Homeಕರ್ನಾಟಕ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ಬಿಜೆಪಿ ನಾಯಕರ ಹಳೆಯ ಹೇಳಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಿ ಬಿಜೆಪಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದಿರುವ ಕರ್ನಾಟಕ ಬಿಜೆಪಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ಹೇಗೆ ಜಾತಿಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹಾಗೂ ಸಚಿವ ಆರ್‌.ಅಶೋಕ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳ ಸ್ಕ್ರೀನ್‌ಶಾಟ್‌ ಹಾಕಿ, ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಪ್ರಶ್ನಿಸಿದ್ದಾರೆ.

“ಎಲ್ಲ ಜಾತಿ, ಸಮುದಾಯಗಳನ್ನು ಒಟ್ಟಾಗಿ ಕರೆದೋಯ್ದಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿಯವರ ಬಣ್ಣದ ಮಾತುಗಳಿಗೆ ಮರುಳಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿಯ ಉಪಚುನಾವಣೆಯಲ್ಲಿ ಮತ ನೀಡಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದನ್ನು ಪ್ರಶ್ನಿಸಿದ್ದ ಕರ್ನಾಟಕ ಬಿಜೆಪಿಯು ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಅವರನ್ನು ಕೆಣಕಿತ್ತು. “ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ” ಎಂದು ಕೇಳಿತ್ತು.

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದು #ಜಾತಿವಿಭಜಕಸಿದ್ದರಾಮಯ್ಯ ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಹೇಗೆ ಜಾತಿ ರಾಜಕೀಯವನ್ನು ಮಾಡುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಎಂದು ಕೇಳಿದ್ದಾರೆ.

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

“ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ?” ಎಂದು ಕೇಳಿರುವ ಸಿದ್ದರಾಮಯ್ಯ ಅವರು #ಬಿಜೆಪಿಜಾತಿಹಿಪಾಕ್ರಸಿ  ಹ್ಯಾಷ್‌ಟ್ಯಾಗ್ ಹಾಕಿದ್ದಾರೆ.


ಇದನ್ನೂ ಓದಿರಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...