Homeಕರ್ನಾಟಕಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

"ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ಆತಂಕ ಪಡಬೇಕಾಗಿಲ್ಲ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿದೆ"

- Advertisement -
- Advertisement -

ಸುಪ್ರೀಮ್ ಕೋರ್ಟ್‌ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಸಲಹೆ ನೀಡಿದ್ದಾರೆ.

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದಿದ್ದಾರೆ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಮ್ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು ಎಂದಿದ್ದಾರೆ.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.
ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಮ್ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ ಎಂದು ಸ್ಮರಿಸಿದ್ದಾರೆ.

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ನಾಳೆಯಿಂದ ಪ್ರೌಢಶಾಲೆಗಳು ಆರಂಭ: ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...