Homeಕರ್ನಾಟಕಇಂದು ಸಿಗಂದೂರು ಸೇತುವೆ ಉದ್ಘಾಟನೆ: ಬಿಜೆಪಿ-ಕಾಂಗ್ರೆಸ್ ಜಟಾಪಟಿ

ಇಂದು ಸಿಗಂದೂರು ಸೇತುವೆ ಉದ್ಘಾಟನೆ: ಬಿಜೆಪಿ-ಕಾಂಗ್ರೆಸ್ ಜಟಾಪಟಿ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ 473 ಕೋಟಿ ರೂಪಾಯಿ ವೆಚ್ಚದ ತೂಗುಸೇತುವೆ (ಸಿಗಂದೂರು ಸೇತುವೆ) ಉದ್ಘಾಟನೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ರಾಜಕೀಯ ಜಟಾಪಟಿ ಏರ್ಪಟ್ಟಿದೆ.

ನೂತನ ಸೇತುವೆಯನ್ನು ಇಂದು (ಜು.14) ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಾಣೆ ಮಾಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸ್ಥಳೀಯ ಸಂಸದ ಬಿ.ವೈ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಸೇತುವೆ ಲೋಕಾರ್ಪಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳೀಯ ಕಾಂಗ್ರೆಸ್ ಶಾಸಕರು ಸೇರಿದಂತೆ ಕಾಂಗ್ರೆಸ್‌ ಕಡೆಯ ಪ್ರಮುಖರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದು ಕಾಂಗ್ರೆಸ್-ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ.

ಸಿಎಂ ಆದಿಯಾಗಿ ಕಾಂಗ್ರೆಸ್‌ನ ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಅಗೌರವ ತೋರಲಾಗಿದೆ. ಸೇತುವೆ ಉದ್ಘಾಟನೆ ಬಿಜೆಪಿ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ. ಕೇಂದ್ರ ಸರ್ಕಾರ ಸೇತುವೆಗೆ ಅನುದಾನ ನೀಡಿದ್ದರೂ, ರಾಜ್ಯ ಸರ್ಕಾರ ಸಹಕಾರ ಕೊಟ್ಟಿಲ್ಲವೇ? ಎಂದು ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ.

ಸಿಎಂಗೆ ಶಿಷ್ಟಾಚಾರದಂತೆ ಆಹ್ವಾನಪತ್ರ ನೀಡಿಲ್ಲ. ಸಾಗರ ಕ್ಷೇತ್ರದ ಶಾಸಕನಾದ ನನ್ನನ್ನೇ ಆಹ್ವಾನಿಸಿಲ್ಲ. ಸಿಗಂದೂರು ದೇವಸ್ಥಾನದ ಧರ್ಮದರ್ಶಿ ಎಸ್‌.ರಾಮಪ್ಪ ಅವರನ್ನೂ ಕರೆಯದೆ ಅಪಮಾನಿಸಲಾಗಿದೆ ಎಂದು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನನ್ನು ಆಹ್ವಾನಿಸಿಲ್ಲ: ಮಧು ಬಂಗಾರಪ್ಪ ಗರಂ

ಸೇತುವೆ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿಲ್ಲ. ಸಿಎಂಗೂ ಸರಿಯಾಗಿ ಆಹ್ವಾನ ನೀಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳನ್ನು ಬಹಳ ಅಗೌರವವಾಗಿ ಕೇಂದ್ರ ಸರ್ಕಾರ ನಡೆಸಿಕೊಂಡಿದೆ. ಅವರಿಗೆ ಸರಿಯಾದ ಆಹ್ವಾನ ನೀಡಿಲ್ಲ. ದುರಹಂಕಾರದಿಂದ ನಾವು ಮಾಡಬೇಕು ಎನ್ನುವುದು ಇದ್ದರೆ ಏನು ಮಾಡುವುದಕ್ಕೆ ಆಗುವುದಿಲ್ಲ. ಅಗೌರವ ತೋರುವುದು ಬಹಳ ತಪ್ಪು ಎಂದಿದ್ದಾರೆ.

ಸಿಗಂದೂರನ್ನೇ ಮುಳುಗಿಸಲಿಕ್ಕೆ ಹೋದವರು, ಈಗ ಸೇತುವೆ ಕಟ್ಟಿ ಉಳಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಆ ಜಾಗ ಯಾರದ್ದು ಎಂಬುದನ್ನು ನೆನಪಿಸಿಕೊಳ್ಳಬೇಕು. ಅವರು ಈ ರೀತಿ ಮಾಡಿದರೆ ಮುಂದಿನ ದಿನಗಳಲ್ಲಿ ನಾವು ಸರಿಯಾಗಿ ಉತ್ತರ ನೀಡಬೇಕಾಗುತ್ತದೆ. ಸಿಗಂದೂರು ಸೇತುವೆ ಸಾರ್ವಜನಿಕರಿಗೆ ಅನುಕೂಲವಾಗಬೇಕು ಅಷ್ಟೇ ಎಂದು ಸಚಿವ ಮಧುಬಂಗಾರಪ್ಪ ಗುಡುಗಿದ್ದಾರೆ.

