Homeಮುಖಪುಟಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

- Advertisement -
- Advertisement -

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ. ಈ ಹಿಂದೆ ರಾಮಮಂದಿರ ನಿರ್ಮಾಣ ಪೂರ್ಣವಾಗದೆ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರಗಳಿಗೆ ವಿರುದ್ಧ ಎಂದು ಶಂಕರಾಚಾರ್ಯ ಮಠದ ನಾಲ್ವರು ಮಠಾಧೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಗಂಗಾ ಸಾಗರ ಮೇಳದಲ್ಲಿ ಮಾತನಾಡಿದ ಶಂಕರಾಚಾರ್ಯರು, ರಾಜಕಾರಣಿಗಳಿಗೆ ಅವರ ಮಿತಿಗಳಿವೆ ಮತ್ತು ಅವರಿಗೆ ಸಂವಿಧಾನದ ಅಡಿಯಲ್ಲಿ ಜವಾಬ್ದಾರಿ ಇದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ನಿಯಮಗಳು ಮತ್ತು ನಿರ್ಬಂಧಗಳಿವೆ ಮತ್ತು ಈ ನಿಯಮಗಳನ್ನು ಅನುಸರಿಸಬೇಕು. ಪ್ರತಿಯೊಂದು ಕ್ಷೇತ್ರಕ್ಕೂ ರಾಜಕಾರಣಿಗಳು ಹಸ್ತಕ್ಷೇಪ ಮಾಡುವುದು ಹುಚ್ಚುತನ. ಇದು ಸಂವಿಧಾನದ ಪ್ರಕಾರ ಘೋರ ಅಪರಾಧವೂ ಹೌದು ಎಂದು ಸರಸ್ವತಿ ಹೇಳಿದರು.

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ನಾಲ್ಕು ಪೀಠಗಳ ಶಂಕರಾಚಾರ್ಯರು ಈ ಮೊದಲು ಘೋಷಿಸಿದ್ದರು. ಉತ್ತರಾಖಂಡದ ಜೋಶಿಮಠ, ಗುಜರಾತ್‌ನ ದ್ವಾರಕಾ, ಒಡಿಶಾದ ಪುರಿ ಮತ್ತು ಕರ್ನಾಟಕದ ಶೃಂಗೇರಿಯಲ್ಲಿ ಈ ಮಠಗಳಿವೆ.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದಾರೆ.

ತಾನು ಅಯೋಧ್ಯೆಗೆ ಹೋಗುತ್ತೇನೆ ಆದರೆ ರಾಮ ಮಂದಿರದ ಪ್ರಾಣ ಪ್ರತಿಷ್ಟಾಪನೆಯಲ್ಲಿ ಭಾಗವಹಿಸುವುದಿಲ್ಲ. ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ನಾನು ಯಾರನ್ನೂ ತಡೆಯುವುದಿಲ್ಲ ಮತ್ತು ಕೇಂದ್ರ ಸರ್ಕಾರದ ಮೇಲೆ ಕೋಪವಿಲ್ಲ. ಓರ್ವ ಸಹಾಯಕನೊಂದಿಗೆ ಮಾತ್ರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಆಹ್ವಾನ ಪತ್ರದಲ್ಲಿ ತಿಳಿಸಿರುವುದಕ್ಕಾಗಿ ವಿಷಾದವಿದೆ. ಶಂಕರಾಚಾರ್ಯರ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಹೊರತಾಗಿಯೂ ಅವರಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಸ್ಥಾನವನ್ನು ಕಲ್ಪಿಸಲಾಗಿಲ್ಲ ಮತ್ತು ಹೊರಗಡೆಯೇ ಇರುವಂತೆ ಸೂಚಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ. ಕಾರ್ಯಕ್ರಮದಲ್ಲಿ ಕುಳಿತುಕೊಂಡು ರಾಮ ಮಂದಿರ ಉದ್ಘಾಟನೆಯನ್ನು ನೋಡುವುದು ಮತ್ತು ಚಪ್ಪಾಳೆ ತಟ್ಟುವುದು ನನಗೆ ಇಷ್ಟವಿಲ್ಲ ಎಂದು ಪುರಿ ಶಂಕರಾಚಾರ್ಯರು ಹೇಳಿದ್ದಾರೆ.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಪ್ರಚೋದನಾಕಾರಿ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...