Homeಮುಖಪುಟಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಡಿಸೆಂಬರ್ ಅಂತ್ಯದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಜೆಜೆಪಿ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದ್ದವು.

- Advertisement -
- Advertisement -

ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ತೊರೆಯುತ್ತೇನೆ ಎಂಬ ತಮ್ಮ ಆಶ್ವಾಸನೆಯನ್ನು ಹರಿಯಾಣ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಖಟ್ಟರ್ ಗುರುವಾರವು ಪುನರುಚ್ಛರಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸುತ್ತಿರುವ ರಾಜ್ಯದ ರೈತರಿಂದ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಖಟ್ಟರ್, ಐದು ಸ್ಥಳೀಯ ಚುನಾವಣೆಯಲ್ಲಿ ಮೂರನ್ನು ಸೋತ ನಂತರ ಈ ಹೇಳಿಕೆ ನೀಡಿದ್ದಾರೆ.

ಹರಿಯಾಣದಲ್ಲಿ ಎಂಎಸ್‌ಪಿ ಮುಂದುವರಿಕೆಗೆ ನಾವು ಬದ್ಧರಾಗಿದ್ದೇವೆ. ಯಾರಾದರೂ ಎಂಎಸ್‌ಪಿ ವ್ಯವಸ್ಥೆಯನ್ನು ಕೊನೆಗಾಣಿಸಲು ಪ್ರಯತ್ನಿಸಿದರೆ ತಾನು ರಾಜಕೀಯ ತೊರೆಯುತ್ತೇನೆ ಎಂದು ಅವರು ಹೇಳಿದ್ದಾಗಿ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಈ ಹೇಳಿಕೆಯನ್ನು ಸ್ಥಳೀಯ ಸಂಸ್ಥೆ ಚುನಾವಣೆಗೂ ಮೊದಲು ಕೂಡಾ ಖಟ್ಟರ್ ನೀಡಿದ್ದರು. ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕೂಡ, ಎಂಎಸ್‌ಪಿ ವ್ಯವಸ್ಥೆಯನ್ನು ರದ್ದು ಮಾಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರಿಗೆ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೆ ಎಂಎಸ್‌ಪಿ ಉಳಿಸಿಕೊಳ್ಳಲು ಯತ್ನಿಸುತ್ತೇನೆ. ಅದು ಸಾಧ್ಯವಾಗದೇ ಹೋದರೆ ಅಂದೇ ಹುದ್ದೆಯಿಂದ ಕೆಳಗಿಳಿಯುತ್ತೇನೆ ಎಂದು ಅವರು ಹೇಳುತ್ತ ಬಂದಿದ್ದರು.

ಮೂರರಲ್ಲಿ ಎರಡು ಸೋಲು ಹಿಸಾರ್‌ನ ಉಕಲಾನಾ ಮತ್ತು ರೆವರಿಯ ಧರುಹೆರಾಗಳಲ್ಲಿ ಘಟಿಸಿದ್ದು, ಇವೆರಡೂ ದುಷ್ಯಂತ್ ಅವರ ಪ್ರಾಬಲ್ಯದ ಪ್ರದೇಶಗಳಾಗಿವೆ. ಬಿಜೆಪಿ ಮತ್ತು ಮಿತ್ರಪಕ್ಷ ಜೆಜೆಪಿ ಸೊನಾಪತ್ ಮತ್ತು ಅಂಬಾಲಾದಲ್ಲೂ ಚುನಾವಣೆಯಲ್ಲಿ ಸೋಲು ಅನುಭವಿಸಿವೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಅಂಬಾಲಾದ ಬಿಜೆಪಿ ಶಾಸಕ ಅಸೀಮ್ ಗೊಯಲ್, ಈ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು ಎಂದು ಬುಧವಾರ ಹೇಳಿದ್ದಲ್ಲದೇ, ರೈತರ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಒಪ್ಪಿಕೊಂಡಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ವಿಪಕ್ಷದವರು ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ವಿಪಕ್ಷಗಳ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಅವರು ಹೊಂದಿದ್ದಾರೆ ಎಂದು ಅಸೀಮ್ ಹೇಳಿದ್ದರು.

ಹೊಸ ಕಾನೂನುಗಳಿಂದ ದೊಡ್ಡ ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಬೆಳೆ ಮಾರುಕಟ್ಟೆಗಳನ್ನು ನಾಶ ಮಾಡಿ ತಮ್ಮನ್ನು ಶೋಷಿಸಲಿವೆ ಎಂದು ರೈತರು ಆತಂಕಗೊಂಡಿದ್ದಾರೆ. ಹೊಸ ಕಾಯ್ದೆಗಳು ಈಗಿರುವ ವ್ಯವಸ್ಥೆಯನ್ನು ಕೊನೆಗಾಣಿಸುವ ಉದ್ದೇಶ ಹೊಂದಿಲ್ಲ, ಬದಲಿಗೆ ರೈತರಿಗೆ ತಮ್ಮ ಬೆಳೆ ಮಾರಲು ಹೆಚ್ಚಿನ ಅವಕಾಶ ನೀಡುತ್ತವೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸುತ್ತ ಬಂದಿದೆ. ಬುಧವಾರ ಕೇಂದ್ರ ಮತ್ತು ರೈತರ ನಡುವೆ ಆರನೇ ಸುತ್ತಿನ ಮಾತುಕತೆ ಯಶಸ್ವಿಯಾಗಿಲ್ಲ.

ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....