Homeಕರ್ನಾಟಕಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

"ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ಆತಂಕ ಪಡಬೇಕಾಗಿಲ್ಲ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿದೆ"

- Advertisement -
- Advertisement -

ಸುಪ್ರೀಮ್ ಕೋರ್ಟ್‌ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಸಲಹೆ ನೀಡಿದ್ದಾರೆ.

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದಿದ್ದಾರೆ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಮ್ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು ಎಂದಿದ್ದಾರೆ.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.
ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಮ್ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ ಎಂದು ಸ್ಮರಿಸಿದ್ದಾರೆ.

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ನಾಳೆಯಿಂದ ಪ್ರೌಢಶಾಲೆಗಳು ಆರಂಭ: ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...