Homeಮುಖಪುಟಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಡಿಸೆಂಬರ್ ಅಂತ್ಯದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಜೆಜೆಪಿ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದ್ದವು.

- Advertisement -
- Advertisement -

ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ತೊರೆಯುತ್ತೇನೆ ಎಂಬ ತಮ್ಮ ಆಶ್ವಾಸನೆಯನ್ನು ಹರಿಯಾಣ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಖಟ್ಟರ್ ಗುರುವಾರವು ಪುನರುಚ್ಛರಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸುತ್ತಿರುವ ರಾಜ್ಯದ ರೈತರಿಂದ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಖಟ್ಟರ್, ಐದು ಸ್ಥಳೀಯ ಚುನಾವಣೆಯಲ್ಲಿ ಮೂರನ್ನು ಸೋತ ನಂತರ ಈ ಹೇಳಿಕೆ ನೀಡಿದ್ದಾರೆ.

ಹರಿಯಾಣದಲ್ಲಿ ಎಂಎಸ್‌ಪಿ ಮುಂದುವರಿಕೆಗೆ ನಾವು ಬದ್ಧರಾಗಿದ್ದೇವೆ. ಯಾರಾದರೂ ಎಂಎಸ್‌ಪಿ ವ್ಯವಸ್ಥೆಯನ್ನು ಕೊನೆಗಾಣಿಸಲು ಪ್ರಯತ್ನಿಸಿದರೆ ತಾನು ರಾಜಕೀಯ ತೊರೆಯುತ್ತೇನೆ ಎಂದು ಅವರು ಹೇಳಿದ್ದಾಗಿ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಈ ಹೇಳಿಕೆಯನ್ನು ಸ್ಥಳೀಯ ಸಂಸ್ಥೆ ಚುನಾವಣೆಗೂ ಮೊದಲು ಕೂಡಾ ಖಟ್ಟರ್ ನೀಡಿದ್ದರು. ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕೂಡ, ಎಂಎಸ್‌ಪಿ ವ್ಯವಸ್ಥೆಯನ್ನು ರದ್ದು ಮಾಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರಿಗೆ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೆ ಎಂಎಸ್‌ಪಿ ಉಳಿಸಿಕೊಳ್ಳಲು ಯತ್ನಿಸುತ್ತೇನೆ. ಅದು ಸಾಧ್ಯವಾಗದೇ ಹೋದರೆ ಅಂದೇ ಹುದ್ದೆಯಿಂದ ಕೆಳಗಿಳಿಯುತ್ತೇನೆ ಎಂದು ಅವರು ಹೇಳುತ್ತ ಬಂದಿದ್ದರು.

ಮೂರರಲ್ಲಿ ಎರಡು ಸೋಲು ಹಿಸಾರ್‌ನ ಉಕಲಾನಾ ಮತ್ತು ರೆವರಿಯ ಧರುಹೆರಾಗಳಲ್ಲಿ ಘಟಿಸಿದ್ದು, ಇವೆರಡೂ ದುಷ್ಯಂತ್ ಅವರ ಪ್ರಾಬಲ್ಯದ ಪ್ರದೇಶಗಳಾಗಿವೆ. ಬಿಜೆಪಿ ಮತ್ತು ಮಿತ್ರಪಕ್ಷ ಜೆಜೆಪಿ ಸೊನಾಪತ್ ಮತ್ತು ಅಂಬಾಲಾದಲ್ಲೂ ಚುನಾವಣೆಯಲ್ಲಿ ಸೋಲು ಅನುಭವಿಸಿವೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಅಂಬಾಲಾದ ಬಿಜೆಪಿ ಶಾಸಕ ಅಸೀಮ್ ಗೊಯಲ್, ಈ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು ಎಂದು ಬುಧವಾರ ಹೇಳಿದ್ದಲ್ಲದೇ, ರೈತರ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಒಪ್ಪಿಕೊಂಡಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ವಿಪಕ್ಷದವರು ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ವಿಪಕ್ಷಗಳ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಅವರು ಹೊಂದಿದ್ದಾರೆ ಎಂದು ಅಸೀಮ್ ಹೇಳಿದ್ದರು.

ಹೊಸ ಕಾನೂನುಗಳಿಂದ ದೊಡ್ಡ ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಬೆಳೆ ಮಾರುಕಟ್ಟೆಗಳನ್ನು ನಾಶ ಮಾಡಿ ತಮ್ಮನ್ನು ಶೋಷಿಸಲಿವೆ ಎಂದು ರೈತರು ಆತಂಕಗೊಂಡಿದ್ದಾರೆ. ಹೊಸ ಕಾಯ್ದೆಗಳು ಈಗಿರುವ ವ್ಯವಸ್ಥೆಯನ್ನು ಕೊನೆಗಾಣಿಸುವ ಉದ್ದೇಶ ಹೊಂದಿಲ್ಲ, ಬದಲಿಗೆ ರೈತರಿಗೆ ತಮ್ಮ ಬೆಳೆ ಮಾರಲು ಹೆಚ್ಚಿನ ಅವಕಾಶ ನೀಡುತ್ತವೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸುತ್ತ ಬಂದಿದೆ. ಬುಧವಾರ ಕೇಂದ್ರ ಮತ್ತು ರೈತರ ನಡುವೆ ಆರನೇ ಸುತ್ತಿನ ಮಾತುಕತೆ ಯಶಸ್ವಿಯಾಗಿಲ್ಲ.

ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...