Homeಕರ್ನಾಟಕ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ಬಿಜೆಪಿ ನಾಯಕರ ಹಳೆಯ ಹೇಳಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಿ ಬಿಜೆಪಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದಿರುವ ಕರ್ನಾಟಕ ಬಿಜೆಪಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ಹೇಗೆ ಜಾತಿಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹಾಗೂ ಸಚಿವ ಆರ್‌.ಅಶೋಕ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳ ಸ್ಕ್ರೀನ್‌ಶಾಟ್‌ ಹಾಕಿ, ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಪ್ರಶ್ನಿಸಿದ್ದಾರೆ.

“ಎಲ್ಲ ಜಾತಿ, ಸಮುದಾಯಗಳನ್ನು ಒಟ್ಟಾಗಿ ಕರೆದೋಯ್ದಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿಯವರ ಬಣ್ಣದ ಮಾತುಗಳಿಗೆ ಮರುಳಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿಯ ಉಪಚುನಾವಣೆಯಲ್ಲಿ ಮತ ನೀಡಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದನ್ನು ಪ್ರಶ್ನಿಸಿದ್ದ ಕರ್ನಾಟಕ ಬಿಜೆಪಿಯು ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಅವರನ್ನು ಕೆಣಕಿತ್ತು. “ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ” ಎಂದು ಕೇಳಿತ್ತು.

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದು #ಜಾತಿವಿಭಜಕಸಿದ್ದರಾಮಯ್ಯ ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಹೇಗೆ ಜಾತಿ ರಾಜಕೀಯವನ್ನು ಮಾಡುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಎಂದು ಕೇಳಿದ್ದಾರೆ.

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

“ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ?” ಎಂದು ಕೇಳಿರುವ ಸಿದ್ದರಾಮಯ್ಯ ಅವರು #ಬಿಜೆಪಿಜಾತಿಹಿಪಾಕ್ರಸಿ  ಹ್ಯಾಷ್‌ಟ್ಯಾಗ್ ಹಾಕಿದ್ದಾರೆ.


ಇದನ್ನೂ ಓದಿರಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...