Homeಚಳವಳಿಕಾರ್ಮಿಕರ ನಡುವೆ ಅಸ್ಮಿತೆ ರಾಜಕೀಯ ಬಿತ್ತಿ ಒಡೆದಿದ್ದಾರೆ: ಮಾನಸಯ್ಯ

ಕಾರ್ಮಿಕರ ನಡುವೆ ಅಸ್ಮಿತೆ ರಾಜಕೀಯ ಬಿತ್ತಿ ಒಡೆದಿದ್ದಾರೆ: ಮಾನಸಯ್ಯ

- Advertisement -
- Advertisement -

ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತಿ ಕಾರ್ಮಿಕರನ್ನು ಒಡೆಯಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಎಚ್ಚರ ವಹಿಸಬೇಕು ಎಂದು ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ ರಾಜ್ಯಾಧ್ಯಕ್ಷ ಆರ್‌.ಮಾನಸಯ್ಯ ತಿಳಿಸಿದರು.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ” ಎಂದು ಎಚ್ಚರಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿರಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಬಂಡವಾಳಶಾಹಿಗಳ ಪರವಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿಂತಿದೆ. 44 ಕಾರ್ಮಿಕ ಕಾಯ್ದೆಗಳನ್ನು ತೆರವುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಂದಿದ್ದಾರೆ. ಈ ಸಂಹಿತೆಗಳಲ್ಲಿ ವೇತನ ಭದ್ರತೆ, ಆರೋಗ್ಯ ಸುರಕ್ಷತೆ, ಜೀವನ ಭದ್ರತೆ ಇಲ್ಲ. ಮಾಲಿಕರ, ಅಧಿಕಾರಿಗಳ, ಮೇಲ್ಜಾತಿಗಳ, ಶ್ರೀಮಂತರ ಸುರಕ್ಷತೆ ಮಾತ್ರ ಇದೆ. ಹೀಗಾಗಿ ಇದರ ವಿರುದ್ಧ ಒಂದು ದೊಡ್ಡ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ಸಮಾವೇಶದ ಉದ್ಘಾಟನಾ ಭಾಷಣ ಮಾಡಿದ ಹೈಕೋರ್ಟ್ ಹಿರಿಯ ವಕೀಲರಾದ ಬಾಲನ್‌, “ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ ಎಂದು ವಿವರಿಸಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ ಎಂದು ಚಾಟಿ ಬೀಸಿದರು.

ಇದನ್ನೂ ಓದಿರಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ವರದರಾಜೇಂದ್ರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಹರಿಯಾಣದ ಜನಸಂಘರ್ಷ ಮಂಚ್‌ನ ಸುದೇಶ್‌ಕುಮಾರಿ, ಆಂಧ್ರಪ್ರದೇಶದ ಐಎಫ್‌‌ಟಿಯು ಸಂಘಟನೆಯ ಎಸ್.ವೆಂಕಟೇಶ್ವರ ರಾವ್‌, ಉತ್ತರಾಖಾಂಡ್‌ನ ಇಂಕಿಲಾಬಿ ಮಜ್ದೂರ್‌ ಕೇಂದ್ರದ ಕೈಲಾಶ್‌, ಬಿಹಾರದ ಐಎಫ್‌ಟಿಯು ಸಂಘಟನೆಯ ಸಿದ್ಧಾಂತ್‌ ವೇದಿಕೆಯಲ್ಲಿ ಹಾಜರಿದ್ದರು. ಕಾರ್ಮಿಕ ಇಲಾಖೆಯ ಡಿಎಲ್‌ಸಿ ರವಿಕುಮಾರ್‌ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಮಿಕರ ಹಕ್ಕೋತ್ತಾಯಗಳನ್ನು ಸ್ವೀಕರಿಸಿದರು.


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...