Homeಕರ್ನಾಟಕ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ಬಿಜೆಪಿ ನಾಯಕರ ಹಳೆಯ ಹೇಳಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಿ ಬಿಜೆಪಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದಿರುವ ಕರ್ನಾಟಕ ಬಿಜೆಪಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ಹೇಗೆ ಜಾತಿಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹಾಗೂ ಸಚಿವ ಆರ್‌.ಅಶೋಕ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳ ಸ್ಕ್ರೀನ್‌ಶಾಟ್‌ ಹಾಕಿ, ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಪ್ರಶ್ನಿಸಿದ್ದಾರೆ.

“ಎಲ್ಲ ಜಾತಿ, ಸಮುದಾಯಗಳನ್ನು ಒಟ್ಟಾಗಿ ಕರೆದೋಯ್ದಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿಯವರ ಬಣ್ಣದ ಮಾತುಗಳಿಗೆ ಮರುಳಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿಯ ಉಪಚುನಾವಣೆಯಲ್ಲಿ ಮತ ನೀಡಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದನ್ನು ಪ್ರಶ್ನಿಸಿದ್ದ ಕರ್ನಾಟಕ ಬಿಜೆಪಿಯು ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಅವರನ್ನು ಕೆಣಕಿತ್ತು. “ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ” ಎಂದು ಕೇಳಿತ್ತು.

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದು #ಜಾತಿವಿಭಜಕಸಿದ್ದರಾಮಯ್ಯ ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಹೇಗೆ ಜಾತಿ ರಾಜಕೀಯವನ್ನು ಮಾಡುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಎಂದು ಕೇಳಿದ್ದಾರೆ.

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

“ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ?” ಎಂದು ಕೇಳಿರುವ ಸಿದ್ದರಾಮಯ್ಯ ಅವರು #ಬಿಜೆಪಿಜಾತಿಹಿಪಾಕ್ರಸಿ  ಹ್ಯಾಷ್‌ಟ್ಯಾಗ್ ಹಾಕಿದ್ದಾರೆ.


ಇದನ್ನೂ ಓದಿರಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...