Homeಮುಖಪುಟಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

- Advertisement -
- Advertisement -

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ. ಈ ಹಿಂದೆ ರಾಮಮಂದಿರ ನಿರ್ಮಾಣ ಪೂರ್ಣವಾಗದೆ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರಗಳಿಗೆ ವಿರುದ್ಧ ಎಂದು ಶಂಕರಾಚಾರ್ಯ ಮಠದ ನಾಲ್ವರು ಮಠಾಧೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಗಂಗಾ ಸಾಗರ ಮೇಳದಲ್ಲಿ ಮಾತನಾಡಿದ ಶಂಕರಾಚಾರ್ಯರು, ರಾಜಕಾರಣಿಗಳಿಗೆ ಅವರ ಮಿತಿಗಳಿವೆ ಮತ್ತು ಅವರಿಗೆ ಸಂವಿಧಾನದ ಅಡಿಯಲ್ಲಿ ಜವಾಬ್ದಾರಿ ಇದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ನಿಯಮಗಳು ಮತ್ತು ನಿರ್ಬಂಧಗಳಿವೆ ಮತ್ತು ಈ ನಿಯಮಗಳನ್ನು ಅನುಸರಿಸಬೇಕು. ಪ್ರತಿಯೊಂದು ಕ್ಷೇತ್ರಕ್ಕೂ ರಾಜಕಾರಣಿಗಳು ಹಸ್ತಕ್ಷೇಪ ಮಾಡುವುದು ಹುಚ್ಚುತನ. ಇದು ಸಂವಿಧಾನದ ಪ್ರಕಾರ ಘೋರ ಅಪರಾಧವೂ ಹೌದು ಎಂದು ಸರಸ್ವತಿ ಹೇಳಿದರು.

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ನಾಲ್ಕು ಪೀಠಗಳ ಶಂಕರಾಚಾರ್ಯರು ಈ ಮೊದಲು ಘೋಷಿಸಿದ್ದರು. ಉತ್ತರಾಖಂಡದ ಜೋಶಿಮಠ, ಗುಜರಾತ್‌ನ ದ್ವಾರಕಾ, ಒಡಿಶಾದ ಪುರಿ ಮತ್ತು ಕರ್ನಾಟಕದ ಶೃಂಗೇರಿಯಲ್ಲಿ ಈ ಮಠಗಳಿವೆ.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದಾರೆ.

ತಾನು ಅಯೋಧ್ಯೆಗೆ ಹೋಗುತ್ತೇನೆ ಆದರೆ ರಾಮ ಮಂದಿರದ ಪ್ರಾಣ ಪ್ರತಿಷ್ಟಾಪನೆಯಲ್ಲಿ ಭಾಗವಹಿಸುವುದಿಲ್ಲ. ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ನಾನು ಯಾರನ್ನೂ ತಡೆಯುವುದಿಲ್ಲ ಮತ್ತು ಕೇಂದ್ರ ಸರ್ಕಾರದ ಮೇಲೆ ಕೋಪವಿಲ್ಲ. ಓರ್ವ ಸಹಾಯಕನೊಂದಿಗೆ ಮಾತ್ರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಆಹ್ವಾನ ಪತ್ರದಲ್ಲಿ ತಿಳಿಸಿರುವುದಕ್ಕಾಗಿ ವಿಷಾದವಿದೆ. ಶಂಕರಾಚಾರ್ಯರ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಹೊರತಾಗಿಯೂ ಅವರಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಸ್ಥಾನವನ್ನು ಕಲ್ಪಿಸಲಾಗಿಲ್ಲ ಮತ್ತು ಹೊರಗಡೆಯೇ ಇರುವಂತೆ ಸೂಚಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ. ಕಾರ್ಯಕ್ರಮದಲ್ಲಿ ಕುಳಿತುಕೊಂಡು ರಾಮ ಮಂದಿರ ಉದ್ಘಾಟನೆಯನ್ನು ನೋಡುವುದು ಮತ್ತು ಚಪ್ಪಾಳೆ ತಟ್ಟುವುದು ನನಗೆ ಇಷ್ಟವಿಲ್ಲ ಎಂದು ಪುರಿ ಶಂಕರಾಚಾರ್ಯರು ಹೇಳಿದ್ದಾರೆ.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಪ್ರಚೋದನಾಕಾರಿ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...