Homeಕರ್ನಾಟಕ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ಬಿಜೆಪಿ ನಾಯಕರ ಹಳೆಯ ಹೇಳಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಿ ಬಿಜೆಪಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದಿರುವ ಕರ್ನಾಟಕ ಬಿಜೆಪಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ಹೇಗೆ ಜಾತಿಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹಾಗೂ ಸಚಿವ ಆರ್‌.ಅಶೋಕ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳ ಸ್ಕ್ರೀನ್‌ಶಾಟ್‌ ಹಾಕಿ, ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಪ್ರಶ್ನಿಸಿದ್ದಾರೆ.

“ಎಲ್ಲ ಜಾತಿ, ಸಮುದಾಯಗಳನ್ನು ಒಟ್ಟಾಗಿ ಕರೆದೋಯ್ದಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿಯವರ ಬಣ್ಣದ ಮಾತುಗಳಿಗೆ ಮರುಳಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿಯ ಉಪಚುನಾವಣೆಯಲ್ಲಿ ಮತ ನೀಡಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದನ್ನು ಪ್ರಶ್ನಿಸಿದ್ದ ಕರ್ನಾಟಕ ಬಿಜೆಪಿಯು ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಅವರನ್ನು ಕೆಣಕಿತ್ತು. “ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ” ಎಂದು ಕೇಳಿತ್ತು.

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದು #ಜಾತಿವಿಭಜಕಸಿದ್ದರಾಮಯ್ಯ ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಹೇಗೆ ಜಾತಿ ರಾಜಕೀಯವನ್ನು ಮಾಡುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಎಂದು ಕೇಳಿದ್ದಾರೆ.

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

“ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ?” ಎಂದು ಕೇಳಿರುವ ಸಿದ್ದರಾಮಯ್ಯ ಅವರು #ಬಿಜೆಪಿಜಾತಿಹಿಪಾಕ್ರಸಿ  ಹ್ಯಾಷ್‌ಟ್ಯಾಗ್ ಹಾಕಿದ್ದಾರೆ.


ಇದನ್ನೂ ಓದಿರಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...