ಸೇತುವೆ ಉದ್ಘಾಟನೆ ಮುಂದೂಡಿ: ನಿತಿನ್ ಗಡ್ಕರಿಗೆ ಸಿಎಂ ಪತ್ರ

“ಸೇತುವೆ ಉದ್ಘಾಟನೆಯ ಕಾರ್ಯಕ್ರಮದ ಕರಡು ಆಹ್ವಾನ ಪತ್ರಿಕೆಯ, ಆಹ್ವಾನಿತರ ಪಟ್ಟಿಯಲ್ಲಿ ನನ್ನ ಹೆಸರನ್ನು ಮುದ್ರಿಸಲಾಗಿದೆ. ಆದರೆ ಈ ಬಗ್ಗೆ ನಿಮ್ಮ ಸಚಿವಾಲಯದಿಂದ ನನಗೆ ಮಾಹಿತಿಯನ್ನೇ ನೀಡಿಲ್ಲ” ಎಂದಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮ ಮುಂದೂಡುವಂತೆ ಮನವಿ ಮಾಡಿದ್ದಾರೆ.

ಜುಲೈ 11ರಂದು ಪತ್ರ ಬರೆದಿರುವ ಸಿಎಂ, “ಸಾಧ್ಯವಾದರೆ ಕಾರ್ಯಕ್ರಮ ಮುಂದೂಡಿ. ನಿಮ್ಮ ಅನುಕೂಲದ ದಿನಾಂಕಗಳನ್ನು ತಿಳಿಸಿದರೆ ನಾನೂ ಜೊತೆಯಾಗುತ್ತೇನೆ” ಎಂದಿದ್ದಾರೆ.

“ಇನ್ನು ಮುಂದೆ, ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ರಾಜ್ಯ ಸರ್ಕಾರದ ಜೊತೆಗೆ ನಿಮ್ಮ ಸಚಿವಾಲಯ ಸಮಾಲೋಚನೆ ನಡೆಸುವುದು ಸಮಂಜಸ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರದ ಜೊತೆಗೆ ವ್ಯವಹರಿಸಿ ಎಂದು ನಿಮ್ಮ ಸಚಿವಾಲಯಕ್ಕೆ ನಿರ್ದೇಶನ ನೀಡಿ” ಎಂದಿದ್ದಾರೆ.

ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಇದೆ. ಅಲ್ಲಿ ಪಾಲ್ಗೊಳ್ಳುವುದು ಪೂರ್ವ ನಿಗದಿಯಾಗಿರುವುದರಿಂದ, ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುತ್ತಿಲ್ಲ’ ಎಂದಿದ್ದಾರೆ.

ಶಿಷ್ಟಾಚಾರದ ಉಲ್ಲಂಘನೆ ಆಗಿಲ್ಲ: ಸಂಸದ ರಾಘವೇಂದ್ರ

“ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವ ವಿಚಾರದಲ್ಲಿ ಶಿಷ್ಟಾಚಾರದ ಉಲ್ಲಂಘನೆ ಆಗಿಲ್ಲ. ಆಹ್ವಾನ ಪತ್ರದಲ್ಲಿ ಮೊದಲ ಹೆಸರು ಅವರದ್ದೇ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಶಾಸಕರನ್ನು ಕಾರ್ಯಕ್ರಮಕ್ಕೆ ಕರೆದಿದ್ದಾರೆ. ಆಹ್ವಾನ ಪತ್ರ ಶುಕ್ರವಾರ ರಾತ್ರಿ ಅಂತಿಮಗೊಂಡಿದೆ. ನನಗೆ ಹಾಗೂ ಯಡಿಯೂರಪ್ಪನವರಿಗೆ ಶನಿವಾರ ಕೊಟ್ಟಿದ್ದಾರೆ” ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಸೇತುವೆಗೆ ಹೆಸರಿಡುವ ವಿಚಾರ

ಸೇತುವೆ ಉದ್ಘಾಟನೆಗೆ ಆಹ್ವಾನ ಮಾತ್ರವಲ್ಲ, ಸೇತುವೆಗೆ ಹೆಸರಿಡುವ ವಿಚಾರದಲ್ಲೂ ಕಾಂಗ್ರೆಸ್-ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಬಿಜೆಪಿಗರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಹೆಸರನ್ನು ಸೇತುವೆಗೆ ಇಡುವಂತೆ ಆಗ್ರಹಿಸುತ್ತಿದ್ದಾರೆ. ಈ ನಡುವೆ ಹರನಾಥ್ ರಾವ್ ಎಂಬವರು ಸೇತುವೆಗೆ ಯಡಿಯೂಪ್ಪ ಹೆಸರಿಡಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

“ಶರಾವತಿ ಹಿನ್ನೀರಿನ ಜನರ ಬೇಡಿಕೆಯಾಗಿದ್ದ ಸಿಗಂದೂರು ಸೇತುವೆಯ ನಿರ್ಮಾಣಕ್ಕೆ ಬಿ. ಎಸ್. ಯಡಿಯೂರಪ್ಪ ಕಾರಣ. ಆದ್ದರಿಂದ ಸೇತುವೆಗೆ ಅವರ ಹೆಸರನ್ನು ಇಡಬೇಕು. ಈ ಕುರಿತು ಹೈಕೋರ್ಟ್‌ನಲ್ಲಿ ಸ್ವಯಂ ಪ್ರೇರಿತವಾಗಿ ರಿಟ್ ಅರ್ಜಿ ಸಲ್ಲಿಸಿದ್ದೇನೆ” ಎಂದು ಹರನಾಥ್ ರಾವ್ ಹೇಳಿದ್ದಾರೆ.

