Homeಮುಖಪುಟತಮಿಳು ನಟ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ನೋಂದಣಿ: ವಿಜಯ್ ಪ್ರತಿಕ್ರಿಯೆ ಏನು?

ತಮಿಳು ನಟ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ನೋಂದಣಿ: ವಿಜಯ್ ಪ್ರತಿಕ್ರಿಯೆ ಏನು?

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ 'ಇಳಯ ದಳಪತಿ ವಿಜಯ್ ಮಕ್ಕಳ್ ಇಯಕ್ಕಂ' ಎಂಬ ಪಕ್ಷ ಸದ್ದು ಮಾಡುತ್ತಿದೆ.

- Advertisement -
- Advertisement -

2021ಕ್ಕೆ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಂದು ಕಾಲಕ್ಕೆ ಚಿತ್ರರಂಗದ ದಿಗ್ಗಜರಿಂದ ಆಳಲ್ಪಟ್ಟ ತಮಿಳುನಾಡಿನಲ್ಲಿ ಮತ್ತೆ ತಮ್ಮ ಪ್ರಾಬಲ್ಯ ಮೆರೆಯಲು ಹಿರಿಯ ನಟರಾದ ರಜಿನಿಕಾಂತ್, ಕಮಲ್ ಹಾಸನ್ ಪ್ರಯತ್ನಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ‘ಇಳಯ ದಳಪತಿ ವಿಜಯ್ ಮಕ್ಕಳ್ ಇಯಕ್ಕಂ’ ಎಂಬ ಪಕ್ಷ ಸದ್ದು ಮಾಡುತ್ತಿದೆ.

ತಮಿಳಿನ ಖ್ಯಾತ ನಟ, ದಳಪತಿ ಬಿರುದಾಂಕಿತ ವಿಜಯ್ ಹೆಸರಿನಲ್ಲಿ ಅವರ ತಂದೆ ಎಸ್.ಎ ಚಂದ್ರಶೇಖರ್ ರಾಜಕೀಯ ಪಕ್ಷವೊಂದನ್ನು ಚುನಾವಣಾ ಆಯೋಗದಲ್ಲಿ ನೋಂದಾಯಿಸಿದ್ದಾರೆ. ಅಲ್ಲದೇ ತನ್ನ ಮಗ ವಿಜಯ್ ಇದನ್ನು ಪ್ರಚಾರ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಆದರೆ ವಿಜಯ್ ಮಾತ್ರ ತಮ್ಮ ಅಭಿಮಾನಿಗಳಲ್ಲಿ ಇದು ನನ್ನ ಒಪ್ಪಿಗೆಯಿಲ್ಲದೇ ನೋಂದಣಿಯಾಗಿರುವ ಪಕ್ಷ. ಇದಕ್ಕೂ ನನಗೂ ಸಂಬಂಧವಿಲ್ಲ. ನನ್ನ ಹೆಸರು, ಭಾವಚಿತ್ರವನ್ನು ಬಳಸಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಯಾರೂ ಪಕ್ಷ ಸೇರಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ ಅವರ ತಂದೆ ಚಂದ್ರಶೇಖರ್ ಮಾತ್ರ ತಮ್ಮ ಮಗನ ಹೆಸರಿನ ಪಕ್ಷವನ್ನು ಸಮರ್ಥಿಸಿಕೊಂಡಿದ್ದಾರೆ. ನನಗೆ ರಾಜಕೀಯ ಪಕ್ಷವೊಂದು ಬೇಕಾಗಿದೆ. ಹಾಗಾಗಿ ನೋಂದಣಿ ಮಾಡಿಸಿದ್ದೇನೆ ಎಂದಿದ್ದಾರೆ.

ವಿಜಯ್‌ರವರ ಸರ್ಕಾರ್ ಮತ್ತು ಮೆರ್ಸಲ್‌ ಚಿತ್ರಗಳಲ್ಲಿ ಅವರು ಆಳುವ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಳ್ಳುವ ಡೈಲಾಗ್‌ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಅದೇ ಸಮಯದಲ್ಲಿ ಅವರ ಮನೆ ಮೇಲೆ ಐಟಿ ದಾಳಿಗಳು ಸಹ ನಡೆದಿದ್ದವು. ಇವೆಲ್ಲವೂ ಅವರು ರಾಜಕೀಯಕ್ಕೆ ಧುಮುಕುತ್ತಾರೆ ಎಂಬ ಉಹಾಪೋಹಗಳನ್ನು ಸೃಷ್ಟಿಸಿದ್ದವು. ಆದರೆ ವಿಜಯ್ ಮಾತ್ರ ಅವೆಲ್ಲವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...