Homeಮುಖಪುಟಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಡಿಸೆಂಬರ್ ಅಂತ್ಯದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಜೆಜೆಪಿ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದ್ದವು.

- Advertisement -
- Advertisement -

ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ತೊರೆಯುತ್ತೇನೆ ಎಂಬ ತಮ್ಮ ಆಶ್ವಾಸನೆಯನ್ನು ಹರಿಯಾಣ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಖಟ್ಟರ್ ಗುರುವಾರವು ಪುನರುಚ್ಛರಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸುತ್ತಿರುವ ರಾಜ್ಯದ ರೈತರಿಂದ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಖಟ್ಟರ್, ಐದು ಸ್ಥಳೀಯ ಚುನಾವಣೆಯಲ್ಲಿ ಮೂರನ್ನು ಸೋತ ನಂತರ ಈ ಹೇಳಿಕೆ ನೀಡಿದ್ದಾರೆ.

ಹರಿಯಾಣದಲ್ಲಿ ಎಂಎಸ್‌ಪಿ ಮುಂದುವರಿಕೆಗೆ ನಾವು ಬದ್ಧರಾಗಿದ್ದೇವೆ. ಯಾರಾದರೂ ಎಂಎಸ್‌ಪಿ ವ್ಯವಸ್ಥೆಯನ್ನು ಕೊನೆಗಾಣಿಸಲು ಪ್ರಯತ್ನಿಸಿದರೆ ತಾನು ರಾಜಕೀಯ ತೊರೆಯುತ್ತೇನೆ ಎಂದು ಅವರು ಹೇಳಿದ್ದಾಗಿ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಈ ಹೇಳಿಕೆಯನ್ನು ಸ್ಥಳೀಯ ಸಂಸ್ಥೆ ಚುನಾವಣೆಗೂ ಮೊದಲು ಕೂಡಾ ಖಟ್ಟರ್ ನೀಡಿದ್ದರು. ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕೂಡ, ಎಂಎಸ್‌ಪಿ ವ್ಯವಸ್ಥೆಯನ್ನು ರದ್ದು ಮಾಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರಿಗೆ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೆ ಎಂಎಸ್‌ಪಿ ಉಳಿಸಿಕೊಳ್ಳಲು ಯತ್ನಿಸುತ್ತೇನೆ. ಅದು ಸಾಧ್ಯವಾಗದೇ ಹೋದರೆ ಅಂದೇ ಹುದ್ದೆಯಿಂದ ಕೆಳಗಿಳಿಯುತ್ತೇನೆ ಎಂದು ಅವರು ಹೇಳುತ್ತ ಬಂದಿದ್ದರು.

ಮೂರರಲ್ಲಿ ಎರಡು ಸೋಲು ಹಿಸಾರ್‌ನ ಉಕಲಾನಾ ಮತ್ತು ರೆವರಿಯ ಧರುಹೆರಾಗಳಲ್ಲಿ ಘಟಿಸಿದ್ದು, ಇವೆರಡೂ ದುಷ್ಯಂತ್ ಅವರ ಪ್ರಾಬಲ್ಯದ ಪ್ರದೇಶಗಳಾಗಿವೆ. ಬಿಜೆಪಿ ಮತ್ತು ಮಿತ್ರಪಕ್ಷ ಜೆಜೆಪಿ ಸೊನಾಪತ್ ಮತ್ತು ಅಂಬಾಲಾದಲ್ಲೂ ಚುನಾವಣೆಯಲ್ಲಿ ಸೋಲು ಅನುಭವಿಸಿವೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಅಂಬಾಲಾದ ಬಿಜೆಪಿ ಶಾಸಕ ಅಸೀಮ್ ಗೊಯಲ್, ಈ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು ಎಂದು ಬುಧವಾರ ಹೇಳಿದ್ದಲ್ಲದೇ, ರೈತರ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಒಪ್ಪಿಕೊಂಡಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ವಿಪಕ್ಷದವರು ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ವಿಪಕ್ಷಗಳ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಅವರು ಹೊಂದಿದ್ದಾರೆ ಎಂದು ಅಸೀಮ್ ಹೇಳಿದ್ದರು.

ಹೊಸ ಕಾನೂನುಗಳಿಂದ ದೊಡ್ಡ ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಬೆಳೆ ಮಾರುಕಟ್ಟೆಗಳನ್ನು ನಾಶ ಮಾಡಿ ತಮ್ಮನ್ನು ಶೋಷಿಸಲಿವೆ ಎಂದು ರೈತರು ಆತಂಕಗೊಂಡಿದ್ದಾರೆ. ಹೊಸ ಕಾಯ್ದೆಗಳು ಈಗಿರುವ ವ್ಯವಸ್ಥೆಯನ್ನು ಕೊನೆಗಾಣಿಸುವ ಉದ್ದೇಶ ಹೊಂದಿಲ್ಲ, ಬದಲಿಗೆ ರೈತರಿಗೆ ತಮ್ಮ ಬೆಳೆ ಮಾರಲು ಹೆಚ್ಚಿನ ಅವಕಾಶ ನೀಡುತ್ತವೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸುತ್ತ ಬಂದಿದೆ. ಬುಧವಾರ ಕೇಂದ್ರ ಮತ್ತು ರೈತರ ನಡುವೆ ಆರನೇ ಸುತ್ತಿನ ಮಾತುಕತೆ ಯಶಸ್ವಿಯಾಗಿಲ್ಲ.

ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...