ಸೇತುವೆ ‘ಸಿಂಗಂದೂರು ಚೌಡೇಶ್ವರಿ’ ಹೆಸರಿಡುವಂತೆ ಕಾಂಗ್ರೆಸ್ಸಿಗರು ಆಗ್ರಹಿಸುತ್ತಿದ್ದಾರೆ. ಶಾಸಕ ಗೋಪಾಲಕೃಷ್ಣ ಕೂಡ, ಚೌಡೇಶ್ವರಿ ಹೆಸರೇ ಇಡುವುದು. ಅದೇ ಅಂತಿಮ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ಹೆಸರಿಡುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಗಂದೂರು ಸೇತುವೆ

ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾದ 2.25 ಕಿ.ಮೀ ಉದ್ದದ ಸಿಂಗದೂರು ತೂಗು ಸೇತುವೆ, ಭಾರತದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾಗಿದೆ. 11 ಪಿಲ್ಲರ್‌ಗಳನ್ನು ಹೊಂದಿರುವ ಈ ಸೇತುವೆಯಲ್ಲಿ, ಶೇಕಡ 70ರಷ್ಟು ಭಾರವನ್ನು ಕೇಬಲ್‌ಗಳು ಹೊರುತ್ತವೆ. ರೋಪ್‌ವೇ ತಂತ್ರಜ್ಞಾನದೊಂದಿಗೆ ಸಮತೋಲನ ಕಾಯ್ದುಕೊಳ್ಳಲಾಗುತ್ತದೆ. 2019ರಲ್ಲಿ ನಿತಿನ್ ಗಡ್ಕರಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಸಿಗಂದೂರು ಚೌಡೇಶ್ವರಿ ದೇವಸ್ಥಾನ ಮತ್ತು ಕೊಲ್ಲೂರು ದೇವಾಲಯಕ್ಕೆ ಸಂಪರ್ಕ ಕಲ್ಪಿಸುವುದು. ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ನಡುವಿನ ಸಂಪರ್ಕವನ್ನು ಸುಧಾರಿಸುವುದು ಮತ್ತು ಸ್ಥಳೀಯರಿಗೆ ಲಾಂಚ್‌ಗೆ ಅವಲಂಬಿತವಾಗಿರದೆ ಸುರಕ್ಷಿತ ಸಂಚಾರ ಸೌಲಭ್ಯ ಒದಗಿಸುವುದು ಈ ಸೇತುವೆ ನಿರ್ಮಾಣದ ಉದ್ದೇಶವಾಗಿದೆ.

‘ಹೊಳೆಬಾಗಿಲು-ಕಳಸವಳ್ಳಿ ಸೇತುವೆ’ ಎಂದು ಸ್ಥಳೀಯರು ಕರೆಯುವ ಈ ಸೇತುವೆಯಿಂದ ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಸಿಗಂದೂರು ದೇವಸ್ಥಾನಕ್ಕೆ ನೇರ ರಸ್ತೆ ಸಂಪರ್ಕ ದೊರೆಯಲಿದೆ. ಶರಾವತಿ ಹಿನ್ನೀರಿನ ದ್ವೀಪದಲ್ಲಿ ವಾಸಿಸುವ ಜನರ ಬಹುಕಾಲದ ಕನಸು ಈಡೇರಿದಂತಾಗಿದೆ.

ಸೇತುವೆ ಉದ್ಘಾಟನೆ ನಿಮಿತ್ತ ಇಂದು ಮಧ್ಯಾಹ್ನ 12 ಗಂಟೆಯಿಂದ ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಸುಮಾರು 10 ಸಾವಿರದಷ್ಟು ಜನರು ಸೇರುವೆ ನಿರೀಕ್ಷೆಯನ್ನು ಸಂಘಟಕರು ಹೊಂದಿದ್ದಾರೆ. ಇದೇ ಸಂದರ್ಭದಲ್ಲಿ 925 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ 369 ಸಾಗರದಿಂದ ಮರಕುಟಿಕದವರೆಗೆ ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ ದ್ವಿಪಥ ಸಂಪರ್ಕ ರಸ್ತೆಯ ಶಂಕು ಸ್ಥಾಪನೆ ನೆರವೇರಲಿದೆ.

ದೇವನಹಳ್ಳಿ: “ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ, ಗುರುತು!” – ರೈತ ಹೋರಾಟಕ್ಕೆ ದೇಶದ 30 ಸಂಘಟನೆಗಳ ಬೆಂಬಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...