Homeಚಳವಳಿಕಾರ್ಮಿಕರ ನಡುವೆ ಅಸ್ಮಿತೆ ರಾಜಕೀಯ ಬಿತ್ತಿ ಒಡೆದಿದ್ದಾರೆ: ಮಾನಸಯ್ಯ

ಕಾರ್ಮಿಕರ ನಡುವೆ ಅಸ್ಮಿತೆ ರಾಜಕೀಯ ಬಿತ್ತಿ ಒಡೆದಿದ್ದಾರೆ: ಮಾನಸಯ್ಯ

- Advertisement -
- Advertisement -

ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತಿ ಕಾರ್ಮಿಕರನ್ನು ಒಡೆಯಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಎಚ್ಚರ ವಹಿಸಬೇಕು ಎಂದು ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ ರಾಜ್ಯಾಧ್ಯಕ್ಷ ಆರ್‌.ಮಾನಸಯ್ಯ ತಿಳಿಸಿದರು.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ” ಎಂದು ಎಚ್ಚರಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿರಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಬಂಡವಾಳಶಾಹಿಗಳ ಪರವಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿಂತಿದೆ. 44 ಕಾರ್ಮಿಕ ಕಾಯ್ದೆಗಳನ್ನು ತೆರವುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಂದಿದ್ದಾರೆ. ಈ ಸಂಹಿತೆಗಳಲ್ಲಿ ವೇತನ ಭದ್ರತೆ, ಆರೋಗ್ಯ ಸುರಕ್ಷತೆ, ಜೀವನ ಭದ್ರತೆ ಇಲ್ಲ. ಮಾಲಿಕರ, ಅಧಿಕಾರಿಗಳ, ಮೇಲ್ಜಾತಿಗಳ, ಶ್ರೀಮಂತರ ಸುರಕ್ಷತೆ ಮಾತ್ರ ಇದೆ. ಹೀಗಾಗಿ ಇದರ ವಿರುದ್ಧ ಒಂದು ದೊಡ್ಡ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ಸಮಾವೇಶದ ಉದ್ಘಾಟನಾ ಭಾಷಣ ಮಾಡಿದ ಹೈಕೋರ್ಟ್ ಹಿರಿಯ ವಕೀಲರಾದ ಬಾಲನ್‌, “ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ ಎಂದು ವಿವರಿಸಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ ಎಂದು ಚಾಟಿ ಬೀಸಿದರು.

ಇದನ್ನೂ ಓದಿರಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ವರದರಾಜೇಂದ್ರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಹರಿಯಾಣದ ಜನಸಂಘರ್ಷ ಮಂಚ್‌ನ ಸುದೇಶ್‌ಕುಮಾರಿ, ಆಂಧ್ರಪ್ರದೇಶದ ಐಎಫ್‌‌ಟಿಯು ಸಂಘಟನೆಯ ಎಸ್.ವೆಂಕಟೇಶ್ವರ ರಾವ್‌, ಉತ್ತರಾಖಾಂಡ್‌ನ ಇಂಕಿಲಾಬಿ ಮಜ್ದೂರ್‌ ಕೇಂದ್ರದ ಕೈಲಾಶ್‌, ಬಿಹಾರದ ಐಎಫ್‌ಟಿಯು ಸಂಘಟನೆಯ ಸಿದ್ಧಾಂತ್‌ ವೇದಿಕೆಯಲ್ಲಿ ಹಾಜರಿದ್ದರು. ಕಾರ್ಮಿಕ ಇಲಾಖೆಯ ಡಿಎಲ್‌ಸಿ ರವಿಕುಮಾರ್‌ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಮಿಕರ ಹಕ್ಕೋತ್ತಾಯಗಳನ್ನು ಸ್ವೀಕರಿಸಿದರು.


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...