿ ಬೆಟ್ಟದಲ್ಲಿ ಎಚ್.ವಿಶ್ವನಾಥ್-ಸಾ.ರಾ ಮಹೇಶ್ ಹೈಡ್ರಾಮ.. ಜನರಿಗೆ ಫುಲ್ ಮನರಂಜನೆ

ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ" ಎಂದ ವಿಶ್ವನಾಥ್‌

- Advertisement -
- Advertisement -

ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಎಚ್‌.ವಿಶ್ವನಾಥ್ ಮತ್ತು ಸಾ.ರಾ ಮಹೇಶ್ ಯಾವುದೇ ಆಣೆ ಮಾಡದೇ ಪರಸ್ಪರ ಒಬ್ಬರನ್ನೊಬ್ಬರು ಬೈಯ್ದುಕೊಳ್ಳುವುದರೊಂದಿಗೆ ತೆರೆಕಂಡಿದೆ.

ಕಳೆದ ಕೆಲವು ದಿನಗಳಿಂದ ಇಬ್ಬರೂ ರಾಜಕೀಯ ಮುಖಂಡರು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು ಅವರ ಅಕ್ರಮಗಳನ್ನು ಇವರು, ಇವರ ಅಕ್ರಮಗಳನ್ನು ಅವರು ತೆರೆದಿಡುತ್ತಿದ್ದರು. ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ವಿರೋಧಿಸುತ್ತಾ ಇಬ್ಬರೂ ಕೂಡ ಬೇಕಾದರೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದ್ದರು.

ಅದರಂತೆ ಎಚ್.ವಿಶ್ವನಾಥ್ ಗುರುವಾರ ಚಾಮುಂಡಿ ಬೆಟ್ಟಕ್ಕೆ ಧೈರ್‍ಯವಿದ್ದರೆ ಬರುತ್ತೀರಾ ಎಂದು ಸಾ.ರಾ ಮಹೇಶ್ ಗೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ್ದ ಸಾ.ರಾ ಮಹೇಶ್ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಇಂದು ಚಾಮುಂಡಿ ಬೆಟ್ಟದಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ “ಹೇಡಿ, ಪಲಾಯನವಾದಿ, ಒಳಗೆ ಏಕೆ ಹೋಗಿ ಕೂತಿದ್ದೀಯಾ, ನಾನು ಹಣಕ್ಕಾಗಿ ರಾಜಿನಾಮೆ ಕೊಟ್ಟಿದ್ದೇನೆಂದು ಸುಳ್ಳು ಹೇಳಿದ ಪಲಾಯನವಾದಿ ಸಾ.ರಾ ಮಹೇಶ್‌ಗೆ ಧಿಕ್ಕಾರ” ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಮುಂದುವರಿದು, ದೇವರು ಕೆಂಗಯ್ಯ ಹನುಮಂತಯ್ಯನವರು ಕಟ್ಟಿದ ನಾಡಗುಡಿ ವಿಧಾನಸಭೆಯಲ್ಲಿ ಕುಳಿತು “ತನ್ನ ಸ್ವಂತ ತಾಯಿ ಮತ್ತು ತನ್ನ ಮಕ್ಕಳ ಮೇಲೆ ಆಣೆಯಿಟ್ಟು ವಿಶ್ವನಾಥ್ 25 ಕೋಟಿಗೆ ಮಾರಿಕೊಂಡಿದ್ದಾರೆಂದು ಹೇಳಿದವರು ಈಗ ಯಾಕೆ ಇಲ್ಲಿಗೆ ಬಂದಿಲ್ಲ, ಬಂದೂ ಯಾಕೆ ನನ್ನ ಎದುರು ಬರುತ್ತಿಲ್ಲ, ಬಾ ಈಚೆಗೆ, ಇದೇನು ವೈಶಂಪಾಯನ ಸರೋವರನಾ ಇದು ಬಾ ಈಚೆಗೆ, ನಾನು ಕೋರ್ಟಿಗೆ ಹೋಗುತ್ತೇನೆ..ನನ್ನಂಥ ಸತ್ಯವಂತನ, ಪ್ರಾಮಾಣಿಕನ ಮುಖ ನೋಡಲಿಕ್ಕೆ ನಿನಗೆ ಧೈರ್‍ಯಯಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಇಬ್ಬರೂ ಗಾಜಿನ ಮನೆಯಲ್ಲಿದ್ದೇವೆ; ಕಲ್ಲು ಹೊಡೆಯುವುದು ಬೇಡ ಎಂದರೇಕೆ ಎಚ್. ವಿಶ್ವನಾಥ್?

ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಶಾಸಕ ಸಾ.ರ ಮಹೇಶ್ ” ನಾನು ಪೂಜೆ ಮುಗಿಸಿ ಕಾರಿಡಾರ್‌ನಲ್ಲಿ ಆಣೆ ಮಾಡಲು ಕಾಯುತ್ತಿದ್ದೇನೆ, ಅವರೇ ಬಂದಿಲ್ಲ. ನಾನು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಬಂದಿದ್ದೇನೆ, ಆತನ ಮುಖ ನೋಡಿ ನೋಡಿ ಅನುಭವಿಸಿದ್ದೇನೆ, ಈಗ ರಾಜ್ಯದ ಜನತೆಗೆ ಗೊತ್ತಾಗಿದೆ. ನನ್ನ ರಾಜಕಾರಣದ ಜೀವನದಲ್ಲಿ ಯಾರನ್ನು ವಯಕ್ತಿಕವಾಗಿ ಮಾತಾಡಿಲ್ಲ. ಅವರು ಬಾಂಬೆಗೆ ಹೋದ ನಂತರ ಸರ್ಕಾರದ ಅಳಿವು ಉಳಿವಿಗೆ ಅವರೇ ಕಾರಣವೆಂದು ನನ್ನ ಫಾರ್ಮ್‌ ಹೌಸ್‌ನಲ್ಲಿ ಮಾತಾಡಿದ್ದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಅವರು ನನ್ನ ಬಗ್ಗೆ ವಯಕ್ತಿಕವಾಗಿ ಅಶ್ಲೀಲವಾಗಿ ಅವರು ನನ್ನ ಬಗ್ಗೆ ಮಾತಾಡಿದ್ದಾರೆ.

ಅವರು ನನ್ನಿಂದ ಜೆಡಿಎಸ್‌ಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ನಿಮ್ಮ ಕುಟುಂಬದ ವಯಕ್ತಿಯ ಸ್ವಾರ್ಥಕ್ಕಾಗಿ, ವರ್ಗಾವಣೆಯ ದಂಧೆಗಾಗಿ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ನನ್ನ ಮೇಲಿನ ಟೀಕೆಗೆ ಅವರು ಬಂದು ಸಾಕ್ಷಿ ನೀಡಲಿ.. ಅವರು ಸಂವಿಧಾನದ ಮೇಲೆ ಆಣೆ ಮಾಡಿದ್ದೇನೆ ಎಂದಿದ್ದಾರೆ. ನಾವು ಕೂಡ ಕರ್ತವ್ಯ ಪಾಲನೆ ಮಾಡುತ್ತೇವೆ, ನಂಬಿಕೆಯಿಂದ ನಡೆದುಕೊಳ್ಳುತ್ತೇನೆ ಎಂದು ಸಂವಿಧಾನದ ಮೇಲೆ ಆಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದೇವೆ. ಆದರೆ ಅವರು ಹುಣಸೂರಿನ ಜನರ ನಂಬಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದಾರಾ? ಎಂದು ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.

ಮೊದಲು ಪ್ರಮಾಣಕ್ಕೆ ಕರೆದವರು ಅವರೆ, ಆದ್ದರಿಂದ ಮೊದಲು ಪ್ರಮಾಣ ಮಾಡಬೇಕಾದವರೂ ಅವರೆ. ಸದನದಲ್ಲಿ ನಾನು ಮಾಡಿದ ಆರೋಪಕ್ಕೆ ನಾನು ಬದ್ಧನಾಗಿದ್ದೇನೆ. ಅವರು ನನ್ನ ನಡವಳಿಕೆಯ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಲಿ.. ಆಗ ಬೇಕಾದರೆ ಸ್ವೀಕರ್‌ಗೆ ಕೊಟ್ಟಿರುವ ರಾಜಿನಾಮೆ ವಾಪಸ್ ತೆಗೆಯೋಣ.. ಇಲ್ಲ ಅವರು ನಾನು 25 ಕೋಟಿಗೆ ಮಾರಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲಿ. ನಾನು ನಮ್ಮ ಪಕ್ಷದ ಹಿರಿಯರ ಜೊತೆ ಮಾತಾಡಿದ್ದೇನೆ. ನಾನು ಇನ್ನು ಮುಂದೆ ಅವರ ಮುಖ ಕೂಡ ನೋಡುವುದಿಲ್ಲ, ಅವರ ಚರ್ಚೆ ಕೂಡ ಮಾಡುವುದಿಲ್ಲ.. ಉಳಿದಿದ್ದು ರಾಜ್ಯದ ಜನ ನೋಡಿಕೊಳ್ಳಲ್ಲಿ, ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಸಾ.ರಾ ಮಹೇಶ್ ಬೆಂಬಲಿಗರು ವಿಶ್ವನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರೆ, ವಿಶ್ವನಾಥ್ ಬೆಂಬಲಿಗರು ಸಾ.ರಾ ಮಹೇಶ್ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...