Homeಮುಖಪುಟರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ ಮತ್ತು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳ ನಡುವೆಯೇ ಪ್ರಶಾಂತ್ ಕಿಶೋರ್ ತಮ್ಮ ಮಾಜಿ ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ನಿತೀಶ್ ಕುಮಾರ್ 2020 ರಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ ನಂತರ ಮೊದಲ ಬಾರಿಗೆ ಇಬ್ಬರೂ ಭೇಟಿಯಾಗಿದ್ದಾರೆ. ದೆಹಲಿಯಲ್ಲಿರುವ ಮುಖ್ಯಮಂತ್ರಿಯ ಅಧಿಕೃತ ಮನೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದ ಅವರು, ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇಬ್ಬರ ಭೇಟಿ ಬಗ್ಗೆ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರಿಗೆ ಆಯೋಜಿಸಿದ ಔತಣಕೂಟದಲ್ಲಿ ಭೇಟಿಯಾಗಿದ್ದು, ಇದು ಪ್ರಶಾಂತ್ ಕಿಶೋರ್ ಅವರೊಂದಿಗೆ ಹಳೆಯ ಬಾಂಧವ್ಯ, ಇದಕ್ಕೆ ಬೇರೆಯ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಕ್‌ ಹಗರಣ: ಸಿಇಒ ಚಿತ್ರಾ ರಾಮಕೃಷ್ಣರನ್ನು ಕೈಗೊಂಬೆ ಮಾಡಿಕೊಂಡಿದ್ದ ‘ಯೋಗಿ’!

“ಇದು ಒಂದು “ಸೌಜನ್ಯದ ಭೇಟಿ”. ನಿತೀಶ್ ಕುಮಾರ್ ಅವರಿಗೆ ಓಮಿಕ್ರಾನ್ ಸೋಂಕು ತಗುಲಿದಾಗ, ಅವರ ಆರೋಗ್ಯದ ಬಗ್ಗೆ ಕೇಳಲು ಅವರಿಗೆ ಫೋನ್ ಮಾಡಿದ್ದೆ. ಆಗ ನಿತೀಶ್ ಕುಮಾರ್ ಭೇಟಿಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ನಿನ್ನೆ ಇದು ಸಾಕಾರಗೊಂಡಿದೆ” ಎಂದು ಪ್ರಶಾಂತ್ ಕಿಶೋರ್‌ ಹೇಳಿದ್ದಾರೆ. ಜೊತೆಗೆ ತಾವು ರಾಜಕೀಯವಾಗಿ ಅವರು ಪರಸ್ಪರ ಭಿನ್ನ ದಾರಿಯಲ್ಲಿರುವುದಾಗಿ ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಗೆಲುವು ಸಾಧಿಸಲು ಕಾರಣರಾದ ರಾಜಕೀಯ  ತಂತ್ರಜ್ಞ ಪ್ರಶಾಂತ್ ಕಿಶೋರ್‌, ಸದ್ಯ 2024 ರ ರಾಷ್ಟ್ರೀಯ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ ಜೊತೆಗಿನ ಕಿಶೋರ್ ಅವರ ನಂಟು ತಿಂಗಳೊಳಗೆ ಹದಗೆಟ್ಟಿತ್ತು. ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಆದರೆ ಇತ್ತೀಚಿನ ಸಂದರ್ಶನಗಳಲ್ಲಿ, ಪ್ರಶಾಂತ್ ಕಿಶೋರ್ ಅವರು ನಿತೀಶ್ ಕುಮಾರ್‌ ‍ಅವರ ಸೌಹಾರ್ದ ಸಂಬಂಧದ ಬಗ್ಗೆ ಮಾತನಾಡಿದ್ದು, ಅವರು ಮತ್ತೆ ಸಂಪರ್ಕಿಸಲು ಬಯಸುವ ಕೆಲವರಲ್ಲಿ ನಿತೀಶ್ ಕುಮಾರ್‌ ಕೂಡ ಒಬ್ಬರು ಎಂದು ಹೆಸರಿಸಿದ್ದಾರೆ.


ಇದನ್ನೂ ಓದಿ: ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...